Advertisement

Tag: ಕನ್ನಡ ಸಾಹಿತ್ಯ

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಕೆಸರಿನಲ್ಲಿ ಬಿದ್ದು ಉರುಳಾಡಿದ
ಹಂದಿಗಳು ಬಂದು ಮೈಯ್ಯುಜ್ಜುತ್ತವೆ
ಕ್ಷಣಕ್ಕೊಮ್ಮೆ ಊಳಿಡುವ ಗುಳ್ಳೆನರಿಗಳು
ಬಂದು ಯಾರ್ಯಾರದ್ದೋ ಕಿವಿ ಕಚ್ಚುತ್ತವೆ
ನಡುನಡುವೆ ಆನೆಯ ಗತ್ತು
ಸಿಂಹದ ಗರ್ಜನೆ
ಚಿರತೆಯ ಓಟ
ಮತ್ತು
ಜಿಂಕೆ, ಮೊಲಗಳ ಸಾವು” -ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ