Advertisement

Tag: ಆಸ್ಟ್ರೇಲಿಯಾ

ಹೀಗೊಂದು ಆಸ್ಟ್ರೇಲಿಯಾದ ಋತು-ಗಾನ: ಡಾ. ವಿನತೆ ಶರ್ಮ ಅಂಕಣ

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿಯ ಕಾಯುವಿಕೆಯಿದೆ. ಮಳೆಗಾಗಿ ಕಾಯುತ್ತಿರುವುದು ಭೂಮಿ, ಪ್ರಾಣಿಪಕ್ಷಿಗಳು ಮತ್ತು ನಾವು ಮನುಷ್ಯರು. ನಮ್ಮ ಕಾಯುವಿಕೆ ಪ್ರಕೃತಿಮಾತೆಗೆ ನಿಧಾನವಾಗಿ ಅರ್ಥವಾಯಿತೇನೊ ಅನ್ನುವಂತೆ ಭಾಸವಾಗುವುದು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬೀಸುವ ಬಿರುಗಾಳಿಯಿಂದ. ಇದು ಬರಲಿರುವ ಬೇಸಿಗೆಯ ಮಳೆಗಾಲದ ಚಿಹ್ನೆ. ಡಿಸೆಂಬರ್, ಜನವರಿ ತಿಂಗಳುಗಳಲ್ಲಿ ಮಳೆಗಾಲ. ಇದು ಒಮ್ಮೊಮ್ಮೆ ಫೆಬ್ರವರಿಗೂ ವಿಸ್ತರಿಸಿ ಅಲ್ಲಲ್ಲಿ ಪ್ರವಾಹಗಳು ಹರಿಯುತ್ತವೆ. ಮಾರ್ಚ್ ತಿಂಗಳಿಂದ ಮೇ ವರೆಗೆ ಶರತ್ಕಾಲ. ನಂತರ ಚಳಿಗಾಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ದೊಡ್ಡ ಜಿಜ್ಞಾಸೆಗಳು, ಸಣ್ಣ ನಿರ್ಧಾರಗಳು: ವಿನತೆ ಶರ್ಮಾ ಅಂಕಣ

ಶುಮಾಶೆರ್ ಹೇಳುವುದೇನೆಂದರೆ, ನಾವು ಮನುಷ್ಯರು ಪ್ರತಿಯೊಬ್ಬ ವ್ಯಕ್ತಿಗೂ ಸುಲಭವಾಗುವಂತೆ ಅವರ ಜೀವನ ಗುಣಮಟ್ಟ ವೃದ್ಧಿಸುವುದಕ್ಕೆ ಅನೂಕೂಲವಾಗುವಂತೆ ತಳಮಟ್ಟದಲ್ಲಿ ಪುಟ್ಟಪುಟ್ಟ ಮತ್ತು ಅನೇಕ ಬಹುತ್ವಗಳನ್ನು ಒಳಗೊಂಡ ತಾಂತ್ರಿಕತೆಗಳನ್ನು, ಕ್ರಮಗಳನ್ನು ಒಗ್ಗಿಸಿಕೊಳ್ಳಬೇಕು. ‘ದೊಡ್ಡದು’ ಅಥವಾ ಹಿರಿದು ಮುಖ್ಯ ಎನ್ನುವ ಆಲೋಚನಾಪರಿಯನ್ನು ಬದಲಿಸಿಕೊಳ್ಳಬೇಕು. ಅಂದರೆ ದೊಡ್ಡಮಟ್ಟದ ಅಭಿವೃದ್ಧಿಗಿಂತಲೂ ಸಣ್ಣ ಮಟ್ಟದ ಸ್ಥಳೀಯ ಅಭಿವೃದ್ಧಿ ಯೋಜನೆಗಳು ಜನರಿಗೆ ಹೆಚ್ಚು ಪ್ರಯೋಜನಕಾರಿ. ಇದೇ ಮಾತನ್ನು ಮಹಾತ್ಮ ಗಾಂಧಿ ಅವರೂ ಹೇಳಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹೊಸವರ್ಷ, ಹೊಸಜೀವನದ ಮಜಲುಗಳು: ವಿನತೆ ಶರ್ಮ ಅಂಕಣ

ನಾನೇನೋ ಒಂದಷ್ಟು ಹನಿ ಬಿತ್ತು ಅಂದೆ ಸರಿ. ಆದರೆ ಸಣ್ಣ ಮಳೆ ಬಿದ್ದದ್ದು ಬ್ರಿಸ್ಬೇನ್, ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ. ಇದನ್ನು ಅಪಹಾಸ್ಯ ಮಾಡುವಂತೆ ಉತ್ತರ ಕ್ವೀನ್ಸ್‌ಲ್ಯಾಂಡ್‌ನಲ್ಲಿರುವ (ಬ್ರಿಸ್ಬೇನ್ ನಗರದಿಂದ ೧,೪೦೦ ಕಿಮೀ ದೂರ) Townsville ನಗರ ಮತ್ತು ಅದರ ಆಸುಪಾಸಿನಲ್ಲಿ ಭಾರಿ ಮಳೆ ಬಿದ್ದು, ಪ್ರವಾಹ ಸ್ಥಿತಿ ಉದ್ಭವಿಸಿ ಈಗ ಅದನ್ನು ಕ್ವೀನ್ಸ್‌ಲ್ಯಾಂಡ್ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿವೆ. ಸಾವಿರಾರು ಜನರು ಪ್ರವಾಹಪೀಡಿತ ಸಂತ್ರಸ್ತರು ಎಂದು ನೋಂದಾಯಿಸಿಕೊಂಡಿದ್ದಾರೆ. ಅನೇಕ ಕಡೆ ರಸ್ತೆಗಳು ಮುಚ್ಚಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ