Advertisement

Tag: ಕತೆ

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ

ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ