Advertisement

Tag: ಕಥಾಸಂಕಲನ

ನವೀನ್‌ ತೇಜಸ್ವಿ ಬರೆದ ಈ ಭಾನುವಾರದ ಕತೆ “ಬಂಗಾರಕಡ್ಡಿ ಡೇರೆಹೂವು”

ನೇತ್ರಿ ಮೆಡಿಕಲ್ ಶಾಪಿನಲ್ಲಿ ಡಾಕ್ಟರ್ ಬರೆದಕ್ಕಿಂತ ಅರ್ಧರ್ಧವೆ ಮಾತ್ರೆ ತೆಗೆಸಿದಳು. ಟಾನಿಕ್ ಇರಲಿಲ್ಲ. ಸ್ವಲ್ಪ ದೂರದಲ್ಲಿ ಮತ್ತೊಂದು ಮೆಡಿಕಲ್ ಶಾಪಿತ್ತು. ಅಲ್ಲಿಗೆ ನಡೆದು ಹೋಗಿ ಅದನ್ನೂ ಕೊಂಡು ಆಸ್ಪತ್ರೆಯ ಕಡೆ ಬಂದರೆ ಕೂತ ಜಾಗದಲ್ಲಿ ಅವ್ವ ಮಗು ಇರಲಿಲ್ಲ! ಹಳದಿ ಕವರ್ರು ಮಾತ್ರವೇ ಬೆಂಚಿನ ಮೇಲಿತ್ತು. ಹೋಗಿ ಮಾತ್ರೆಯನ್ನು ನರ್ಸಿಗೆ ತೋರಿಸಿ ಮತ್ತೆ ಬೆಂಚಿನ ಬಳಿ ಬಂದಳು. ಪಕ್ಕ ಕೂತಿದ್ದ ಅಜ್ಜನೊಬ್ಬ “ತಂಗಿ ನಿಮ್ಮವ್ವ ಇಲ್ಲೆ ಎಲ್ಲೊ ಹೊರಗಡೆ ಹೋದ್ರು. ಹನುಮಂತನ ಗುಡಿ ಹತ್ರ ಇರ್ಬಕಂತೆ. ಬರ್ತಾಳಂತೆ” ಎಂದನು.
ನವೀನ್‌ ತೇಜಸ್ವಿ ಕಥಾಸಂಕಲನ “ಬಂಗಾರಕಡ್ಡಿ ಡೇರೆಹೂವು”, ಶೀರ್ಷಿಕೆ ಕತೆ

Read More

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು...

Read More

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

“ಗೇದುಣ್ಣುವವರೇ ಬದುಕದ ಕಾಲದಲ್ಲಿ ಹುಟ್ಟುವ ಕತೆಗಳಾದರೂ ಉಳಿಯುತ್ತವೆ”: ಹೃದಯ ಶಿವ ಕಥಾಸಂಕಲನಕ್ಕೆ ಸ್ವಾಮಿ ಪೊನ್ನಾಚಿ ಬರಹ

ಹೃದಯಶಿವ ಅವರ ಕಥೆಗಳನ್ನು ಓದುವ ಕುತೂಹಲದ ಮಜವೇ ಬೇರೆ. ಕನಕಪುರದ ಕೆಬ್ಬರೆ ಗ್ರಾಮದಲ್ಲಿ ಶುರುವಾದ ಕಥೆ ಬೆಂಗಳೂರಿನ ಸಿನಿಮಾರಂಗದಲ್ಲಿ ಬಂದು ನಿಲ್ಲುತ್ತದೆ. ವೈಯಕ್ತಿಕ ದನಿಯ ಆಚೆಗೆ ಕತೆಗಳು ವಿಸ್ತಾರಗೊಳ್ಳುತ್ತಾ ಸಮಷ್ಟಿಯೆಡೆಗೆ ಹೋಗುತ್ತವೆ. ಬದುಕಿನ ಪರಸ್ಪರ ವೈರುಧ್ಯಗಳೇ ಹೆಚ್ಚು ಕಥೆಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕಥೆ ಓದುವಾಗ ಶುರುವಾಗುವ ನೆಗೆಟಿವ್ ಕಾಂಪ್ಲೆಕ್ಸ್ ಕೊನೆಯಲ್ಲಿ ಪಾಸಿಟಿವ್ ಆಗಿರುತ್ತದೆ. ಭರವಸೆ, ಆಶಾಭಾವ ಕಥೆಗಳಲ್ಲಿ ವ್ಯಕ್ತವಾಗುತ್ತವೆ.
ಹೃದಯ ಶಿವ ಹೊಸ ಕಥಾಸಂಕಲನ “ಸೂಪರ್ ಗಾಡ್ ಸಣ್ಣಯ್ಯ” ಕೃತಿಗೆ ಸ್ವಾಮಿ ಪೊನ್ನಾಚಿ ಮುನ್ನುಡಿ

Read More

ದುಃಖಾಂತ ಪಾತ್ರಗಳ ಬಿಕ್ಕುಗಳ ಸಂಕಲನ: ಶುಭಶ್ರೀ ಕಥಾಸಂಕಲನಕ್ಕೆ ವಿಕಾಸ ನೇಗಿಲೋಣಿ ಮುನ್ನುಡಿ

ಶುಭಶ್ರೀ ಬಳಸುವ ಭಾಷೆ ಬಹುತೇಕ ಉತ್ತರ ಕನ್ನಡದ ಕೆಳ ಸಮುದಾಯದ್ದು. ಜೊತೆಗೆ ಮಕ್ಕಳಾಗದವರ ಬಿಕ್ಕು, ಗಂಡನ ದೌರ್ಬಲ್ಯದ ನೆರಳಲ್ಲಿ ನರಳುವ ಹೆಣ್ಮಕ್ಕಳ ಬಿಕ್ಕು, ಮನೆ ತೊರೆದು ಹೋದವರ ನರಳುಗಳನ್ನೆಲ್ಲಾ ಗದ್ಗದಿತ ಕೊರಳಿನಿಂದ ಹೇಳುತ್ತಾ ಹೋಗುತ್ತಾರೆ. ಸಂಕಲನದ ಅತ್ಯಂತ ಗಾಢ ಕತೆಯೆಂದರೆ ‘ಹಗಲು ವೇಷ’. ಮನೆ ತೊರೆದು, ಅನ್ಯ ಕೋಮಿನ ಹುಡುಗನನ್ನು ಮದುವೆಯಾಗಿ, ನರಳುವ ಹೆಣ್ಮಗಳೊಬ್ಬಳ ಚಿತ್ರಣ ಇರುವ ಆ ಕತೆಯಲ್ಲಿ ಧರ್ಮ ಅಥವಾ ದ್ವೇಷದ ಸೋಂಕು ಇಲ್ಲದೇ, ಜಡ್ಜ್ ಮೆಂಟಲ್ ಕೂಡ ಆಗದಂತೆ ಹೆಣ್ಣೊಬ್ಬಳ ಅಂತಃಕರಣದಿಂದ ಆಯೇಷಾ ಅನ್ನುವ ಪಾತ್ರವನ್ನು ಕತೆಗಾರ್ತಿ ನಿರ್ವಹಿಸಿದ ಮೆಚ್ಚುವಂತಿದೆ.
ಶುಭಶ್ರೀ ಭಟ್ಟ ಹೊಸ ಕಥಾಸಂಕಲನ “ಬಿದಿಗೆ ಚಂದ್ರಮನ ಬಿಕ್ಕು” ಕೃತಿಗೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ