Advertisement

Tag: ಸುಕನ್ಯಾ ಕನಾರಳ್ಳಿ

ಮನೆಯೊಳಗಿನ-ಈಕೆ  ಮತ್ತು  ಹೊರಗಿನ-ಆಕೆ!: ಸುಕನ್ಯಾ ಕನಾರಳ್ಳಿ ಅಂಕಣ

ಮನೆಯೊಳಗಿನ ಈಕೆ ಮನೆಯಿಂದ ಆಚೆ ಹೋಗಿ ದುಡಿದರೂ ಸಹ ಮನೆಯನ್ನು ನಿಭಾಯಿಸುವುದು ಕೊನೆಗೂ ಈಕೆಯ ಹೊಣೆಯಾಗಿ ಉಳಿದುಕೊಂಡಿದೆ ಎನ್ನುವುದೂ ಸಹ ನಿಜ. ಅಲ್ಲೋ ಇಲ್ಲೋ ಗಂಡ ಮಕ್ಕಳಿಂದ ಸಹಾಯ ಸಿಗಬಹುದೇನೋ. ಅದು ಕೇವಲ ಸಹಾಯ ಅಷ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂವತ್ತೊಂದನೆಯ ಬರಹ

Read More

ಪದವಿರಲಿ ಎದೆಯಲ್ಲಿ, ಪ್ರೀತಿ ಹರಿದೀತು!: ಸುಕನ್ಯಾ ಕನಾರಳ್ಳಿ ಅಂಕಣ

ಬದುಕಿನ ಸಂಕಷ್ಟಗಳ ಸಮಯದಲ್ಲಿ ಹೈಸ್ಕೂಲಿನಲ್ಲಿ ಕಲಿತ ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ, ಕೈ ಹಿಡಿದು ನಡೆಸೆನ್ನನು’ ಎಂಬ ಬಿ ಎಂ ಶ್ರೀ ಅವರ ಅನುವಾದಿತ ಇಂಗ್ಲಿಷ್ ಕವಿತೆಯನ್ನು ಆರ್ತತೆಯಿಂದ ನೆನಪಿಸಿಕೊಂಡಿದ್ದೇನೆ. ಕೆ. ಎಸ್. ನರಸಿಂಹಸ್ವಾಮಿಯವರ ‘ದೀಪವೂ ನಿನ್ನದೇ, ಗಾಳಿಯೂ ನಿನ್ನದೇ, ಆರದಿರಲಿ ಬೆಳಕು’ ಎಂದು ಬೇಡಿಕೊಂಡಿದ್ದೇನೆ. ಊರಿನಲ್ಲಿ ಗಣಪತಿ ಕೂರಿಸುತ್ತಿದ್ದ ಒಂದು ತಿಂಗಳಲ್ಲಿ ಸಾಮಾನ್ಯವಾಗಿ ಇರುತ್ತಿದ್ದ ಪಿ. ಕಾಳಿಂಗರಾಯರ ‘ಬಾರಯ್ಯ ಬೆಳದಿಂಗಳೇ…’ ಕೇಳುತ್ತಾ ಸುತ್ತಮುತ್ತಲ ಹಳ್ಳಿಗಳಿಂದ ಗಾಡಿ ಹೂಡಿಕೊಂಡು ಬರುತ್ತಿದ್ದ ಮಂದಿ ಬೀದಿಯಲ್ಲಿ ಕಿಕ್ಕಿರಿದು ನಿಂತು ಬೆಳದಿಂಗಳಲ್ಲಿ ತೊಯ್ದಂತೆ ತನ್ಮಯರಾಗಿ ನಿಂತಿದ್ದನ್ನು ಕಂಡಿದ್ದೇನೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಭಾವಾತಿರೇಕ ಎಂಬ ಖಾಯಿಲೆ: ಸುಕನ್ಯಾ ಕನಾರಳ್ಳಿ ಅಂಕಣ

ಈಗ ಬದುಕಿನ ಈ ಹಂತದಲ್ಲಿ ಅವರ ಕಾಳಜಿ ಒಂದೇ. ಬದುಕಿನುದ್ದಕ್ಕೂ ತಮ್ಮ ತಂಗಿಯರ ಬದುಕನ್ನು ದಡ ಹತ್ತಿಸಲು ಕಳೆದಾಗಿದೆ. ಅವರೆಲ್ಲ ತನ್ನನ್ನು ಪ್ರೀತಿಯಿಂದ ನೋಡಿಕೊಂಡರೂ ಸಹ ಈಗ ತನ್ನದೇ ಒಂದು ನೆಲೆ ಬೇಕೆನ್ನಿಸಿದೆ. ತನಗೆ ನಾಲ್ಕು ಗೋಡೆ, ಒಂದು ತಾರಸಿಯಾದರೂ ಇರುವ ಮನೆ ಕಟ್ಟಿಕೊಂಡು ಉಳಿದ ಬದುಕನ್ನು ಒಬ್ಬಳೇ ಕಳೆಯಲು ಒಂದು ಸೈಟು ಬೇಕು, ಅಷ್ಟೇ. ಅಸಂಖ್ಯಾತ ವಿದ್ಯಾರ್ಥಿಗಳು, ಸಾಹಿತ್ಯ ವಲಯದ ಹಲವಾರು ಆಪ್ತರು, ಭೋಪರಾಕ್ ಹೇಳುತ್ತಿರುವ ಅಪಾರವಾದ ಸ್ನೇಹಿತರ ಬಳಗ… ಇಷ್ಟೆಲ್ಲ ಇದ್ದು ಸುಮಾರು ಎಪ್ಪತ್ತರ ದಶಕದ ವಯಸ್ಸಿನ ಆಕೆ ಹೀಗೆ ಬಹಿರಂಗವಾಗಿ ಹೇಳಿಕೊಳ್ಳಬೇಕಾಯಿತೆ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ

Read More

ನೀಲು ಮತ್ತು ಲೂಸಿ: ಸುಕನ್ಯಾ ಕನಾರಳ್ಳಿ ಅಂಕಣ

ಲೂಸಿ ನಿಸರ್ಗದ ಕಂದ. ಹಳ್ಳಿಗಾಡಿನ ಮಳೆಬಿಸಿಲ ಕರುಣೆಯಲ್ಲಿ ಮಿಂದು ಹದವಾಗಿ ಅರಳಿದ್ದವಳು. ಕವಿ ಹೇಳುವಂತೆ ಅವಳಿಗೆ ಮೂರು ವರ್ಷವಿರುವಾಗ ಪ್ರಕೃತಿ ಈ ಸುಂದರ ಜೀವದ ಹೊಣೆ ಸಂಪೂರ್ಣವಾಗಿ ಹೊತ್ತುಕೊಳ್ಳಲು ಮುಂದೆ ಬಂತಂತೆ. ಬೆಟ್ಟ ನದಿ, ಗಿಡ ಮರ ಎಲ್ಲವೂ ತಮ್ಮ ಸತ್ವವನ್ನು ಅವಳಿಗೆ ಧಾರೆಯೆರೆದವಂತೆ. ಪ್ರಕೃತಿಯ ಅಂತಶ್ಚೇತನವೇ ಅವಳಲ್ಲಿ ಪೂರ್ತಿಯಾಗಿ ಮೈದಳೆಯಿತಂತೆ. ಇಷ್ಟೆಲ್ಲಾ ರೀತಿಯಲ್ಲಿ ನಳನಳಿಸಿದ ಲೂಸಿ ಬದುಕಿದ್ದು ಮಾತ್ರ ಕೆಲವೇ ವರ್ಷಗಳು. ಕೊನೆಯ ಐದನೆಯ ಪದ್ಯದಲ್ಲಿ ಕವಿ ಸಾವು ಮತ್ತು ಅಗಲಿಕೆಗಳು ತರುವ ವಿಷಾದದ ಆಳವನ್ನು ತೆರೆದಿಡುತ್ತಾನೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೆಂಟನೆಯ ಬರಹ

Read More

ಸೀರೆ ಪುರಾಣ!: ಸುಕನ್ಯಾ ಕನಾರಳ್ಳಿ ಅಂಕಣ

ಸೀರೆ ಎನ್ನುವುದು ಒಬ್ಬ ಗಂಡಸಿನ ತಲೆಯಲ್ಲಿ ಹುಟ್ಟಿದ ಪರಿಕಲ್ಪನೆ ಎನ್ನುವ ಗುಮಾನಿ ನನಗಿದೆ. ದಿನನಿತ್ಯ ರೈಲಿನಲ್ಲಿ ಹೋಗುವ ಹೆಣ್ಣುಮಕ್ಕಳಿಗಂತೂ ಅದೊಂದು ಮಹಾ ಪಿರಿಪಿರಿಯೇ. ಜನರಲ್ ಬೋಗಿಯಲ್ಲಿ ಇದ್ದು ಜನಜಂಗುಳಿ ಹೆಚ್ಚಿದ್ದರಂತೂ ಸೊಂಟ ಚಿವುಟುವ, ಬೆನ್ನಿಗೆ ಕಚಗುಳಿಯಿಟ್ಟಂತೆ ಮುಟ್ಟುವ ದೌರ್ಜನ್ಯಗಳಿಗೆ ಲೆಕ್ಕವೇ ಇಲ್ಲ. ಮುಂಬಯಿಯಂತಹ ಮಹಾ ನಗರಗಳಲ್ಲಿ ದಿನನಿತ್ಯದ ಮೆಟ್ರೋ ಹೆಂಗಸರು ಬಿಗಿಯಾದ ಜೀನ್ಸ್ ಮತ್ತು ಶರ್ಟ್ ತೊಟ್ಟು ಮೇಲೊಂದು ಲಳಲಳ ಎನ್ನುವಂಥದ್ದೇನೋ ಹಾಕಿಕೊಳ್ಳಲು ಇಷ್ಟಪಡುತ್ತಾರೆ ಎಂದು ಸುದ್ದಿಪತ್ರಿಕೆಯಲ್ಲಿ ಓದಿದ ನೆನಪು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ