Advertisement

Tag: ಕನ್ನಡ ಸಾಹಿತ್ಯ

ನಮಗೊಂದು ಸೊಸೆ ಬೇಕು: ಕೆ. ಸತ್ಯನಾರಾಯಣ ಹೊಸ ಕಾದಂಬರಿಯ ಆಯ್ದ ಭಾಗ

ಸತೀಶ ದುರ್ದಾನ ತೆಗೆದುಕೊಂಡವನಂತೆ ರೂಮಿಗೆ ಹೋಗಿ ಬಾಗಿಲನ್ನು ಪಟಾರನೆ ಹಾಕಿಕೊಂಡ. ಹಾಲ್‌ನಲ್ಲೇ ಉಳಿದಿದ್ದ ಮೂರ್ತಿ-ಅನಿತಾ ಕೂಡ ಕಾಲೆಳೆದುಕೊಂಡು ರೂಮಿಗೆ ಹೋದರು. ಇಬ್ಬರೂ ಮಂಚದ ಮೇಲೆ ನೀಟಾಗಿ ಹಾಸಿದ್ದ ಹಾಸಿಗೆಯ ಮೇಲೆ ಕುಳಿತುಕೊಂಡು ಒಬ್ಬರನ್ನೊಬ್ಬರು ನೋಡುತ್ತಲೇ ಇದ್ದರು. ಮಾತೇ ಹೊರಡಲಿಲ್ಲ. ಅನಿತಾ ಹತ್ತು ಸಲ ಬಚ್ಚಲು ಮನೆಗೆ ಹೋಗಿ ಬಂದರು. ಮೂರ್ತಿ ಒಂದಿಪ್ಪತ್ತು ಸಲ ಕೂದಲನ್ನು ಕಿತ್ತು ಹಾಕಿದರು. ಬಲಗೈ ಮಧ್ಯ ಬೆರಳಿನ ಉಗುರನ್ನು ಕಡಿಯುತ್ತಲೇ ಇದ್ದರು. ದೀಪ ಆರಿಸಿ ಮಲಗಲು ಇಬ್ಬರಿಗೂ ಭಯವಾಯಿತು. ಬಲ್ಬ್‌ ಪ್ರತಿದಿವಸವೂ ಹೊರಡಿಸುವುದಕ್ಕಿಂತ ಹೆಚ್ಚಿನ ಕಾಂತಿಯನ್ನು ಹೊರಡಿಸುತ್ತಿದೆ ಅನಿಸಿತು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ನಮಗೊಂದು ಸೊಸೆ ಬೇಕು” ಕೃತಿಯ ಆಯ್ದ ಭಾಗ

Read More

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ