Advertisement

Tag: ಅಬ್ದುಲ್ ರಶೀದ್

ಅಬ್ದುಲ್ ರಶೀದ್ ಕೃತಿಗೆ ಭಾರತಿ ಬಿ.ವಿ. ಬರೆದ ಮುನ್ನುಡಿ

“ರಶೀದ್ ಬರಹಗಳನ್ನು ಮೊದಲಲ್ಲಿ ಓದುವಾಗ ಒಂದು ಪ್ರಶ್ನೆ ಸದಾ ಕಾಡುತ್ತಿತ್ತು ‘ಅದು ಹೇಗೆ ಇವರ ಬದುಕಿನಲ್ಲಿ ನನಗೆ ಅಸಾಧ್ಯವಾದ ಏನೆಲ್ಲ ಆಗುತ್ತದಲ್ಲ’ ಎಂದು. ಅದು ಕೇವಲ ನನ್ನ ಪ್ರಶ್ನೆಯಲ್ಲದೇ ಬೆರಗು ಕೂಡಾ ಆಗಿತ್ತು! ಬದುಕನ್ನು ತುಂಬ ಕಠೋರವಾಗಿ… ಅಂದರೆ ಅಗತ್ಯಕ್ಕಿಂತ ಹೆಚ್ಚು ಕಠೋರವಾಗಿ ಬದುಕುವ ಅಗತ್ಯವಿಲ್ಲ ಮತ್ತು ಸಣ್ಣದೊಂದು ಕಾರುಣ್ಯದ ಹನಿ ಜಗತ್ತಿಗೆ ಚುಮುಕಿಸಲು ಹೆಚ್ಚೇನೂ ಶ್ರಮ ವಹಿಸಬೇಕಿಲ್ಲ ಎಂದು ಅರ್ಥವಾದ ನಂತರ, ಅವರ ಕಷ್ಟಸುಖ ಕೇಳುತ್ತಲೇ ಎದೆಯಲ್ಲಿ ಕಾರುಣ್ಯ ಮೂಡಿ, ತುಸು ‘ಹೆಚ್ಚು ಮನುಷ್ಯಳಾಗುತ್ತಾ’ ಹೋದೆ ಅನ್ನಬಹುದು”
ಕತೆಗಾರ ಅಬ್ದುಲ್ ರಶೀದ್ ಅವರ ‘ಮೈಸೂರು ಪೋಸ್ಟ್’ ಕೃತಿಗೆ  ಭಾರತಿ ಬಿ.ವಿ. ಬರೆದ ಮುನ್ನುಡಿ

Read More

ಅಬ್ದುಲ್ ರಶೀದ್ ಕಥಾಸಂಕಲನಕ್ಕೆ ವಿವೇಕ ಶಾನಭಾಗ ಬರೆದ ಮುನ್ನುಡಿ

ಕತೆ ಜರುಗುವ ಆವರಣವು ಅನುಭವದ ಅವಿಭಾಜ್ಯ ಎಂಬುದನ್ನು ಅರಿತು ಅದನ್ನು ಸಹಜ ಸರಾಗತೆಯಲ್ಲಿ ಸಿದ್ಧಿಸಿಕೊಂಡವರು ರಶೀದ್. ಅವರ ಮೊದಲ ಕತೆಯಿಂದಲೂ ಇದನ್ನು ಕಾಣಬಹುದು. ಇಲ್ಲಿಯ ‘ಮೋಹಕ ದ್ವೀಪದ ಮೂಗಿನ ತುದಿ’ ಕತೆಯೊಳಗೆ ಬರುವ ವಿವರಗಳು, ಘಟನೆಗಳು, ಮಾತುಗಳು ಆ ಆವರಣದಲ್ಲಿ ಅಲ್ಲದೇ ಬೇರೆಲ್ಲೂ ಘಟಿಸಲು ಅಸಾಧ್ಯವೆನ್ನುವ ಹಾಗೆ ಸಂಯೋಜನೆಗೊಂಡಿವೆ.
ಕತೆಗಾರ ಅಬ್ದುಲ್‌ ರಶೀದ್‌ ಹೊಸ ಕಥಾ ಸಂಕಲನ “ಲಾರ್ಡ್ ಕಾರ್ನ್‌ವಾಲೀಸ್ ಮತ್ತು ಕ್ವೀನ್‌ ಎಲಿಜಬೆತ್‌” ಗೆ ವಿವೇಕ ಶಾನಭಾಗ ಬರೆದ ಮಾತುಗಳು

Read More

ಸಂಧ್ಯಾರಾಣಿ ಸಿನಿ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

ಕಣ್ಣು ಮುಚ್ಚಿಕೊಂಡು ಓದುವ ಹಾಗಿದ್ದರೆ ಸಿನೆಮಾ ನೋಡಬೇಕಾಗಿಲ್ಲ ಅನ್ನುವಷ್ಟು ಕಣ್ಣಿಗೆ ಕಟ್ಟುವ ಬರವಣಿಗೆಗಳು ಅವು. ಬರೀ ಕಣ್ಣಿಗೆ ಮಾತ್ರವಲ್ಲ. ಸಿನೆಮಾದ ಸದ್ದುಗಳನ್ನು ಕಿವಿಗೆ, ಭಾವಗಳನ್ನು ಮನಸ್ಸಿಗೆ, ಕ್ಯಾಮರಾದ ಕೋನಗಳನ್ನು ಮಿದುಳಿಗೆ ಮತ್ತು ಸಿನೆಮಾ ಕೊನೆಗೆ ಉಂಟುಮಾಡುವ ತರ್ಕಗಳನ್ನು ವೈಚಾರಿಕತೆಗೆ ಅಕ್ಷರಗಳಲ್ಲೇ ದಾಟಿಸಿಬಿಡುತ್ತಿದ್ದರು. ಎಲ್ಲೂ ತರ್ಕಗಳಿಲ್ಲ, ತಪ್ಪುವ ಎಳೆಗಳಿಲ್ಲ. ಸಿನೆಮಾ ಹೇಳುವುದನ್ನು ಪರದೆ ಎಳೆದ ಹಾಗೆ ಕ್ವಚಿತ್ತಾಗಿ ಹೇಳಿ ಮುಗಿಸಿ ಮುಂದಿನ ಹದಿನೈದು ದಿನಗಳಿಗಾಗಿ ಕಾಯುವಂತೆ ಮಾಡುತ್ತಿದ್ದರು. ಸಂಪಾದಕನೂ, ಓದುಗರೂ ಏಕಪ್ರಕಾರವಾಗಿ ಕಾಯುತ್ತಿದ್ದ ಕೆಲವೇ ಬರವಣಿಗೆಗಳಲ್ಲಿ ಸಂಧ್ಯಾರಾಣಿ ಅವರದ್ದೂ ಒಂದಾಗಿತ್ತು.
ಎನ್. ಸಂಧ್ಯಾರಾಣಿ ಬರೆದ ‘ಸಿನಿ ಮಾಯಾಲೋಕ’ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ