Advertisement

Tag: ಆಸ್ಟ್ರೇಲಿಯಾ

ಕದ್ದವರು, ಕಳಕೊಂಡವರು, ಕ್ಷಮಿಸಿ ಎಂದವರು

ವಸಾಹತುಶಾಹಿ-ಸಂಬಂಧಿತ ಅನ್ಯಾಯಗಳು ಮತ್ತು ತಾರತಮ್ಯಗಳು ಆಸ್ಟ್ರೇಲಿಯದಲ್ಲಿ ನಡೆಯುತ್ತಲೇ ಬಂದಿದೆ. ಆಸ್ಟ್ರೇಲಿಯಾದ ಅಬೊರಿಜಿನಲ್ ಜನರ ಕುಟುಂಬಗಳಿಂದ ಬಲವಂತವಾಗಿ ಅವರ ಮಕ್ಕಳನ್ನು ಬೇರ್ಪಡಿಸಿ ಬಿಳಿಯರ ಕುಟುಂಬಗಳಿಗೆ ಕೊಟ್ಟು ಬಿಳಿಯರ ಸಂಸ್ಕೃತಿ, ಶಿಕ್ಷಣ, ಕ್ರೈಸ್ತಧರ್ಮಗಳಿಗೆ ಅನುಗುಣವಾಗಿ ಮಕ್ಕಳು ಬೆಳೆಯುವಂತಾಗಿದ್ದು ಎರಡು ನೂರು ವರ್ಷಗಳಿಂದ ನಡೆದ ವಿಷಯ ಕಣ್ಣಿಗೆ ರಾಚುವಂತಿದೆ. ಅಂತಹ ‘ಸ್ಟೋಲನ್ ಜನರೇಶನ್’ ನ ದನಿಯಾಗಿದ್ದ ಅಂಕಲ್ ಆರ್ಚಿ ರೋಚ್ ಕಳೆದ ವಾರಾಂತ್ಯದಲ್ಲಿ ತೀರಿಕೊಂಡರು.  ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು

 ಪ್ರವಾಸಿಗರಿಗೆ, ಕ್ಯಾಂಪಿಗರಿಗೆ, ಹೇಳಿ ಮಾಡಿಸಿದ ಚಳಿಗಾಲವಿದು. ಕಳೆದ ಕೆಲ ವರ್ಷಗಳಿಗಿಂತಲೂ ಈ ಬಾರಿ ಅಧಿಕ ಚಳಿಯಿದೆ. ಹಾಗಾಗಿ ಸಮುದ್ರತಟದಲ್ಲಿರಲು ಜನ ಹಾತೊರೆಯುತ್ತಾರೆ. ಅದು ನಿಜವೆಂಬಂತೆ ರಾಣಿರಾಜ್ಯದ ದಕ್ಷಿಣ-ಪೂರ್ವ ಭಾಗದ ಪ್ರತಿಯೊಂದು ನಗರಪಾಲಿಕೆಯೂ ತಮ್ಮಲ್ಲಿನ ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲು ಬಲು ಆಕರ್ಷಕವಾದ ಜಾಹಿರಾತುಗಳನ್ನು ಹಾಕುತ್ತಿದ್ದಾರೆ. ಶಾಲೆಗಳಿಗೆ ಟರ್ಮ್ ೨ ನಂತರದ ಎರಡು ವಾರಗಳ ರಜೆ ಆರಂಭವಾಗಿದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಸೇವೆಯನ್ನು ಕಲಿಯುವ ಉತ್ಸಾಹಿ ಮಕ್ಕಳು

ಕೆನಡಾದಲ್ಲಿ ಹೈ ಸ್ಕೂಲ್ ಓದುವ ಮಕ್ಕಳು 40 ಗಂಟೆಗಳ ಸೇವಾ ಕಾರ್ಯಗಳನ್ನು ಮಾಡಬೇಕು. ಆದನ್ನು ಮುಗಿಸಿದರೆ ಮಾತ್ರ ಅವರಿಗೆ ಹೈ ಸ್ಕೂಲ್ ಮುಗಿಸಿದ ಪ್ರಮಾಣ ಪತ್ರವನ್ನು ಕೊಡುತ್ತಾರೆ. ಯಾವ ಸಂಸ್ಥೆಗೆ ಸೇವೆ ಮಾಡುತ್ತೇವೆ, ಎಷ್ಟು ಗಂಟೆಗಳು ಮಾಡುತ್ತೇವೆ ಎಂದು ನಮೂದಿಸಿ, ಸೇವಾ ಸಂಸ್ಥೆಗಳ ವಿವರ ಮತ್ತು ಅಲ್ಲಿನ ಪರಿಚಾರಕರ ಸಹಿಯ ಜೊತೆಗೆ ಅವರ ವಿವರಗಳನ್ನು ನಮೂದಿಸಬೇಕು. ಎಲ್ಲಾ ಮಕ್ಕಳು ಇದನ್ನು ಬಹಳ ನ್ಯಾಯಯುತವಾಗಿ ಮತ್ತು ನಿಖರ ಮಾಹಿತಿಯೊಂದಿಗೆ ಪೂರ್ಣ ಮಾಡುತ್ತಾರೆ. ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಕೊಡುವುದಿಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಅಬೊರಿಜಿನಲ್ ಗಳ ಭರವಸೆ, ಟೆನಿಸ್ ಮಿನುಗು ತಾರೆ ಆಶ್ ಬಾರ್ಟಿ

ಆಶ್ ಬಾರ್ಟಿ ಮೆಲ್ಬೋರ್ನ್ ನಗರದಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಪಂದ್ಯವನ್ನು ಗೆದ್ದಾಗ ಅಪ್ಪಅಮ್ಮಂದಿರು, ಆಪ್ತ ಗೆಳತಿಯರು ಅಲ್ಲದೆ ಇವೊನ್ ಗೂಲಗೊಂಗ್ ಕಾಲಿ ಕೂಡ ಹಾಜರಿದ್ದರು. ಜೊತೆಗೆ ಹೆಸರಾಂತ ಆಸ್ಟ್ರೇಲಿಯನ್ ಅಬೊರಿಜಿನಲ್ ಅಥ್ಲೀಟ್ ಕ್ಯಾಥಿ ಫ್ರೀಮನ್ ಪ್ರೇಕ್ಷಕ ವೃಂದದಲ್ಲಿ ಕೂತು ಪಂದ್ಯವನ್ನು ವೀಕ್ಷಿಸಿದ್ದರು. ತಾನು ಆಟವಾಡಿದ ಸ್ಥಳದಲ್ಲೇ ಇವರೆಲ್ಲರನ್ನು ಕಂಡು ಅವರೆಲ್ಲನ್ನು ಅಪ್ಪಿಕೊಂಡದ್ದೇ ಒಂದು ಮಹಾನ್ ಸಂತೋಷದ ಕ್ಷಣವೆಂದು ಆಶ್ ಹೇಳಿದಳು. ಅಬೊರಿಜಿನಲ್ ಮನೆಮನೆಗಳಲ್ಲಿ ಎದ್ದ ಹರ್ಷೋದ್ಗಾರ ಇನ್ನೂ ಕೇಳುತ್ತಿದೆ. ಡಾ. ವಿನತೆ ಶರ್ಮಾ ಬರೆದ ಆಸ್ಟ್ರೇಲಿಯ ಪತ್ರ

Read More

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ