Advertisement

Tag: ಕಾದಂಬರಿ

ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೊನೆಗೆ ರಾತ್ರಿ 12 ಗಂಟೆಗೆ ಯೂನಿಫಾರ್ಮ್ ಬಟ್ಟೆ ಕಾಣಿಸಿಕೊಂಡಿತು. ನಿಧಾನವಾಗಿ ಉಸಿರಿಡಿದುಕೊಂಡು ಬಾಬು ದೇವವನ್ನು ಕಲ್ಲುಮಣ್ಣಿನ ಕೆಳಗಿಂದ ಹೊರಕ್ಕೆ ತೆಗೆದು ನೋಡಿದರು! ಆತನ ದೇಹದ ಮೇಲಿನ ಯೂನಿಫಾರ್ಮ್ ಬಟ್ಟೆಗಳು ರಕ್ತದಿಂದ ಹೆಪ್ಪು ಕಟ್ಟಿಕೊಂಡಿದ್ದವು. ದೇಹ ನುಜ್ಜುಗುಜ್ಜಾಗಿ ಹೋಗಿತ್ತು. ದೊಡ್ಡ ಕಲ್ಲುಮಣ್ಣಿನ ರಾಶಿ ಅವನ ಮೇಲೆ ಕುಸಿದು ಬಿದ್ದು ಕೆಲವೇ ನಿಮಿಷಗಳಲ್ಲಿ ಅವನ ಪ್ರಾಣಪಕ್ಷಿ ಹಾರಿಹೋಗಿತ್ತು. ಅವನ ದೇಹವನ್ನು ನೋಡಿದ ಕಾರ್ಮಿಕರು ಸ್ವಲ್ಪ ಹೊತ್ತು ಏನೂ ಮಾತನಾಡದೆ ವಿದ್ಯುತ್ ಶಾಕ್ ಹೊಡೆದುಕೊಂಡಂತೆ ಹಾಗೇ ನಿಂತುಕೊಂಡೇ ಇದ್ದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಕಪ್ಪು ನೆಲದಲ್ಲಿ ಹುಟ್ಟಿಕೊಂಡಿತು ಚಿನ್ನದ ನಗರ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎಲ್ಲರೂ ಅವರನ್ನೇ ನೋಡುತ್ತಿದ್ದರು. ಸೆಲ್ವಿಗೆ ಬೇರೆ ದಾರಿ ಕಾಣದೇ ಇನ್ನೊಂದು ಕೈಯಲ್ಲಿದ್ದ ಪುಸ್ತಕಗಳನ್ನು ನೆಲಕ್ಕೆ ಹಾಕಿ ಮಣಿ ಕೆನ್ನೆಗೆ ಜೋರಾಗಿ ಬಾರಿಸಿದಳು. ಬಾರಿಸಿದ ಏಟಿಗೆ ಆ ಮರದಲ್ಲಿದ್ದ ಹಕ್ಕಿಗಳೆಲ್ಲ ಹಾರಿಹೋದವು. ಸುತ್ತಲೂ ನಿಂತು ನೋಡುತ್ತಿದ್ದ ಹುಡುಗರಲ್ಲಿ ಕೆಲವರು ತಮ್ಮ ಕೆನ್ನೆಗಳನ್ನು ಮುಟ್ಟಿನೋಡಿಕೊಂಡು ಕಣ್ಣುಕಣ್ಣುಬಿಟ್ಟರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಮೂರನೆಯ ಕಂತು ನಿಮ್ಮ ಓದಿಗೆ

Read More

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ