Advertisement

Tag: ಕನ್ನಡ ಸಾಹಿತ್ಯ

ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ”

ಯಕ್ಷಗಾನ ಬಿಟ್ಟು ಗಂಭೀರವಾಗಿ ಯಾವುದಾದರೂ ನೌಕರಿ ಸೇರಿಕೊಂಡು ದುಡಿಯಬೇಕು ಇದು ನಮ್ಮ ತಂದೆಯ ವರಾತ. ಯಕ್ಷಗಾನ ಕಲಾವಿದನಿಗೇನು ಸಮಾಜದಲ್ಲಿ ಗೌರವವಿಲ್ಲ. ಅಷ್ಟಾಗಿ ಈಗಿನ ಕಾಲದಲ್ಲಿ ಯಕ್ಷಗಾನದವನಿಗೆ ಯಾರು ಹೆಣ್ಣು ಕೊಟ್ಟಾರು. ರಾತ್ರಿಯಿಡೀ ನಿದ್ದೆ ಬಿಡುವುದು, ಹಗಲು ನಿದ್ದೆ ಮಾಡುವುದು ಗೂಬೆಯಂತೆ. ಇದೇನು ಅಂಥಹ ಪುರುಷಾರ್ಥ ಸಾಧನೆಯ ಹಾದಿಯಲ್ಲ. ಇವುಗಳೆಲ್ಲ ನನ್ನ ತಂದೆಯವರ ಹಳವಂಡ. ತಂದೆಯವರ ಈ ಧೋರಣೆಯು ನನಗೇನೂ ಪರಿಣಾಮ ಬೀರದು. ಯಾಕೆಂದರೆ ಅವರು ಯಾವುದನ್ನೂ ಗಂಭೀರವಾಗಿ ಸ್ವೀಕರಿಸಿದವರಲ್ಲ. ಮನಸ್ಸಿಗನಿಸಿದ್ದನ್ನು ಕಾರಿಕೊಂಡಾರು. ಅಲ್ಲಿಗೆ ಮುಗಿಯಿತು. ನನ್ನ ಈಗಿನ ಸ್ಥಿತಿ ತಿಳಿದರೆ ಬಿರುಸಾದ ಬಾಣಗಳು ಬಂದಾವು ಅವರ ಬತ್ತಳಿಕೆಯಿಂದ.
ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ” ನಿಮ್ಮ ಈ ಭಾನುವಾರದ ಓದಿಗೆ

Read More

ಕಣಗಾಲ ಮತ್ತು ಕಳ್ಳರು: ಎಸ್. ಗಂಗಾಧರಯ್ಯ ಅನುಭವ ಕಥನ

ಮೂರ್ತಿ ಚಕ್ಕನೆ ಎದ್ದವನೇ ನನ್ನನ್ನು `ಲೇ ಆ ಕಡಿಂದ ಓಡಿ ಬಾರೋ’ ಅಂತ ನನಗೆ ಕೂಗಿ ಹೇಳುತ್ತಾ ಕಳ್ಳನ ಹಿಂದೆ ಬಿದ್ದ. ನಾನು ಕೂತಲ್ಲಿಂದ ಬೇಗನೇ ಮೇಲೆದ್ದರೂ ಇದು ನಾನು ನೋಡಿದ್ದ ಮೊದಲ ಕಳ್ಳ ಹಾಗೂ ಕಳ್ಳತನವಾದ್ದರಿಂದ ಒಂಚೂರು ಗಲಿಬಿಲಿಗೊಂಡು ಅವರತ್ತ ತಕ್ಷಣ ಓಡಲಾಗಲಿಲ್ಲ. ಅವರಿಬ್ಬರೂ ಆಗಲೇ ನಮ್ಮ ಹೊಲವನ್ನು ದಾಟಿದ್ದರು. ಪಕ್ಕದ ಹೊಲದಲ್ಲಿ ಮೂರ್ತಿಯ ಕೂಗು ಕೇಳಿಸುತ್ತಿತ್ತು. ನಾನು ಉಸುರುಯ್ದುಕೊಂಡು ನಮ್ಮ ಹೊಲದ ಬದಿಗೆ ಬರುವಷ್ಟರಲ್ಲಿ ಮೂರ್ತಿ ಹಿಂದಿರುಗಿ ಬರುತ್ತಿದ್ದ. `
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎಂಟನೆಯ ಕಂತು

Read More

ಸಿಡ್ನಿ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ನನ್ನ ಸರದ ಕತೆ”

“ನನ್ನ ಸೊಸೆ ಆರತಿ ಸಿಂಗಪೂರಿನಿಂದ ತಂದುಕೊಟ್ಟಳು” ಎಂದು ನನ್ನನ್ನು ಹೊಗಳಿದರು. ನಾನು ಬಿಕೋ ಎನ್ನುವ ನನ್ನ ಮದುವೆಯ ಹಳೆಯ ಸರವನ್ನೇ ತೊಟ್ಟಿದ್ದೆ. ನನ್ನ ಅಕ್ಕ ತಂಗಿಯರು ನಮ್ಮ ಅತ್ತೆಯನ್ನು ಮನಸಾರೆ ಬೈದುಕೊಂಡರು. ನನ್ನ ಅಮ್ಮ ಆಕೆಯನ್ನು ಶಪಿಸಿದರು – ಈ ಮುದುಕಿಗೆ ಏನುಬಂತು!
ಸಿಡ್ನಿ ಶ್ರೀನಿವಾಸ್ ಬರೆದ ಕತೆ “ನನ್ನ ಸರದ ಕತೆ” ನಿಮ್ಮ ಈ ಭಾನುವಾರದ ಓದಿಗೆ

Read More

ಪ್ರಸ್ತುತ ಕಾಲಘಟ್ಟ ಮತ್ತು “ಬೆಂಕಿಯ ನೆರಳು”: ಎನ್.ಎಸ್. ಚಿದಂಬರರಾವ್ ಕಾದಂಬರಿಯ ಕುರಿತು ಸಿಂಧೂರಾವ್‌ ಟಿ. ಬರಹ

ಎಲ್ಲಾ ಕಾಲದಲ್ಲೂ ತಮ್ಮ ತಮ್ಮ ಪರಿಸ್ಥಿತಿಗಳಲ್ಲಿ ಸ್ವತಂತ್ರ ಆಲೋಚನೆ ಮತ್ತು ನಡವಳಿಕೆ ತೋರುವುದಕ್ಕೆ ಎಲ್ಲ ಯುವಜನಾಂಗವೂ ಆಶಿಸುತ್ತಲೆ ಇರುತ್ತದೆ. ಅದು ಸಹಜ ಮತ್ತು ಹಾಗೇ ಇರಬೇಕಾದ್ದು. ಕಾಲಕ್ಕೆ ತಕ್ಕಂತೆ ಅವರ ಅಭಿವ್ಯಕ್ತಿಗಳಿಗೆ ನಡವಳಿಕೆಗಳಿಗೆ ಕಡಿವಾಣಗಳು ಬಿಗಿಯಾಗಿ, ಸಡಿಲಾಗಿ, ಉದುರಿಹೋಗಿ ಎಲ್ಲಾ ಆಗಿದೆ. ಈ ಸ್ಥಿತ್ಯಂತರದ ಕಾಲವನ್ನು ಅವರು ಆತ್ಮವಿಶ್ವಾಸ, ಓದು, ಆರ್ಥಿಕ ಸ್ವಾತಂತ್ರ್ಯ ಇದ್ದಾಗ ಹೇಗೆ ನಿಭಾಯಿಸುತ್ತಾರೆ ಎಂಬುದು ಯಶಸ್ಸು ಅಥವಾ ದುರಂತದ ಪರಿಣಾಮವನ್ನು ತಂದಿಡುತ್ತದೆ. ಓದು ಬರಿದೆ ಡಿಗ್ರಿಗಳಾದಾಗ, ಕೆಲಸದ ಪದಕಗಳಾದಾಗ ಏನಾಗುತ್ತದೆ ಎಂಬ ಪರಿಣಾಮವನ್ನು ನೋಡುತ್ತಲೇ ಇದ್ದೇವೆ.
ದಿವಂಗತ ಎನ್.ಎಸ್. ಚಿದಂಬರರಾವ್ ಅವರ “ಬೆಂಕಿಯ ನೆರಳು” ಕಾದಂಬರಿಯನ್ನು ಪುಸ್ತಕ ಮನೆ ಪ್ರಕಾಶನ ಮರುಮುದ್ರಿಸಿದ್ದು, ಈ ಕೃತಿಯ ಕುರಿತು ಸಿಂಧುರಾವ್‌ ಟಿ. ಬರಹ ನಿಮ್ಮ ಓದಿಗೆ

Read More

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ “ಅವಳು ಮತ್ತು ಅವಳೊಂಟಿತನ”

ದಾರಿಯನ್ನು ಸವೆಸುವ ಸಮಯ ಎಲ್ಲ ಋತುಗಳನೂ ತೆರೆದು ತೋರಿಸುವುದು. ಅದ್ಯಾಕೋ ವಸಂತವೆಂಬ ಋತು ನನ್ನೊಳಗಿನ ಆರಜೂಗಳಿಗೆ ತುಂಬ ಆಪ್ತವೆನ್ನಿಸುವುದು. ಶಿಶಿರದಲ್ಲಿ ಉದುರುವ ಎಲೆಗಳನ್ನು ನೋಡುತ್ತಿದ್ದರೆ ಒಳಗೊಂದು ನಂಟನು ಬೆಸೆದುಕೊಳ್ಳಲಾಗದ ಮತ್ತೊಂದು ಅಸಹಾಯಕತೆಗೆ ಗಭರಾಹಟ್ ಧುತ್ತೆಂದು ಎದುರಿಗೆ ನನಗೂ ಎತ್ತರಕ್ಕೆ ಕಾಲಿಲ್ಲದಿದ್ದರೂ ಎದ್ದು ನಿಲ್ಲುವುದು.
ಲಕ್ಷ್ಮಣ ಶರೆಗಾರ ಬರೆದ ಕತೆ “ಅವಳು ಮತ್ತು ಅವಳೊಂಟಿತನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ