Advertisement

Tag: ಎನ್. ಸಂಧ್ಯಾರಾಣಿ

ಶತಮಾನ ಕಂಡ ವಿಸ್ಮಯ; ಅನ್ನಪೂರ್ಣಾ ದೇವಿ: ದೇವಿಕಾ ನಾಗೇಶ್‌ ಬರಹ

“ಯಾವುದೇ ಜ್ಞಾನಾರ್ಥಿ ನಿನ್ನನ್ನು ಹುಡುಕಿ ಬಂದರೆ ನೀನು ಎರಡನೆಯ ಯೋಚನೆ ಮಾಡದೆ ನಿನ್ನಲ್ಲಿರುವ ಜ್ಞಾನವನ್ನು ಹಂಚಬೇಕು. ತನ್ನ ಕುಟುಂಬದ ಸದಸ್ಯರಲ್ಲದವರಿಗೆ ಸಂಗೀತ ಹೇಳಿಕೊಡಲು ಹಿಂಜರಿಯುವ ಉಸ್ತಾದರನ್ನು ನಾನು ನನ್ನ ಬದುಕಿನಲ್ಲಿ ಕಂಡಿದ್ದೇನೆ. ಬೇರೆ ಬೇರೆ ಗುರುಗಳಿಂದ ಕಲಿಯುವಾಗ ನಾನು ಅನುಭವಿಸಿದ ತೊಂದರೆ, ನೋವು ಮತ್ತು ಕಷ್ಟ ನಿನ್ನಿಂದ ಊಹಿಸಲು ಸಾಧ್ಯವಿಲ್ಲ. ಎಲ್ಲ ಕಷ್ಟಗಳ ನಡುವೆಯೂ ನನ್ನ ಭಿಕ್ಷಾ ಪಾತ್ರೆಯಲ್ಲಿ ಏನನ್ನು ಸಂಗ್ರಹಿಸಲು ಸಾಧ್ಯವಾಯಿತು ಅದನ್ನು ನಾನು ಧಾರಾಳವಾಗಿ ಹಂಚಿದ್ದೇನೆ.”
ಅಪೂರ್ವ ಸಂಗೀತಗಾರ್ತಿ ಅನ್ನಪೂರ್ಣಾ ದೇವಿಯವರ ಕುರಿತು ಅತುಲ್‌ ಮರ್ಚಂಟ್‌ ಜಟಾಯು ಬರೆದ “ಅನ್ನಪೂರ್ಣಾ ದೇವಿ” ಕೃತಿಯನ್ನು ಎನ್‌. ಸಂಧ್ಯಾರಾಣಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತ ದೇವಿಕಾ ನಾಗೇಶ್‌ ಬರಹ ಇಲ್ಲಿದೆ.

Read More

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ ಮತ್ತು ಆತನ ಮಕ್ಕಳು ಆ ಐದು ಜನರನ್ನೂ ಹಿಡಿದು, ಅವರೆಲ್ಲರ ಹೆಬ್ಬೆಟ್ಟುಗಳನ್ನೂ ಕತ್ತರಿಸಿ, ‘ಈಗ ಡಿಸಿ ಸಾಹೇಬರಿಗೆ ಹೇಗೆ ಅರ್ಜಿ ಕೊಡುತ್ತೀರೋ ನೋಡೋಣ!’ ಎಂದು ಕೂಗಾಡಿದ್ದಾರೆ. ಆ ಐದೂ ದಲಿತರೂ ಬ್ಯಾಂಡೇಜ್ ತೆಗೆದು, ನನ್ನ ಮುಂದೆ ತಮ್ಮ ಎಡಗೈ ಚಾಚಿದರು.
ಎನ್.‌ ಸಂಧ್ಯಾರಾಣಿ ಅನುವಾದಿಸಿರುವ ರೆಬೆಲ್‌ ಐಎಎಸ್ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಅವರ ಆತ್ಮಕಥನ “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

Read More

ಮಾಯವಾದ ಬೆಟ್ಟದಹೂವಿನ ಪರಿಮಳ

ಪವರ್ ಸ್ಟಾರ್ ಎಂಬ ಬಿರುದಿದ್ದರೂ ವಿನಯ ಮತ್ತು ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿಸಿದ್ದ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಹೋಗಿದ್ದಾರೆ.  ತಮ್ಮ ಹಾರ್ದಿಕ ನಗುವಿನಿಂದಲೇ ಎಲ್ಲರ ಮನಗೆಲ್ಲುತ್ತಿದ್ದ ಅವರು ಮಕ್ಕಳ ಪಾಲಿಗೆ ಪ್ರೀತಿಯ ಅಪ್ಪು.  ಹಾಗೆ ನೋಡಿದರೆ ಮಕ್ಕಳಿಗೆ ಮಾದರಿಯಾಗಿದ್ದ ಹೀರೋ ಅವರಾಗಿದ್ದರು. ರಿಯಾಲಿಟಿ ಶೋಗಳಲ್ಲಿ ಅವರು ಆಗೀಗ ಹೇಳುತ್ತಿದ್ದ ಮಾತುಗಳ ಹಿಂದೆ ಒಳ್ಳೆಯತನ, ಪ್ರಾಮಾಣಿಕತೆ….

Read More

ಸಂಧ್ಯಾರಾಣಿ ಸಿನಿ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

ಕಣ್ಣು ಮುಚ್ಚಿಕೊಂಡು ಓದುವ ಹಾಗಿದ್ದರೆ ಸಿನೆಮಾ ನೋಡಬೇಕಾಗಿಲ್ಲ ಅನ್ನುವಷ್ಟು ಕಣ್ಣಿಗೆ ಕಟ್ಟುವ ಬರವಣಿಗೆಗಳು ಅವು. ಬರೀ ಕಣ್ಣಿಗೆ ಮಾತ್ರವಲ್ಲ. ಸಿನೆಮಾದ ಸದ್ದುಗಳನ್ನು ಕಿವಿಗೆ, ಭಾವಗಳನ್ನು ಮನಸ್ಸಿಗೆ, ಕ್ಯಾಮರಾದ ಕೋನಗಳನ್ನು ಮಿದುಳಿಗೆ ಮತ್ತು ಸಿನೆಮಾ ಕೊನೆಗೆ ಉಂಟುಮಾಡುವ ತರ್ಕಗಳನ್ನು ವೈಚಾರಿಕತೆಗೆ ಅಕ್ಷರಗಳಲ್ಲೇ ದಾಟಿಸಿಬಿಡುತ್ತಿದ್ದರು. ಎಲ್ಲೂ ತರ್ಕಗಳಿಲ್ಲ, ತಪ್ಪುವ ಎಳೆಗಳಿಲ್ಲ. ಸಿನೆಮಾ ಹೇಳುವುದನ್ನು ಪರದೆ ಎಳೆದ ಹಾಗೆ ಕ್ವಚಿತ್ತಾಗಿ ಹೇಳಿ ಮುಗಿಸಿ ಮುಂದಿನ ಹದಿನೈದು ದಿನಗಳಿಗಾಗಿ ಕಾಯುವಂತೆ ಮಾಡುತ್ತಿದ್ದರು. ಸಂಪಾದಕನೂ, ಓದುಗರೂ ಏಕಪ್ರಕಾರವಾಗಿ ಕಾಯುತ್ತಿದ್ದ ಕೆಲವೇ ಬರವಣಿಗೆಗಳಲ್ಲಿ ಸಂಧ್ಯಾರಾಣಿ ಅವರದ್ದೂ ಒಂದಾಗಿತ್ತು.
ಎನ್. ಸಂಧ್ಯಾರಾಣಿ ಬರೆದ ‘ಸಿನಿ ಮಾಯಾಲೋಕ’ ಪುಸ್ತಕಕ್ಕೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ