Advertisement

Tag: ಎಸ್. ದಿವಾಕರ್

ಭಿನ್ನ ನೋಟದ ಪ್ರವಾಸ ಕಥನ: ಡಾ. ಪ್ರೇಮಲತ ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

ನಮ್ಮ ಲೇಖಕರಲ್ಲಿ ವಿ.ಕೃ. ಗೋಕಾಕರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದಿ ಫಸ್ಟ್ ರ್ಯಾಂಕ್ ಗಳಿಸಿದರಷ್ಟೆ. ಯು.ಆರ್. ಅನಂತಮೂರ್ತಿಯವರೂ ಕವಿ ರಾಮಚಂದ್ರ ಶರ್ಮರೂ ಕೆಲವು ವರ್ಷ ಇಂಗ್ಲೆಂಡಿನಲ್ಲಿ ವಿದ್ಯಾಭ್ಯಾಸ ಮಾಡಿದ್ದುಂಟು. ತರುಣ ಲೇಖಕರಲ್ಲಿ ಮುಖ್ಯವಾಗಿ ವಿವೇಕ ಶಾನಭಾಗರು ಉದ್ಯೋಗನಿಮಿತ್ತ ನಾಲ್ಕಾರು ವರ್ಷ ಲಂಡನ್ನಿನಲ್ಲಿದ್ದರು. ಇವರು ಯಾರೂ ಅಪ್ಪಿತಪ್ಪಿ ಕೂಡ ಯುನೈಟೆಡ್ ಕಿಂಗ್ಡಮ್ಮನ್ನು ಭಾರತದೊಡನೆ ತುಲನೆ ಮಾಡಲಿಲ್ಲವೆನ್ನುವುದು ಗಮನಾರ್ಹ. ಆದರೂ ಹಾಗೆ ತುಲನೆ ಮಾಡಿ ಬರೆಯುವುದರಿಂದ ಕೆಲವರು ಓದುಗರಾದರೂ ನಮ್ಮ ದೇಶದ ಹೀನಾಯ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬಹುದು. ಅವರಲ್ಲಿ ಇದಕ್ಕೇನು ಪರಿಹಾರವಿದ್ದೀತು ಎಂಬೊಂದು ಜಿಜ್ಞಾಸೆಯೇ ಉಂಟಾಗಬಹುದು. ಒಟ್ಟಿನಲ್ಲಿ ಅದೊಂದು ಒಳ್ಳೆಯ ಆಶಯವೇ.
ಡಾ. ಪ್ರೇಮಲತ ಬಿ. ಬರೆದ “ವಿದೇಶ ಪ್ರಯಾಣ… ಕೈತುಂಬ ಕಾಂಚಾಣ” ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

Read More

ಎಸ್.‌ ದಿವಾಕರ್‌ ಕವನ ಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

ಇಪ್ಪತ್ತನೆಯ ಶತಮಾನದಿಂದ ಹಿಂಸೆಯೇ ಸ್ಥಾಯಿಯಾಗಿ ಬದುಕೇ ಅಸಂಗತ, ಅಸಾಧ್ಯ ಸತ್ಯವಾಗಿ ಬಿಟ್ಟಿದೆ. ಇಂತಹದರಲ್ಲಿ ಕಾವ್ಯ ಏನು ಮಾಡಬೇಕು? ಉತ್ತರ ಕಾವ್ಯಕ್ಕೆ ಗೊತ್ತಿಲ್ಲ. ಕವಿ ಪ್ರಯತ್ನ, ಪ್ರಯೋಗ ಮಾಡುತ್ತಲೇ ಇರಬೇಕು. ನೋವಿನ, ಹಿಂಸೆಯ ಕ್ಷೋಭೆ, ಅಸ್ಥಿರತೆ ಅನಿಶ್ಚಿತತೆಗೆ ವಿರುದ್ಧವಾದ ಭಾಷೆಯ ಪಾರದರ್ಶಕತೆ, ಧ್ವನಿಗಳ ಲಯಗಾರಿಕೆ ಮತ್ತು ಬಿಂಬಗಳ ಖಚಿತತೆಯ ಮೂಲಕ ಹೇಳುವುದನ್ನು ಹೇಳಬೇಕು. ಅಸಹಜವಾದ ಅನುಭವವನ್ನು ಅಪಾರ ಸಹಜತೆಯ ಕಾವ್ಯಭಾಷೆಯನ್ನು ಶೋಧಿಸಿಕೊಂಡು ಬರೆಯಬೇಕು. ಇದನ್ನು ದಿವಾಕರರ ಕಾವ್ಯವು ಸಾಧಿಸಿದೆ. ಅವರ ಈ ಸಂಕಲನದ ಒಂದು ಕವಿತೆಯು ಪ್ರಾಸದ ಬಗ್ಗೆ ಇದೆ.
ಎಸ್.‌ ದಿವಾಕರ್‌ ಬರೆದ ವಿಧಾನಸಭೆಯಲ್ಲೊಂದು ಹಕ್ಕಿ ಕವನ ಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಎಸ್. ದಿವಾಕರ್ ಅವರ ಹೊಸ ಪುಸ್ತಕದಿಂದ ಒಂದು ಪ್ರಬಂಧ

“ಘನಗಂಭೀರ ವಿಮರ್ಶೆಯಂತೆ ಭಾಸವಾಗುವ ಈ ಒಂದು ವಾಕ್ಯವನ್ನು ನೋಡಿ: “ಶ್ರೀಯುತರು ವಿಚಾರ ಸಾಹಿತ್ಯ ರಚನೆಯಲ್ಲಿ ಸಿದ್ಧಹಸ್ತರಾಗಿದ್ದರೂ ಕೂಡ, ಪರಿಕಲ್ಪನೆಗಳನ್ನು ವಿವರಿಸುವಾಗ ಅವರು ಭಾಷೆಯನ್ನು ಉದ್ದೇಶಕ್ಕೆ ತಕ್ಕಂತೆ ದುಡಿಸಿಕೊಂಡರೂ ಕೂಡ, ಅವರ ಕೃತಿಗಳು ಕೆಲವು ಕಡೆ ನಿಜಕ್ಕೂ ಕಬ್ಬಿಣದ ಕಡಲೆ ಎನ್ನಬೇಕು.” ಇಲ್ಲಿನ ‘ಸಿದ್ಧಹಸ್ತ’, ‘ದುಡಿಸಿಕೊಂಡು’, ‘ಕಬ್ಬಿಣದ ಕಡಲೆ’ ಮುಂತಾದವನ್ನು ಎಷ್ಟು ಬಾರಿ ಓದಿಕೊಂಡರೂ ಯಾವುದೇ ರಸ ಹುಟ್ಟಲಾರದು.”

Read More

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಎಂ.ಎಸ್.ಕೆ.ಪ್ರಭು ಬರೆದಿಟ್ಟು ತೆರಳಿದ ಕಥಾ ಒಡಪುಗಳು

”ಪ್ರಭು ಅವರ ಕತೆಗಳಲ್ಲಿ ಮನುಷ್ಯ ಜಗತ್ತಿನೊಡನೆ ತಾನು ಇಟ್ಟುಕೊಳ್ಳುವ ಸಂಬಂಧದಲ್ಲೇ ತನ್ನತನವನ್ನು ಕಂಡುಕೊಳ್ಳುತ್ತಾನೆಂಬ ಕಾಣ್ಕೆಯಿದೆ. ಸಂಬಂಧವೆನ್ನುವುದು ವೈಯಕ್ತಿಕವಾಗಿರುವಂತೆ ಸಾಮಾಜಿಕವೂ ಆಗಿರುವುದುಂಟು. ಹಾಗಾಗಿ ಅದನ್ನು ವಿವಿಧ ಮಗ್ಗುಲುಗಳಿಂದ ಪರಿಶೀಲಿಸಬೇಕಾಗುತ್ತದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ