Advertisement

Tag: ಕತೆ

ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ

ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

“ಆ ಮುದ್ಕ ಸಂಕ್ರಪ್ಪ ದೇವಮ್ಮಕ್ಕನ ಗಂಡನೇ ಅಲ್ವಂತೆ. ಅವನೂರಾಗೆ ಬ್ಯಾರೆ ಸಂಸಾರ ಅದೆ. ಈವಮ್ಮಂಗೂ ಮಕ್ಕಳು ಮರಿ ಅವೆ. ಈ ವಯಸ್ನಾಗೆ ಈವಪ್ಪನ ಹಿಂದೆ ಓಡ್‌ಬಂದದೆ. ಸಂಕ್ರಪ್ಪಂಗೆ ರಿಟೈರ್ ಆಯ್ತಂತೆ. ಅದಕ್ಕೇ ಈಗ ಆವಯ್ಯನ್ನ ಬಿಟ್ಟು ಇನ್ನೆತ್ಲಾಗೋ ಹೋಗದೆ; ಘಾಟಿ ಹೆಂಗ್ಸು’ ಓನರ್ ಆಂಟಿಯಂತೂ ತಿಂಗಳೊಪ್ಪತ್ತು ಹೊಸರಾಗ, ಹಳೆರಾಗ ಎಲ್ಲವನ್ನೂ ಬೆರೆಸಿ ಹಾಡಿದರು. ಅಷ್ಟೆಲ್ಲ ಅಕ್ಕರೆಯ ಒರತೆಯಾಗಿರುವ ದೇವಮ್ಮಕ್ಕನ ನಿಜ ಬಣ್ಣ ಹೀಗಿರಬಹುದಾ ಎಂಬ ಅಚ್ಚರಿ ಮಲ್ಲಿಕಾಳಿಗೆ. ವಿಜಯಶ್ರೀ ಹಾಲಾಡಿ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಕತೆ: ನಕ್ಕ ನಗು

ಅವಳು ಹೀಗೆ ನಗಲು ಪ್ರಾರಂಬಿಸಿದಳೆಂದರೆ ಉಳಿದವರಿಗೆ ಗಾಬರಿಯಾಗುತ್ತಿತ್ತು. ನಕ್ಕು ಸುಸ್ತಾಗಿ ಕಣ್ಣ ತುದಿಯಿಂದ ಹರಿವ ನೀರನ್ನು ಸೆರಗಿನಿಂದ ಒರೆಸಿಕೊಳ್ಳುತ್ತಾ, ಮುಖ ಕೆಂಪಗೆ ಮಾಡಿಕೊಂಡು, ನೂರರ ವೇಗದಲ್ಲಿ ಓಡುತ್ತಿರುವ ಗಾಡಿ ಸಡನ್ ಬ್ರೇಕ್ ಹಾಕಿದಂತೆ ಸುಮ್ಮನಾಗುತ್ತಿದ್ದಳು. ನಲವತ್ತೈದು ವರುಷದ ಅವಳ ದಾಂಪತ್ಯಕ್ಕೆ ವ್ಯಾಖ್ಯೆ ಬರೆದಂತೆ ಬಂಡೆಕಲ್ಲಿನಂತೆ ಕುಳಿತು ಬಿಡುತ್ತಿದ್ದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಗಿರಿಜಾ ಶಾಸ್ತ್ರಿ ಬರೆದ ಕತೆ ‘ನಕ್ಕ ನಗು!

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ