Advertisement

Tag: ಕತೆ

ಸ. ಹರೀಶ್‌ ಬರೆದ ಈ ಭಾನುವಾರದ ಕತೆ

ಎಲ್ಲವನ್ನು ಕೇಳಿಸಿಕೊಂಡಿದ್ದ ಅವಿನಾಶ್ ಡಾಕ್ಟರಿಗೆ ಕೈ ಮುಗಿದ. ಅಲ್ಲಿ ಮಾಧವಿಗೆ ಮನಸ್ಸು ತೀರಾ ತಲ್ಲಣಿಸಿ ಹೋಯಿತು. ಯಾವಾಗ ಕೇರ್ ಟೇಕರ್ ತನ್ನ ಸುತ್ತಾಟ ಮುಗಿಸಿ ಮನೆ ಒಳಗೆ ಕಾಲಿಟ್ಟಳೊ, ಅವಳಿಗೆ ಮನುಷ್ಯರ ಬಗ್ಗೆ ನಂಬಿಕೆಯೇ ಹೊರಟು ಹೋಯಿತು. ಅವಳ ಮುಖದ ಮೇಲೆ ದುಡ್ಡು ಬಿಸಾಕಿ, `ಮುಖ ತೋರಿಸಬೇಡ, ನಿನಗೆ ಪೊಲೀಸಿಗೆ ಕೊಡದೇ ಬಿಟ್ಟಿದ್ದೀನಿ, ಗೆಟ್ ಲಾಸ್ಟ್’ ಅಂತ ನರನಾಡಿ ಕಿತ್ತುಬರುವಂತೆ ಅರಚಿದಳು.
ಸ. ಹರೀಶ್‌ ಕಥಾ ಸಂಕಲನ “ಅಮ್ಮ ಅಂದ್ರೆ ಭೂಮಿ”ಯ ಶೀರ್ಷಿಕೆ ಕತೆ, ನಿಮ್ಮ ಈ ಭಾನುವಾರದ ಓದಿಗೆ

Read More

ಆಶಾ ರಘು ಬರೆದ ಈ ಭಾನುವಾರದ ಕತೆ “ನೇಪಥ್ಯ”

ನಾನು ಬಣ್ಣ ಹಚ್ತಾ, ಮೊಳೆ ಹೊಡೀತಾ, ಲೈಟು ಕಟ್ತಾ ಬೆಳೆಯತೊಡಗಿದೆ. ಹರಿದ ಒಳ ಅಂಗಿಯ ಮೇಲೆ ರಾಜಕುಮಾರನ ಗರಿಗರಿ ಉಡುಪು..! ತಲ್ಲಣಗಳಲ್ಲಿ ಕುಸಿಯುವ ಮನಸ್ಸನ್ನು ಮೀರಿ ಹೊರಗೆ ಹಾಸ್ಯೋತ್ಸಾಹದ ಸಂಭಾಷಣೆಗಳ ಹೊನಲು..! ಒಮ್ಮೊಮ್ಮೆ ಇದು ತಿರುಗುಮುರುಗೂ ಆಗುವುದುಂಟು..! ನಾಟಕವಲ್ಲವೇ..!? ಎಷ್ಟೋ ಬಾರಿ ನಾನು ವಾಸ್ತವ ಸಂಗತಿಗಳಿಗೆ ಪ್ರತಿಕ್ರಿಯಿಸಿದರೆ, ಅದು ದಿಟವಾ ಅಥವಾ ನಾಟಕ ಆಡುತ್ತಿದ್ದೇನೆಯಾ ಅಂತ ನನಗೇ ಗುಮಾನಿ ಅನ್ನಿಸುವಷ್ಟು ಅಭಿನಯ ಕಲೆ ನನಗೆ ಒಲಿಯಿತು. ನಡೆಯುತ್ತಿದ್ದವನಿಗೆ ಸೈಕಲ್ ಬಂತು.
ಆಶಾ ರಘು ಬರೆದ “ಕೆಂಪು ದಾಸವಾಳ” ಕಥಾ ಸಂಕಲನದ ಕತೆ “ನೇಪಥ್ಯ” ಈ ಭಾನುವಾರದ ಬಿಡುವಿನ ಓದಿಗೆ

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು...

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ