Advertisement

Tag: ಅಂಕಣ

ಮಳೆ, ನೆನಪು ಮತ್ತು ಸಂಬಂಧ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಯಾವುದೂ ಕಳೆದು ಹೋಗದ ಹೊರತಾಗಿ ಅದರ ಮೌಲ್ಯ ನಮಗೆ ಗೊತ್ತಾಗುವುದಿಲ್ಲ ಅನ್ನುವುದೇ ಈ ಬದುಕಿನ ಅತಿದೊಡ್ಡ ವಿಪರ್ಯಾಸ. ಪ್ರತೀ ಕ್ಷಣವನ್ನೂ ಉತ್ಕಟವಾಗಿ ಜೀವಿಸಬೇಕು ಅಂದುಕೊಳ್ಳುವ ಒಂದು ಫಿಲಾಸಫಿ ಶುರು ಆಗುವುದೇ ಈ ಕಳೆದುಹೋದ ಫೀಲ್ ಬಂದ ನಂತರವೇ. ಅಷ್ಟರಲ್ಲಾಗಲೇ ನಮ್ಮ ಅರ್ಧ ಆಯುಷ್ಯ ಮುಗಿದುಹೋಗಿರುತ್ತದೆ. ಇನ್ನು ದಿನಗಳು ಕಮ್ಮಿ ಅನ್ನುವ ಅರಿವಾಗುವಾಗ ಈ ಪ್ರತೀಕ್ಷಣವನ್ನೂ ಉತ್ಕಟವಾಗಿ ಬದುಕುವ ಆಸೆಯೊಂದು ಹುಟ್ಟಿಕೊಳ್ಳುತ್ತದೆ. ಆದರೆ ಹಾಗೆ ಬದುಕುತ್ತೇವಾ? ಹೇರಿಕೊಂಡ ಜವಾಬ್ದಾರಿಯ ಮೂಟೆಗಳನ್ನು ಇಳಿಸಿ ಹಗುರ ಆಗುವುದು ಸಾಧ್ಯನಾ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಮೂರನೆಯ ಬರಹ

Read More

ಗುರು ಮತ್ತು ಹಕ್ಕಿಗೂಡು: ಸುಕನ್ಯಾ ಕನಾರಳ್ಳಿ ಅಂಕಣ

ಗಾಂಧೀಜಿ ಒಮ್ಮೆ ಯರವಾಡ ಜೈಲಿನಲ್ಲಿದ್ದಾಗ ಒಂದು ರಾತ್ರಿ ಬರಿಯ ದುಃಸ್ವಪ್ನಗಳೇ ಬಿದ್ದು ಬೆಚ್ಚಿದ್ದಾಗ ವಿಚಾರಿಸಿದರಂತೆ. ಹಿಂದಿನ ರಾತ್ರಿಯ ಅಡಿಗೆಯನ್ನು ಒಬ್ಬ ಕೊಲೆಗಡುಕ ಅಪರಾಧಿ ಮಾಡಿದ್ದಾನೆಂದು ತಿಳಿದು ಅಂದಿನಿಂದ ರಾತ್ರಿಯ ಊಟವನ್ನೇ ಬಿಟ್ಟರಂತೆ. ನಮ್ಮ ಸೂಕ್ಷ್ಮ ಶರೀರದ ಚೈತನ್ಯ ಇನ್ನೊಬ್ಬರಿಗೂ ಅನುಭವಕ್ಕೆ ಬರುತ್ತದೆ ಎಂದು ಅರಿವಾಗುವುದು ಬ್ರಹ್ಮವಿದ್ಯೆಯೇನೂ ಅಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

 ಕನ್ನಡ ಕಲಿಕೆಯ ಮೂರು ಪ್ರಸಂಗಗಳು: ಎಲ್.ಜಿ.ಮೀರಾ ಅಂಕಣ

ನಾನು ಈ ಹುಡುಗಿಗೆ “ನಿನ್ನ ಗುರುತಿನ ಚೀಟಿ ಕೊಡಮ್ಮ” ಅಂದೆ. ಅವಳು ಗಾಬರಿಯಿಂದ “ಅದು ಇಲ್ಲ ಮ್ಯಾಮ್” ಅಂದಳು. ಪಾಪ, ಅದು ಅವಳ ಕುತ್ತಿಗೆಯಲ್ಲೇ ತೂಗುತ್ತಿತ್ತು. ಈ ಘಟನೆಯು ಘಟಿಸುತ್ತಿದ್ದಾಗ ನಮ್ಮ ಕೋಣೆಯಲ್ಲೇ ಕುಳಿತಿದ್ದ ಇಂಗ್ಲಿಷ್ ಅಧ್ಯಾಪಕಿಯೊಬ್ಬರು ಮುಗುಳ್ನಗುತ್ತಾ “ಅದು ನಿನ್ನ ಮೈಮೇಲೇ ಇದೆಯಲ್ಲಮ್ಮ” ಅಂದರು. ಆದರೂ ಆ ಹುಡುಗಿಗೆ ಗುರುತಿನ ಚೀಟಿ ಅಂದರೆ ಏನೆಂದು ಗೊತ್ತಾಗಲಿಲ್ಲ. ಏನು ಒತ್ತಡ ಇತ್ತೋ ಏನೋ ಪಾಪ ಅವಳಿಗೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತನೆಯ ಬರಹ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

ನಮ್ಮ ಪುರಾಣಗಳನ್ನು ಕೆದಕುತ್ತಾ ಹೋದರೆ ಇಂತಹ ಬಹಳಷ್ಟು ಮಾದರಿಗಳು ಸಿಗಬಹುದು. ಪ್ರತಿಯೊಬ್ಬರ ಪರಿಸ್ಥಿತಿಗಳು ಪ್ರತಿಯೊಬ್ಬರ ಋಣದ ಬೇರುಗಳು ಭಿನ್ನವಾಗಿರಬಹುದು. ಆದರೆ ಧರ್ಮಸಂಕಟದ ಆ ಉತ್ಕಟ ಕ್ಷಣಗಳಲ್ಲಿ ಅವರು ತೆಗೆದುಕೊಂಡ ನಿರ್ಧಾರಗಳು ಖಂಡಿತವಾಗಿಯೂ ನಮ್ಮ ಬದುಕಿನ ಸಮಸ್ಯೆಗಳಿಗೂ ಒಂದು ದಾರಿಯನ್ನು ತೋರಿಸಬಹುದು. ಬದುಕಿನ ಅನಾಮಿಕ ತಿರುವಿನಲ್ಲಿ ಎದುರಾಗುವ ದ್ವಂದ್ವಗಳಲ್ಲಿ ಇಲ್ಲಿದ್ದು ಇಲ್ಲಿಲ್ಲ; ಅಲ್ಲಿದ್ದು ಅಲ್ಲಿಲ್ಲ ಅನ್ನುವಂತಾಗಿ ಇದು ಅಥವಾ ಅದು ಅನ್ನುವ ಆಯ್ಕೆ ಮಾಡಲೇಬೇಕಾದ ಪರಿಸ್ಥಿಗಳಲ್ಲಿ ನಮ್ಮ ಮುಂದೆ ಇವರು ಕೊಟ್ಟು ಹೋದ ಮಾದರಿಗಳಿವೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ