ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ
ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
