Advertisement

Tag: ಅಂಕಣ

ಗ್ಲೋಬಲ್-ಲೋಕಲ್ ಊರುಗಳ ಉಪಕಥೆಗಳು: ವಿನತೆ ಶರ್ಮ ಅಂಕಣ

ಇವೆಲ್ಲವನ್ನು ಹಿಂದಿನ, ಎಂದಿನ ಕುತೂಹಲದಿಂದ ನೋಡುತ್ತಾ ನಿಲ್ಲುವ ನನ್ನನ್ನು ಅನುಮಾನದಿಂದ ನೋಡುವ ಜನರು ಜಾಸ್ತಿಯಾಗಿರುವುದು ಗಮನಕ್ಕೆ ಬರುತ್ತದೆ. ಯಾರು ನೀವು, ಇಲ್ಲಿ ಯಾಕೆ ನಿಂತು ನಮ್ಮನ್ನು ನೋಡುತ್ತಿದ್ದೀರಿ, ನಿಮ್ಮಷ್ಟಕ್ಕೆ ನೀವು ನಿಮ್ಮ ಕೆಲಸ ನೋಡಿಕೊಂಡು ಮುಂದೆ ಸಾಗಿ, ಎಂದು ಕೆಲವರು ಕೇಳುವಾಗ ಜನಜೀವನದ ಮನಸ್ಸುಗಳ ಬೇರುಗಳಿಗೆ ಅಂಟಿಕೊಂಡಿರುವ ಮಣ್ಣು ಸಡಿಲವಾಗಿರುವುದು ಕಾಣುತ್ತದೆ. ನಮ್ಮಷ್ಟಕ್ಕೆ ನಾವು, ನಿಮ್ಮಷ್ಟಕ್ಕೆ ನೀವು ಎನ್ನುವ ಮಾತನ್ನು ಕೇಳಿದಾಗ ಯಾಕೋ ಮುಂದುವರೆದ ಪಾಶ್ಚಾತ್ಯ ದೇಶ-ಸಮಾಜಗಳ ಬಂಡವಾಳಶಾಹಿ ಧೋರಣೆ ನೆನಪಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ನೋವಿನಲ್ಲೂ ನಗುವುದ ಕಲೀಬೇಕು: ನಾಗಶ್ರೀ ಅಜಯ್‌ ಅಂಕಣ

“ಕೆಲವೊಮ್ಮೆ ಈ ಗಂಡ, ಮಗು, ಸಂಸಾರ, ದುಡಿಮೆ, ಸಂಪಾದನೆ, ಕೊಂಕು ಮಾತು, ಅನಾರೋಗ್ಯ ಎಲ್ಲದರಿಂದ ಬಹಳ ದೂರ ಹೋಗಿ, ನಾನೊಬ್ಬಳೇ ಪ್ರಶಾಂತವಾಗಿ ಕೆಲಕಾಲ ಕಳೆಯಬೇಕನ್ನಿಸುತ್ತೆ. ಆದರೆ ಎಲ್ಲಿ ಹೋಗುವುದು? ಹೀಗೆ ವಾಸ್ತವ ಹಿಂಸೆಯೆನಿಸಿದಾಗೆಲ್ಲ, ಬೇಸರದಲ್ಲೇ ಕತ್ತಲಕೋಣೆಯಲ್ಲಿ ಉಳಿಯುವುದರ ಬದಲು, ಮನೆತುಂಬ ಬೆಳಕಾಗುವಂತೆ ಝಗಮಗಿಸಿ, ಸ್ನಾನ ಮಾಡಿ, ನಾನು ಹೊಸದಾಗಿ ಕೊಂಡ ಬಟ್ಟೆ ತೊಟ್ಟು, ನನಗೇ ಹೆಮ್ಮೆಯಾಗುವಷ್ಟು ಚೆಂದಕ್ಕೆ ಅಲಂಕರಿಸಿಕೊಂಡು ಅರ್ಧಗಂಟೆ ಕನ್ನಡಿಯ ಮುಂದೆ ನಗುಮುಖದಲ್ಲಿ ಕೂತಿರುತ್ತೇನೆ.”
ಎಸ್. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ

Read More

ಸಂಬಂಧಗಳಿಗೂ ಒಂದು ಕೊನೆಯ ದಿನ ಇದ್ದರೆ….!

ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಮತ್ತಷ್ಟು ಆತ್ಮೀಯ, ಅಪ್ಯಾಯ ಬಂಧವಾಗಿ ಬದುಕು ಹಿತವೆನಿಸುವ ದಿನಗಳಲ್ಲಿ ಯಾರಿಗಾದರೂ ಅಂತಹದ್ದೊಂದು ಸಂಬಂಧ ಜಡವಾಗಬಹುದೆಂಬ ಸುಳಿವು ಸಿಕ್ಕಿರುವುದಿಲ್ಲ. ಈ ದಿನ, ಈ ಕ್ಷಣ, ಈ ಕಾಲ ಸದಾ ಹೀಗೆಯೇ ಇರುವುದೆಂಬ ನಂಬಿಕೆ, ಆಶಯದ ಬುನಾದಿಯ ಮೇಲೆ ಕಟ್ಟಿದ ಕನಸಿನ ಗೋಪುರ ಕುಸಿಯತೊಡಗಿದಾಗ ಶುರು ಸತ್ವಪರೀಕ್ಷೆ. ಜೊತೆಯಾಗಿ ಎದುರಿಸಿದ ಕಷ್ಟ ಸುಖ, ಕೂಡಿಟ್ಟ ನೆನಪುಗಳು, ಜೋಳಿಗೆ ತುಂಬಿದ ಅನುಭವಗಳು ಮಸುಕಾಗುವವರೆಗೂ ಮುಗಿಯದ ಉಮ್ಮಳಿಕೆ‌. ಇದು ಬರಿಯ ಪ್ರೇಮಿಗಳಿಗೆ ಸಂಬಂಧಿಸಿದ ವಿಷಯವಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ನಿನ್ನೆ ಇದ್ದದ್ದು ಇವತ್ತು ಮಂಗಮಾಯ!

ಒಮ್ಮಿಂದೊಮ್ಮೆಲೆ ಮೂಡುತ್ತಿದ್ದ ಆ ಕಳೆ ನಮ್ಮಲ್ಲಿ ಚಿಂತೆ ಉಂಟುಮಾಡಿದ್ದು ಹೌದು. ಅಂತಹ ಗಿಡಗಳು ಬೆಳೆಯುವಂತೆ ಯಾರಾದರೂ ಬೇಕಂತಲೇ ಒಂದಿಷ್ಟು ಬೀಜಗಳನ್ನು ನಮ್ಮ ಭತ್ತದ ಬೆಳೆಗಳ ನಡುವೆ ಎಸೆದಿರಬೇಕು ಎಂಬ ಸಂಶಯ ನಾಗಣ್ಣ ಅವರಿಗೆ ಮೂಡಿತು. ಇದ್ದರೂ ಇದ್ದೀತು ಅಂತ ನನಗೂ ಅನಿಸಿತು. ಆದರೆ ನಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡೋಣ ಅಂತ ಸುಮ್ಮನಾದೆ. ಒಂದು ಮೂಟೆ ಭತ್ತ ಬಂದರೂ ಸಾಕು, ಒಂದಿಷ್ಟು ದಿನ ವಿಷರಹಿತ ಅನ್ನ ಉಣ್ಣಬಹುದು ಎಂಬ ಸಣ್ಣ ಆಸೆ ನಮಗಿತ್ತು ಅಷ್ಟೇ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ