Advertisement

Tag: ಹಬ್ಬಗಳು

ಮಲೆನಾಡಿನ ಹಬ್ಬಗಳ ಸಂಭ್ರಮ: ರೂಪಾ ರವೀಂದ್ರ ಜೋಶಿ ಸರಣಿ

ಅಂಥ ಬಡತನದಲ್ಲೂ, ಅಪ್ಪಯ್ಯ ಉಮೇದಿಯಿಂದ, ಅದಕ್ಕೆ ಬೇಕಾಗುವ ವಿವಿಧ ಬಣ್ಣದ ಹಾಳೆ, ಝರಿ ಎಲ್ಲವನ್ನೂ ಕೊಂಡು ತರುತ್ತಿದ್ದರು. ಆಗೆಲ್ಲ ಈಗಿನಂತೆ ವಿದ್ಯುತ್ ಸೌಲಭ್ಯ ನಮ್ಮಲ್ಲಿ ಇರಲಿಲ್ಲ. ಆದರೂ ಅದೊಂದು ಬಗೆಯ ಬಣ್ಣದ ಹಾಳೆಗಳನ್ನು ಕಲಾತ್ಮಕವಾಗಿ ಕತ್ತರಿಸಿ ಅಂಟಿಸಿ, ಕೇವಲ ಎಣ್ಣೆಯ ದೀಪದಲ್ಲೂ ಆ ಮಂಟಪ ಝಗಮಗಿಸುವಂತೆ ಮಾಡುತ್ತಿದ್ದರು. ಕೈಲಿ ಹಿಡಿದರೆ, ಸಣ, ಸಣ ಎಂದು ಸದ್ದಾಗುವಂತಿದ್ದ ಆ ಬಣ್ಣದ ಕಾಗದವನ್ನು “ಸಂತ್ರ ತಗಡು” ಅಂತ ಕರೆಯುತ್ತಿದ್ದರು. ಅದನ್ನು ಕಲಾತ್ಮಕವಾಗಿ ಕತ್ತರಿಸಿ, ಗುಬ್ಬಿ ಮಾಡಿ, ಮಂಟಪದ ಕಂಬಕ್ಕೆ, ಅಕ್ಕ ಪಕ್ಕದ ಪಟ್ಟಿಗಳಿಗೆ ಅಂಟಿಸಿ, ಅದಕ್ಕೆ ಝರಿಯ ಪುಡಿಯನ್ನು ಅಂಟಿಸಿ, ನಮ್ಮಣ್ಣ ಅದ್ಭುತವಾದ ಝಗಮಗ ಮಂಟಪ ಮಾಡುತ್ತಿದ್ದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ