Advertisement

Tag: ಸಿನಿಮಾ

ರಾಮ್ ಪ್ರಕಾಶ್ ರೈ ಕೆ. ಹೊಸ ಸರಣಿ “ಸಿನಿ ಪನೋರಮಾ” ಇಂದಿನಿಂದ

ಯಾರ ದೃಷ್ಟಿಗೂ ಬೀಳದಂತೆ ಹೋಟೆಲಿನ ಹಿಂಬಾಗಿಲ ಬಳಿ ಕುಳಿತು ಆಕೆ ಬಿರಿಯಾನಿಯ ಚಪ್ಪರಿಸುತ್ತಿದ್ದಳು, ಅದರ ಕಾಲಾತೀತ ಪ್ರೇಯಸಿ ಮೊಸರು ಬಜ್ಜಿಯ ಒಂಚೂರು ಹೆಚ್ಚೆನಿಸುವಷ್ಟು ಸೇರಿಸಿಕೊಂಡು. ಅಲ್ಲೇ ಆಗಿದ್ದು ಅವರ ಪರಿಣಯದ ಉದ್ಘಾಟನೆ. ಮುಂದೆ ಆತ ಅವಳಿಗೆ ತನ್ನದೇ ಶೈಲಿಯ ಬಿರಿಯಾನಿಯ ಮಾಡಿ ತಿನ್ನಿಸುತ್ತಿದ್ದರೆ, ಅವಳು ಆತನೆಡೆಗೆ ತನ್ನ ಚಂದಿರ ಮೂಡುವ ಕೆನ್ನೆಗಳ ಒಳಸೆಳೆದು ತುಟಿಯಂಚಿನಲ್ಲಿ ನಗು ಚೆಲ್ಲುತ್ತಾ ಪ್ರೀತಿಯ ಭಾವವ ತಣ್ಣಗೆ ಧಾರೆಯೆರೆಯುತ್ತಿದ್ದಳು.
ರಾಮ್ ಪ್ರಕಾಶ್ ರೈ ಕೆ. ಬರೆಯುವ ಸಿನಿಮಾಗಳ ಕುರಿತ “ಸಿನಿ ಪನೋರಮಾ” ಸರಣಿ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಭಾವಗಳ ‘ತೇರ’ ಯಾತ್ರೆ….: ರಾಮ್ ಪ್ರಕಾಶ್ ರೈ ಕೆ ಬರಹ

ಜೈಲಿನ ಕೈದಿಯೊಬ್ಬರು “ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿದ್ದೇವೆ” ಎಂದರೆ, ಇನ್ನೊಮ್ಮೆ “ಜೈಲು ಹೆರಿಗೆ ಮನೆಯಂತೆ, ಇಲ್ಲಿಗೆ ಬಂದವರು ಹೊಸ ಹುಟ್ಟು ಪಡೆದೇ ಹೊರಹೋಗುವುದು” ಎನ್ನುತ್ತಾರೆ. ಸುಖದ ಬದುಕು ಸಾಗುತ್ತಿರಬೇಕಾದರೆ ಹಿರಿಯ ಮಹಿಳೆಗೆ ಬಸ್ಸಿನ ಸೀಟು ಬಿಟ್ಟುಕೊಡುವ ಪ್ರಿಯ, ಕಷ್ಟ ಕಾಲಿಟ್ಟಾಗ ಆ ಮಹಿಳೆಯ ಕಡೆಗೆ ನಿರ್ಭಾವುಕ ನೋಟವನ್ನು ಬೀರುವ ಪರಿ, ಆ ಬದಲಾವಣೆಯಂತೂ ಮಾನವ ಬದುಕಿನ ವಾಸ್ತವ ನಡುವಳಿಕೆಗೆ ಹಿಡಿದ ದರ್ಪಣದಂತೆ ಕಾಣುತ್ತದೆ.
ಹೇಮಂತ್‌ ರಾವ್‌ ನಿರ್ದೇಶನದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಕುರಿತು ರಾಮ್ ಪ್ರಕಾಶ್ ರೈ ಕೆ ಬರಹ

Read More

ಕಾಗೆ ಕಾರುಣ್ಯದ ಕಣ್ಣು: ಬರಗೂರು ರಾಮಚಂದ್ರಪ್ಪ ಕೃತಿಯ ಒಂದು ಬರಹ

ಇನ್ನೊಂದು ವಿಷಯವನ್ನೂ ಇಲ್ಲಿ ಹೇಳಬೇಕು. ಚಿತ್ರೀಕರಣಕ್ಕೆಂದು ನಾನು ಆಯ್ಕೆ ಮಾಡಿಕೊಂಡ ಸ್ಥಳಗಳು ಸಾಂಪ್ರದಾಯಿಕ ರಮಣೀಯ ಸ್ಥಳಗಳಲ್ಲ. ಅಂದರೆ ಹಸಿರು, ನದಿ ತೀರ ಇತ್ಯಾದಿಗಳಿಂದ ಕೂಡಿದ ಸ್ಥಳಗಳಲ್ಲ. ಬಯಲು ಸೀಮೆಯ ಬೆಟ್ಟ, ಗುಡ್ಡ, ಹಸಿರಿಲ್ಲದೆ ಒಣಗಿದ ಪರಿಸರಗಳನ್ನು ಆಯ್ಕೆ ಮಾಡಿಕೊಂಡೆ. ಪ್ರಕೃತಿಯಲ್ಲಿರುವ ಸಮಸ್ತವೂ ಮುಖ್ಯವೆಂಬ ತಾತ್ವಿಕತೆ ನನ್ನದು. ನನ್ನ ಸಿನಿಮಾ ಕತೆಗಳು ಬಹುಪಾಲು ನಮ್ಮ ತುಮಕೂರು ಜಿಲ್ಲೆಯ ಸಿರಾ, ಮಧುಗಿರಿ, ಪಾವಗಡ, ದೇವರಾಯನ ದುರ್ಗ, ಚಿತ್ರದುರ್ಗ – ಇವೇ ಮುಂತಾದ ವಲಯಗಳಿಗೆ ಹೊಂದುತ್ತಿದ್ದ ವಸ್ತುವನ್ನು ಒಳಗೊಂಡಿದ್ದವು.
ಬರಗೂರು ರಾಮಚಂದ್ರಪ್ಪ ಅವರ “ಕಾಗೆ ಕಾರುಣ್ಯದ ಕಣ್ಣು” ಆಯ್ದ ಅನುಭವಗಳ ಕಥನದ ಒಂದು ಬರಹ ನಿಮ್ಮ ಓದಿಗೆ

Read More

ಹಲವು ಹೃದಯಗಳ ಮುಟ್ಟಿದ ಚಲನಚಿತ್ರೋತ್ಸವ..

ಮೂರನೇ ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿರುವ ʻಫೋಟೋʼ ಚಿತ್ರದ್ದು ಬೇರೆಯದೇ ರೀತಿಯ ಛಾಪು. ಚಿತ್ರೋತ್ಸವದ ಎರಡನೇ ದಿನ 4ನೇ ಪರದೆಯಲ್ಲಿ ಮೊದಲ ಪ್ರದರ್ಶನ ಕಂಡ ಈ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿದು ತುಂಬಿದ್ದರು. ಆಸನಗಳು ಸಾಲದಕ್ಕೆ ಚಿತ್ರಮಂದಿರದ ನಿಯಮವನ್ನೂ ಮುರಿದು ಮೆಟ್ಟಿಲುಗಳ ಮೇಲೆ ಕುಳಿತು ಸಹ ಹಲವರು ಚಿತ್ತ ಬದಲಿಸದೇ ನೆಟ್ಟ ದೃಷ್ಟಿಯಲ್ಲೇ ಚಿತ್ರವನ್ನು ವೀಕ್ಷಿಸಿದರು.
‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ನೋಡಿದ ಸಿನಿಮಾಗಳ ಕುರಿತು ಕುಮಾರ ಬೇಂದ್ರೆ ಬರಹ

Read More

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ