Advertisement

Tag: ಅಂಜಲಿ ರಾಮಣ್ಣ

ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಧರ್ಮಶಾಲಾದಿಂದ 112 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಆಕರ್ಷಿಸುತ್ತದೆ ಖಜ್ಜಿಯಾರ್ ಗಿರಿಧಾಮ. ದೌಲಾದರ ಪರ್ವತಶ್ರೇಣಿಯ ನಡುವೆ 12ನೆಯ ಶತಮಾನದಲ್ಲಿ ಚಂಬಾ ರಾಜಮನೆತನದವರು ಕಟ್ಟಿಸಿರುವ, ಸಂಪೂರ್ಣ ಮರದಿಂದ ಮಾಡಿರುವ ಅರಮನೆ. ಅದರ ಬಾಗಿಲುವಾಡಗಳಿಗೆ ಕಟ್ಟಿಕೊಂಡಿರುವ ಚಿನ್ನದ ತಗಡು, ಅರಮನೆಯ ಒಳಗೇ ಇರುವ ಖಾಜ್ಜಿ ನಾಗಮಂದಿರ. ಶಿವ ಮತ್ತು ಹಿಡಿಂಬೆಯ ಮೂರ್ತಿಗಳೂ ಇರುವುದು ಇಲ್ಲಿನ ಆಕರ್ಷಣೆ. ನವರಾತ್ರಿಯಲ್ಲಿ ಮಾತ್ರ ಇಲ್ಲಿ ಪೂಜೆ ನಡೆಯುತ್ತದೆ. ಬಾಕಿಯಂತೆ ದೈವಭಕ್ತ ಪ್ರವಾಸಿಗರು ತಾವೇ ಕುಂಕುಮವಿಟ್ಟು ಪೂಜೆ ಮಾಡಿ ಬರಬಹುದು.
ʻಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಸವಾರಿ ಹೊರಡುವ ಮುನ್ನ ಕೇಳಿರಿ ಸಲಹೆಗಳನ್ನ

ಸ್ಥಳೀಯರ ಜೊತೆಗಿನ ಮಾತು ಪ್ರವಾಸದ ಹೊರಹನ್ನು ಮತ್ತಷ್ಟು ಹೆಚ್ಚಿಸಿ, ಮಾಹಿತಿಯೊದಗಿಸಿ ಅರ್ಥಪೂರ್ಣವೆನಿಸುತ್ತದೆ. ಹಾಗೆ ಮಾತನಾಡುವಾಗ ವೈಯಕ್ತಿಕ ಮಾಹಿತಿ ಕೊಡುವುದರಿಂದ ದೂರ ಉಳಿಯುವುದು ಮತ್ತು ಧಾರ್ಮಿಕ ಹಾಗು ಆಹಾರದಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳದಿರುವುದು ಸ್ವಾಗತಾರ್ಹ. ಅರೆಬರೆ ರಾಜಕೀಯ ಜ್ಞಾನದಿಂದ ನಮ್ಮ ದೇಶದ ಬಗ್ಗೆ ಚೀಳು ಅಭಿಪ್ರಾಯ ಬರದಂತೆ ಮಾತನಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಬೇರೆಯವರ ಮಕ್ಕಳನ್ನು ಹಿರಿಯರ ಅನುಮತಿಯಿಲ್ಲದೆ ಮುದ್ದು ಮಾಡುವ ಬಗ್ಗೆ ಎಚ್ಚರಿಕೆ ಇರಬೇಕು. ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ  ಪ್ರವಾಸಕ್ಕೆ ಬೇಕಾದ ಸಲಹೆಗಳನ್ನು ನೀಡಿದ್ದಾರೆ. 

Read More

ಕಾಮಾಕ್ಯದಲ್ಲಿ ದೊರೆತ ಅನಿರೀಕ್ಷಿತ ಆಶೀರ್ವಾದ

ಪುರಾಣಗಳಲ್ಲಿ ಉಲ್ಲೇಖಗೊಂಡಿರುವ 51 ಶಕ್ತಿಪೀಠಗಳ ಪೈಕಿ ಕಾಮಾಕ್ಯ ದೇವಿಯ ಈ ದೇವಸ್ಥಾನವೂ ಒಂದು ಎಂದು ಹೇಳಲಾಗುತ್ತದೆ. ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತಾರಾ, ಕಾಳಿ, ಭೈರವಿ, ಧೂಮಮತಿ ಎನ್ನುವ ಹೆಸರುಗಳಲ್ಲಿ ಇಲ್ಲಿ ದೇವಿಯನ್ನು ಆರಾಧಿಸುತ್ತಾರೆ. ಮುಖ್ಯ ಗೋಪುರದಲ್ಲಿ ಅವಳನ್ನು ಮಾತಂಗಿ, ತ್ರಿಪುರ ಸುಂದರಿ ಮತ್ತು ಕಮಲ ಎನ್ನುವ ಹೆಸರುಗಳಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ತಾಂತ್ರಿಕ ಶೈಲಿಯಲ್ಲಿ ಆರಾಧಿಸಲಾಗುತ್ತದೆ. ಎಲ್ಲಾ ದೇವಿಯರ ಗರ್ಭಗುಡಿಯಲ್ಲಿಯೂ ಹತ್ತು ಇಂಚು ಆಳದ ಯೋನಿಯಾಕಾರದ ಕಪ್ಪುಶಿಲೆಯೊಳಗಿನಿಂದ ಸದಾಕಾಲವೂ ನೀರಿನ ಬುಗ್ಗೆ ಉಕ್ಕುತ್ತಿರುತ್ತದೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ

Read More

ಪ್ರಕೃತಿಯ ರಮ್ಯವಾದ ಮಾಯಾತಾಣ ಮಾರೀಷಿಯಸ್

ಅಲ್ಲಿನ ಶಾಲಾ ಕಾಲೇಜಿನ ಮಕ್ಕಳೆದುರು ಪ್ರಧಾನಮಂತ್ರಿಯೂ ರಸ್ತೆ ಕಾಯುವವನೇ. ಮಾತು ಮಾತಿಗೂ ಪರದೇಶದ ಸಂಸ್ಕೃತಿಯನ್ನು ಹಳಿದೇ ನನ್ನ ಸಂಸ್ಕೃತಿಯ ಹಿರಿಮೆಯನ್ನು ಮೆರೆಯುವ ಮನಸ್ಸಿನೊಳಗೊಂದು ಗಂಟಾನಾದ. ಅಂದಹಾಗೆ ಮಾರೀಷಿಯಸ್ಸಿನ ಅಳತೆ ನೋಡಿ ದಾರಿ ಕ್ರಮಿಸಲು ಕಡಿಮೆ ಸಮಯ ಸಾಕೆಂದು ಅಂದಾಜು ಹಾಕಿದರೆ ತಪ್ಪಾದೀತು. ಕಿರಿದಾದ ದಾರಿಗಳಲ್ಲಿ 45 ಕಿಲೋಮೀಟರ್ ಕ್ರಮಿಸಲು ಬೇಕಾದ ಸಮಯ 90 ನಿಮಿಷಗಳು!  ಅಲ್ಲಿಗೆ ಹೋಗುವ ಪ್ರವಾಸ ಖಚಿತವಾಗುವವರೆಗೂ ಮಾರಿಷಿಯಸ್ ಆಫ಼್ರಿಕಾ ಖಂಡಕ್ಕೆ ಸೇರಿದ ದ್ವೀಪ ಎನ್ನುವ ಸಾಮಾನ್ಯಜ್ಞಾನ ನನಗಿರಲಿಲ್ಲ. ʼಕಂಡಷ್ಟೂ ಪ್ರಪಂಚʼ ಅಂಕಣದಲ್ಲಿ ಅಂಜಲಿ ರಾಮಣ್ಣ ಲೇಖನ.

Read More

ದೇಮಾಜಿ ಎಂಬ ಸುಂದರ ತಾಣದಲ್ಲೊಂದು ತಂಗುದಾಣ

ಅಸ್ಸಾಮಿನ ಹಳ್ಳಿಗಳು, ತಾಲೂಕುಗಳು ಅರುಣಾಚಲ ಪ್ರದೇಶದಂತೆ ಅಲ್ಲ. ಟಾರು ಮೆತ್ತಿಸಿಕೊಂಡ ವಿಶಾಲ ರಸ್ತೆಗಳು ಪ್ರಯಾಣಿಗರಿಗೆ ಹಿತವಾಗಿವೆ. ಒಂದೊಂದೇ ಮರಗಿಡಗಳು ಕಿಟಿಕಿಯಿಂದಾಚೆಗೆ ನನ್ನಿಂದ ದೂರದೂರವಾಗುತ್ತಿರುವುದನ್ನು ನೋಡುತ್ತಲೇ ಮುಂದೆ ಹೋಗುತ್ತಿದ್ದೆ. ಅಸ್ಸಾಂ ಪೂರ್ತೀ ತುಂಬಾ ಖುಷಿ ನೀಡುವ ನೋಟವೆಂದರೆ ಅಲ್ಲಿನ ಹೆಣ್ಣು ಮಕ್ಕಳು ವಯೋಬೇಧವಿಲದೆ ಸೀರೆಗಳನ್ನುಟ್ಟು ಸೈಕಲ್‌ಗಳಲ್ಲಿ ಓಡಾಡುತ್ತಾರೆ. ರಸ್ತೆಯ, ಅಲ್ಲಿನ ಜನರ, ವಾಹನಗಳ, ಇಕ್ಕೆಲಗಳ ಹಸುರಿನ ಉಸಿರಿನಂಥಾ ಹೆಣ್ಣುಗಳು.
ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ