Advertisement

Tag: ಕನ್ನಡ ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ

ನನಗೆ ಕಾಲವೇ ನಿಂತಂತಾಗಿ ಬಿಟ್ಟಿತ್ತು. ಕೈಕಾಲುಗಳೆಲ್ಲ ತಣ್ಣಗೆ. ಅಣ್ಣನ ಸಾವು ಕಣ್ಣಿಗೆ ಚಿತ್ರ ಕಟ್ಟಿದಂತಾಯಿತು. ಇವನೇನಾಗಿ ಹೋದ? ಮೂರುವರೆ ಲಕ್ಷಕ್ಕೆ ಸಾಯುವಂಥವನಾ? ನಾವ್ಯಾರು ಇರಲಿಲ್ಲವೇ ಅವನಿಗೆ? ಯಾರನ್ನು ನೆನಪಿಸದಷ್ಟು ಬ್ಯಾಂಕಿನ ಕಿರುಕುಳವಿತ್ತಾ? ಆಡಳಿತ ಯಂತ್ರ ಅಧಿಕಾರ ವರ್ಗ ರೈತರ ಸಾವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲವೇ? ರಾಜ್ಯದಲ್ಲಿ ಅದೆಷ್ಟು ರೈತರ ಸಾವುಗಳು? ಅವರ ಕುಟುಂಬಗಳಿಗೆ ಯಾರು ದಿಕ್ಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ “ಕರಕಲಾದ ಅನ್ನದಗುಳು” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಸುಬ್ರಹ್ಮಣ್ಯ ಹೆಗಡೆ ಬರೆದ ಈ ಭಾನುವಾರದ ಕತೆ

ಅಪರಾಧವು ಸಾಮೂಹಿಕವಾದಾಗ ಅದು ಸಾಮಾಜಿಕ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ತನ್ಮೂಲಕ ನಮ್ಮ ಊರಿನ ಗಂಡಸರೆಲ್ಲ ತಿಂಗಳಿಗೆ ಒಂದೆರಡು ಬಾರಿ ಟೆಂಟಿನಲ್ಲಿ ಬಿಸಿಯಾಗತೊಡಗಿದರು. ಆಸೆಗಳಿಗೆ ಬೇಧಭಾವವಿಲ್ಲ. ಎಲ್ಲರಿಗು ಆಸೆಗಳಿದ್ದರಿಂದ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕೆಲವು ವರ್ಷಗಳ ನಂತರ ತಾಲೂಕು ಸೆಂಟರಿನಲ್ಲಿ ಮಿನಿ ಥೇಟರು, ವಿಡಿಯೋ ಪಾರ್ಲರುಗಳು ಶುರುವಾದ ಕಾರಣ ಜನರಿಗೆ ಒಳ್ಳೆಯ ಕ್ಲಾರಿಟಿಯ ಅನುಭವ ಸಿಕ್ಕು, ಟೆಂಟು ಸತ್ತು ಹೋಯಿತು.
ಸುಬ್ರಹ್ಮಣ್ಯ ಹೆಗಡೆ ಬರೆದ ಕತೆ “ಪರಾಜಿತ ವಿಠ್ಠಲ ವಿಜಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ

“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ