ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು, ಮಹಿಳೆಯು ಸಮಾಜದ ಒಂದು ಅಂಗ ಎಂಬುದು ಅಂಬೇಡ್ಕರ್ ಶಕೆ ಆರಂಭಗೊಂಡಾಗಿನಿಂದ ಅನೇಕರ ಕಣ್ಣು ತೆರೆಸಲು ಯತ್ನಿಸುತ್ತಲೇ ಬಂದಿದೆ. ಅದಕ್ಕೆ ಪೂರಕವಾಗಿ ಹಬ್ಬು ಸರ್, ಇಲ್ಲಿ ಆಚಾರ್ಯ ಕೃಪಲಾನಿ ಹೇಳಿದ ಹೀಗೊಂದು ಮಾತನ್ನು ನೆನೆಯುತ್ತಾರೆ, ‘ಹಕ್ಕಿಗೆ ಒಂದೇ ರೆಕ್ಕೆಯಿಂದ ಹೇಗೆ ಹಾರಲು ಸಾಧ್ಯವಿಲ್ಲವೋ ಹಾಗೆಯೇ ಮಹಿಳೆಯ ಅಭಿವೃದ್ಧಿಯಾಗದೇ ಇದ್ದಂತಹ ಸಮಾಜ ಕೂಡ ಅಂಥದೊಂದು ಅಂಗವಿಕಲತೆಯಿಂದ ಬಳಲುತ್ತದೆ’ ಈ ಮಾತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
ಅರುಣಕುಮಾರ ಹಬ್ಬು ಅವರು ಬರೆದ “ಮಹಿಳೆ ಮತ್ತು ಮಾಧ್ಯಮ – ಒಂದು ಅವಲೋಕನ” ಕೃತಿಯ ಕುರಿತು ಸುನಂದಾ ಪ್ರಕಾಶ ಕಡಮೆ ಬರಹ

Read More