Advertisement

Tag: ಅಬ್ದುಲ್ ರಶೀದ್

“ಹಳೆಯ ಪುಟಗಳಿಂದ” ಸರಣಿಯಲ್ಲಿ ಅಬ್ದುಲ್‌ ರಶೀದ್‌ ಬರಹ

ಅದು ಸುಳ್ಳಲ್ಲ. ನಿಜವೂ ಕೂಡಾ. ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು.
“ಹಳೆಯ ಪುಟಗಳಿಂದ” ಸರಣಿಯಲ್ಲಿ ಅಬ್ದುಲ್‌ ರಶೀದ್‌ ಬರಹ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು”

ಅವರು ಹೇಳಿದ ದ್ವೀಪವಾಸಿ ಮುತ್ತುಕೋಯಾನ ಕಥೆಯನ್ನು ಕೇಳಿದರೆ ಏಕಕಾಲದಲ್ಲಿ ನಗುವೂ ವಿಷಾದವೂ ಖೇದವೂ ನಗುವೂ, ವಿಷಾದವೂ, ಖೇದವೂ, ವೈರಾಗ್ಯವೂ ಉಂಟಾಗುವ ಹಾಗೆ ಇತ್ತು. ಮುಕ್ತಿಯಾರರು ಹೇಳಿದ ಹಾಗೆ ಮುತ್ತುಕೋಯಾರಿಗೆ ಸುಮಾರು ಎಂಬತ್ತರ ಆಸುಪಾಸು ವಯಸ್ಸು ಇರಬಹುದು.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಅಮವಾಸ್ಯೆಯ ಇರುಳ ಅಸಂಖ್ಯ ನಕ್ಷತ್ರಗಳು” ನಿಮ್ಮ ಓದಿಗೆ

Read More

ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಭಾಷಣ

ಇವತ್ತು ಇಲ್ಲಿ ಈ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಈ ಬಿರುಬಿಸಿಲ ಹೊತ್ತು ಅವರು ಯಾರೂ ಇಲ್ಲಿ ಇಲ್ಲ. ಆದರೆ ಅವರ ಹಾಗಿರುವ ಹಲವು ಹಾಡುಗಾರರೂ ಇಲ್ಲೇ ಅಕ್ಕಪಕ್ಕ ತೋಟದಲ್ಲಿ ಕೆಲಸ ಮಾಡುತ್ತಿರಬಹುದು. ಅಥವಾ ಅವರ ಜಾಗವನ್ನು ಅಸ್ಸಾಮಿನಿಂದ ಬಂಗಾಳದಿಂದ ಬಂದ ಕೆಲಸಗಾರರು ವಹಿಸಿಕೊಂಡಿರಬಹುದು. ಅವರಲ್ಲೂ ಇಂತಹ ಕಥೆಗಾರರಿರಬಹುದು. ಸುಮಾರು ಐವತ್ತು ವರ್ಷಗಳ ಹಿಂದೆ ಅಸ್ಸಾಮಿನಿಂದ ಜೇನುಪೆಟ್ಟಿಗೆಗಳನ್ನು ಇಡಲು ದಾಸ್ ಎಂಬ ಯುವಕ ಬಂದಿದ್ದ. ಅವನೂ ಆಗ ಬಾಲಕನಾಗಿದ್ದ ನನಗೆ ಕಥೆಗಳನ್ನು ಹೇಳುತ್ತಿದ್ದ. ಈಗ ಬಹುಶಃ ಆತ ಎಲ್ಲಿರಬಹುದೋ ಗೊತ್ತಿಲ್ಲ. ಆದರೆ ಆತ ನನ್ನ ಕಥಾ ಪಾತ್ರವಾದ.
ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ನಡೆದ “ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ”ನ ಅಧ್ಯಕ್ಷರಾದ ಅಬ್ದುಲ್ ರಶೀದ್ ಭಾಷಣ ನಿಮ್ಮ ಓದಿಗೆ

Read More

ಭಾವ ಬಿಡುಗಡೆಯ ನಿರುಮ್ಮಳ ಕಥೆಗಳು: ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನಕ್ಕೆ ಅಬ್ದುಲ್ ರಶೀದ್ ಮುನ್ನುಡಿ

ಪೂರ್ಣಿಮಾ ಅವರದು ಅವರೇ ತಮ್ಮ ಮಾತಿನಲ್ಲಿ ಹೇಳುವ ಹಾಗೆ ‘ಕತೆಗಾತಿಯ ವೇಷ’. ಕಥೆಯ ನಿರುದ್ವಿಗ್ನತೆ ಮತ್ತು ನೆಮ್ಮದಿಯ ದೃಷ್ಟಿಯಿಂದ ಈ ವೇಷ ಅಗತ್ಯ ಎಂದು ನನಗೆ ಇಷ್ಟೆಲ್ಲ ಬರೆದಾದ ಮೇಲೆ ಈಗ ಅನ್ನಿಸುತ್ತದೆ. ಬರೆಯುವವರು ತಮ್ಮದೇ ಕಥೆಯಲ್ಲಿ ಕಳೆದುಹೋಗುವ ಅಪಾಯದಿಂದ ಬಿಡುಗಡೆಗೊಳ್ಳುವ ದಾರಿ ಇದು. ಇದು ಬಹು ದೊಡ್ಡ ಸವಾಲಿನ ದಾರಿಯೂ ಹೌದು. ಬರೆಯುವವರಿಗೆ ಈ ದಾರಿಯಲ್ಲಿ ಕ್ರಮಿಸಲು ಬಹಳ ಲೋಕಜ್ಞಾನ ಇರಬೇಕಾಗುತ್ತದೆ. ಸಕಲ ಜೀವ ವ್ಯಾಪಾರಗಳ ಕುರಿತು ಒಂದು ಸಮತೂಕದ ನಿರ್ಲಿಪ್ತತೆ ಬೇಕಾಗುತ್ತದೆ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನ “ಕತೆ ಜಾರಿಯಲ್ಲಿರಲಿ” ಕೃತಿಗೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ