Advertisement

Tag: ಕನ್ನಡ ಸಾಹಿತ್ಯ

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More

ಬದುಕಿನ ಪಲಕುಗಳನ್ನು ಹಾಡಾಗಿಸಿದ ಕವಿ: ಶಿವ ಹಿತ್ತಲಮನಿ ಬರಹ

ಸಂಸಾರದ ಏರಳಿತದ ನೋವು ನಲಿವುಗಳ ಗಳಿಗೆಗಳನ್ನು ವಿವರವಾಗಿ ಹೇಳದೆಯೇ ಎಲ್ಲವನ್ನೂ ಅದೆಷ್ಟು ಸೂಕ್ಷ್ಮವಾಗಿ ತೆರೆದಿಟ್ಟರು ಹೆಚ್.ಎಸ್.ವಿ… ಸಮಯ ಹೋದಂತೆ ಸಂಸಾರ ಬೆಳೆದು, ಮಕ್ಕಳು ಪುಟ್ಟ ಪುಟ್ಟ ಹೆಜ್ಜೆಗಳಿಟ್ಟು ಮನೆ ತುಂಬಾ ಓಡಾಡಿ ತುಂಟಾಟ ಮಾಡುವಾಗ ಕವನ ಕಟ್ಟಿಕೊಟ್ಟಿದ್ದು ಮತ್ತೆ ಹೆಚ್.ಎಸ್.ವಿ.
ಎಚ್.‌ ಎಸ್.‌ ವೆಂಕಟೇಶಮೂರ್ತಿಯವರ ಕವಿತೆಗಳು ಹೇಗೆ ಬದುಕಿನ ಬೇರೆಬೇರೆ ಘಟ್ಟಗಳ ಕನ್ನಡಿಯಾಗಿದ್ದವು ಎಂಬುದರ ಕುರಿತು ಶಿವ ಹಿತ್ತಲಮನಿ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ

ಒಂದು ದಿನ ಕ್ಯಾಂಪಸ್ಸಿಗೆ ಬಂದ ಚಂದ್ರಮೌಳಿ ಸಂಜೆ ಸುಧಾಳೊಂದಿಗೆ ಟೀ ಕುಡಿಯುತ್ತಾ “ನೋಡು, ನಾನು ಕಲ್ಕತ್ತಾಗೆ ಹೋಗ್ತಿದ್ದೀನಿ. ಈ ಹೋರಾಟ ಎಲ್ಲ ಶಕ್ತಿಗುಂದುತ್ತಾ ಇದೆ. ಇದ್ರಿಂದೆಲ್ಲ ಏನಾದ್ರೂ ಆಗುತ್ತೆ ಅನ್ನೋ ನಂಬಿಕೆನೂ ನನಗಿಲ್ಲ. ಒಂದು ಅಮೆರಿಕನ್ ಕಂಪೆನಿಯಿಂದ ಒಳ್ಳೆ ಆಫರ್ ಇದೆ. ಎರಡು ವರ್ಷದ ಮೇಲೆ ಸ್ಟೇಟ್ಸ್‌ಗೆ ಹೋಗೋ ಛಾನ್ಸೂ ಇದೆ. ನಿಂಗೆ ಇದು ದ್ರೋಹದ ಥರ ಕಾಣಿಸಬಹುದು, ಪರ್ಸನಲ್ ಲೆವೆಲ್‌ನಲ್ಲೂ…
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ “ಯಾರಲ್ಲಿ, ಕಳೆದಿರುಳು….” ನಿಮ್ಮ ಈ ಭಾನುವಾರದ ಓದಿಗೆ

Read More

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ