Advertisement

Tag: ಕನ್ನಡ ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಹಕ್ಕಿನ ಒಕ್ಕೊರಲ ಕೂಗು…

ಪ್ರತಿಯೊಬ್ಬರ ಮನೆಯಲ್ಲಿ ಸಂವಿಧಾನ ಇರಬೇಕು. ಇಂದು ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಚಿತ್ರದಲ್ಲಿ ತೋರಿಸಿದ ಹಾಗೆ ಒಂದು ಹೋರಾಟಕ್ಕೆ ಮಾಧ್ಯಮ ಮತ್ತು ಸಂಘಟನೆಗಳು ತುಂಬಾ ಅವಶ್ಯಕ. ಈ ಎರಡು ಪ್ರಾಮಾಣಿಕವಾಗಿದ್ದರೆ ಯಶಸ್ಸು ಶತಸಿದ್ಧ. ಇಂದಿನ ಹೋರಾಟವು ದಾರಿ ತಪ್ಪುವುದಕ್ಕೆ ಕಾರಣ ಕೇವಲ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವುದಕ್ಕಾಗಿ ಹೋರಾಟದ ದಿಕ್ಕನ್ನೇ ಬದಲಿಸುತ್ತಿರುವುದನ್ನು ಕಾಣುತ್ತೇವೆ.
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

Read More

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ