Advertisement

Tag: ಅಬ್ದುಲ್ ರಶೀದ್

ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ

ನಾಲ್ಕು ದಶಕಗಳ ಹಿಂದೆ ತನ್ನ ನಲವತ್ತೆರಡನೆಯ ವಯಸ್ಸಿನಲ್ಲಿ ಬರೆಯಲು ಶುರು ಮಾಡಿದ ಸಾರಾ ಅಬೂಬಕ್ಕರ್ ಕನ್ನಡಕ್ಕೆ ಸಂಭವಿಸಿದ ಒಂದು ಅಚ್ಚರಿ. ಬಹುಶಃ ಕನ್ನಡಕ್ಕೆ ಸಂಭವಿಸಿದ ಇನ್ನೊಂದು ಅಚ್ಚರಿಯಾದ ಪಿ. ಲಂಕೇಶರು ಇಲ್ಲದಿದ್ದರೆ ಸಾರಾ ಕನ್ನಡದಲ್ಲಿ ಬರೆಯುತ್ತಲೇ ಇರಲಿಲ್ಲವೇನೋ.ಸುಮಾರು ಮೂವತ್ತು  ವರ್ಷಗಳ ಹಿಂದೆ ಆಗ ಇನ್ನೂ ಮೂವತ್ತರ ಹರೆಯದ ತರುಣನಾಗಿದ್ದ ಕನ್ನಡದ ಕಥೆಗಾರ ಅಬ್ದುಲ್ ರಶೀದ್ ಲಂಕೇಶ್ ಪತ್ರಿಕೆಗಾಗಿ ಸಾರಾ ಅವರೊಡನೆ ನಡೆಸಿದ್ದ ಮಾತುಕತೆಯ ಪಠ್ಯ ಇಲ್ಲಿದೆ

Read More

ಏಳು ಪುಣ್ಯದ ಕೆರೆಗಳನ್ನು ಕೊಟ್ಟವರು ತೀರಿಹೋದರು

ನೋಡಲು ಬಿಕಾರಿಯಂತೆ ತೋರುವ ಆದರೆ ಮಾತನಾಡಲು ತೊಡಗಿದರೆ ಸಂತನಂತೆ ಕಾಣುವ ಕಾಮೇಗೌಡರು ಒಣ ಪ್ರದೇಶವಾದ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದ ಪಾದದಲ್ಲಿ ಕೈಯ್ಯಾರೆ ತೋಡಿರುವ ಈ ಏಳು ಕೆರೆಗಳು ಕರ್ಮಯೋಗಿಯೊಬ್ಬ ನಲವತ್ತು ವರ್ಷಗಳಿಂದ ನಡೆಸಿರುವ ಕಾಯಕದಂತೆ ಬೆಳಗುತ್ತಿವೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರು ತಾವು ಕಟ್ಟಿದ ಹದಿನಾರು ಕೆರೆಗಳನ್ನು ಇಲ್ಲೇ ಬಿಟ್ಟು ತಾವು ಮಾತ್ರ ಇಂದು ಬೆಳಗ್ಗೆ ತೀರಿಹೋದರು. ಅವರ ಕುರಿತು ಅಬ್ದುಲ್ ರಶೀದ್ ಬರೆದಿದ್ದ ವ್ಯಕ್ತಿಚಿತ್ರ ನಿಮ್ಮ ಓದಿಗೆ

Read More

ಮುಗ್ಧತೆಯನ್ನೂ ತಾತ್ವಿಕತೆಯನ್ನೂ ಪೋಣಿಸಿಕೊಂಡ ರಶೀದ್‍ರ ಕತೆಗಳು

ಹೆಚ್ಚು ಪ್ರಯಾಸವಿಲ್ಲದೆ ಬರೆಯುವ ಶೈಲಿ  ಕತೆಗಾರ ಅಬ್ದುಲ್ ರಶೀದ್ ಅವರಿಗೆ ಒಲಿದಿದೆ. ಅವರು ಹಾಗೆ ಬರೆದಂತಹ ಬರಹವು ತಿಳಿಹಾಸ್ಯದಿಂದ ಓದುಗರಿಗೆ ಕಚಗುಳಿ ಇಡುವುದು, ತನ್ನ ವಿಶಿಷ್ಟ ಕಾಣ್ಕೆಗಳಿಂದ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡುವುದು, ಕೆಲವು ಪಾತ್ರಗಳು ಹಾಗೂ ಪ್ರಸಂಗಗಳು ಮನಸ್ಸಿನ ಮೂಲೆಯಲ್ಲಿ ಮನೆ ಮಾಡುವುದು. ಎಂತಹ ಸಂದರ್ಭದಲ್ಲೂ ರಶೀದ್ ಅವರಲ್ಲಿನ ಕಥೆಗಾರ ಜಾಗೃತನಾಗಿರುತ್ತಾನೆ. ಸುಮತಿ ಮುದ್ದೇನಹಳ್ಳಿ ಬರಹ.

Read More

ಅಬ್ದುಲ್ ರಶೀದ್ ಕೃತಿಗೆ ಭಾರತಿ ಬಿ.ವಿ. ಬರೆದ ಮುನ್ನುಡಿ

“ರಶೀದ್ ಬರಹಗಳನ್ನು ಮೊದಲಲ್ಲಿ ಓದುವಾಗ ಒಂದು ಪ್ರಶ್ನೆ ಸದಾ ಕಾಡುತ್ತಿತ್ತು ‘ಅದು ಹೇಗೆ ಇವರ ಬದುಕಿನಲ್ಲಿ ನನಗೆ ಅಸಾಧ್ಯವಾದ ಏನೆಲ್ಲ ಆಗುತ್ತದಲ್ಲ’ ಎಂದು. ಅದು ಕೇವಲ ನನ್ನ ಪ್ರಶ್ನೆಯಲ್ಲದೇ ಬೆರಗು ಕೂಡಾ ಆಗಿತ್ತು! ಬದುಕನ್ನು ತುಂಬ ಕಠೋರವಾಗಿ… ಅಂದರೆ ಅಗತ್ಯಕ್ಕಿಂತ ಹೆಚ್ಚು ಕಠೋರವಾಗಿ ಬದುಕುವ ಅಗತ್ಯವಿಲ್ಲ ಮತ್ತು ಸಣ್ಣದೊಂದು ಕಾರುಣ್ಯದ ಹನಿ ಜಗತ್ತಿಗೆ ಚುಮುಕಿಸಲು ಹೆಚ್ಚೇನೂ ಶ್ರಮ ವಹಿಸಬೇಕಿಲ್ಲ ಎಂದು ಅರ್ಥವಾದ ನಂತರ, ಅವರ ಕಷ್ಟಸುಖ ಕೇಳುತ್ತಲೇ ಎದೆಯಲ್ಲಿ ಕಾರುಣ್ಯ ಮೂಡಿ, ತುಸು ‘ಹೆಚ್ಚು ಮನುಷ್ಯಳಾಗುತ್ತಾ’ ಹೋದೆ ಅನ್ನಬಹುದು”
ಕತೆಗಾರ ಅಬ್ದುಲ್ ರಶೀದ್ ಅವರ ‘ಮೈಸೂರು ಪೋಸ್ಟ್’ ಕೃತಿಗೆ  ಭಾರತಿ ಬಿ.ವಿ. ಬರೆದ ಮುನ್ನುಡಿ

Read More

ಅಬ್ದುಲ್ ರಶೀದ್ ಕಥಾಸಂಕಲನಕ್ಕೆ ವಿವೇಕ ಶಾನಭಾಗ ಬರೆದ ಮುನ್ನುಡಿ

ಕತೆ ಜರುಗುವ ಆವರಣವು ಅನುಭವದ ಅವಿಭಾಜ್ಯ ಎಂಬುದನ್ನು ಅರಿತು ಅದನ್ನು ಸಹಜ ಸರಾಗತೆಯಲ್ಲಿ ಸಿದ್ಧಿಸಿಕೊಂಡವರು ರಶೀದ್. ಅವರ ಮೊದಲ ಕತೆಯಿಂದಲೂ ಇದನ್ನು ಕಾಣಬಹುದು. ಇಲ್ಲಿಯ ‘ಮೋಹಕ ದ್ವೀಪದ ಮೂಗಿನ ತುದಿ’ ಕತೆಯೊಳಗೆ ಬರುವ ವಿವರಗಳು, ಘಟನೆಗಳು, ಮಾತುಗಳು ಆ ಆವರಣದಲ್ಲಿ ಅಲ್ಲದೇ ಬೇರೆಲ್ಲೂ ಘಟಿಸಲು ಅಸಾಧ್ಯವೆನ್ನುವ ಹಾಗೆ ಸಂಯೋಜನೆಗೊಂಡಿವೆ.
ಕತೆಗಾರ ಅಬ್ದುಲ್‌ ರಶೀದ್‌ ಹೊಸ ಕಥಾ ಸಂಕಲನ “ಲಾರ್ಡ್ ಕಾರ್ನ್‌ವಾಲೀಸ್ ಮತ್ತು ಕ್ವೀನ್‌ ಎಲಿಜಬೆತ್‌” ಗೆ ವಿವೇಕ ಶಾನಭಾಗ ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ