Advertisement

Tag: ಕೆಂಡಸಂಪಿಗೆ

ಹೂವೆಂಬ ವಿಸ್ಮಯ: ಚಂದ್ರಮತಿ ಸೋಂದಾ ಸರಣಿ

ಅದು ಸಂಜೆಯಲ್ಲಿ ಬಿರಿಯುವ ಹೂವು. ಬೆಳಗ್ಗೆವರೆಗೆ ಬಿಟ್ಟರೆ ಪೂರ್ತಿಯಾಗಿ ಅರಳುತ್ತದೆ. ಅರಳಿದ ಮೇಲೆ ಕಟ್ಟಿದರೆ ಹೂವಿನ ಎಸಳು ಉದುರುತ್ತದೆ. ಹಾಗಾಗಿ, ರಾತ್ರಿ ಹೊತ್ತಿನಲ್ಲಿ ದೀಪದ ಬೆಳಕಿನಲ್ಲಿ ಕಟ್ಟಬೇಕಿತ್ತು. ಹೀಗೆ ಕಟ್ಟಿದ ಮಾಲೆಯನ್ನು ಮಾರನೆಯ ಬೆಳಗ್ಗೆ ಮುಡಿಯಬೇಕು/ದೇವರಿಗೆ ಅರ್ಪಿಸಬೇಕು ಇಲ್ಲವೆ ಬಿಸಿಲಿನಲ್ಲಿ ಬತ್ತದ ಹುಲ್ಲಿನ ಮೇಲೆ ಒಣಗಿಸಿ ಅದನ್ನು ಕಾಪಿಡಬೇಕು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧ

ಹೀಗೆ ನೀರು ಹೊತ್ತುಕೊಂಡು ಹೋದರೂ ಯಾವಾಗಲೂ ಉದ್ದನೆಯ ಸಾಲು, ನೂಕು ನುಗ್ಗಲು! ಸರಿ, ಈ ಎಲ್ಲಾ ಕಿರಿಕಿರಿ, ಪಡಿಪಾಟಲುಗಳನ್ನು ಅನುಭವಿಸುತ್ತಲೇ ಹತ್ತಾರು ನಿಮಿಷ ಕಾದು ಒಳ ಹೋದರೂ, ಹೋದವರು ಬಾಗಿಲು ಹಾಕಿ, ಬಾಗಿಲಿನ ಚಿಲಕ ಸರಿ ಇಲ್ಲವೆಂದು ಬಕೆಟನ್ನೇ ಬಾಗಿಲಿಗೆ ಅಡ್ಡವಾಗಿ ಇಟ್ಟು, ಕುಕ್ಕರುಗಾಲು ಹಾಕಿ ಕೂತು ಒಂದು ಕೈಲಿ ಬಕೆಟ್, ಮತ್ತೊಂದು ಕೈಲಿ ಸಹಿಸಲಾರದ ವಾಸನೆಗೆ ಮೂಗು ಮುಚ್ಚಿ ಶೌಚ ನಡೆಸಬೇಕೆನ್ನುವಷ್ಟರಲ್ಲೇ ದಡಬಡ ಬಾಗಿಲು ಬಡಿತ, ಸ್ವಲ್ಪ ತಡವಾದರೂ ಬಾಗಿಲನ್ನೇ ಮುರಿಯುವ ಬೆದರಿಕೆ, ಇತ್ಯಾದಿ, ಇತ್ಯಾದಿ..
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮಕ್ಕಳ ಶಿಕ್ಷಣದಲ್ಲಿ ಕುಟುಂಬದ ಜವಾಬ್ದಾರಿ: ಅನುಸೂಯ ಯತೀಶ್ ಸರಣಿ

ನೋಡಿ ಮೇಡಮ್ ನೀವು ಮೊದಲು ಅವನಿಗೆ ಟಿವಿ ನೋಡೋದು ಬಿಡಿಸಿ. ಶಾಲೆಯಿಂದ ಬಂದಾಗ ಟಿವಿ ಮುಂದೆ ಕೂತ್ರೆ ಅರ್ಧ ರಾತ್ರಿವರೆಗೂ ಒಂದಾದ ಮೇಲೆ ಒಂದರಂತೆ ಧಾರವಾಹಿ ನೋಡ್ತಾನೆ. ಮಲಗೋದು ಸರಿ ರಾತ್ರಿ ಆಗಿರುತ್ತೆ. ಬೆಳಗ್ಗೆ ಏಳಲು ತಲೆಸುತ್ತು ಅಂತಾನೆ. ನಿದ್ದೆ ಬರುತ್ತೆ ಅಂತ ಹತ್ತು ಗಂಟೆಯಾದರೂ ಮಲಕೊಂಡವ್ನೆ. ಅದಕ್ಕೆ ನಿಮ್ಮ ಮೇಲೆ ಕೋಪ ಬಂದಿದೆ. ನಿಮ್ಮ ಮೇಲೆ ಕೂಗಾಡಿದ್ದು ಇನ್ಯಾಕೆ ಅಂದುಕೊಂಡ್ರಿ ಅಂತ ಆಕೆಯ ಕಿರುಚಾಟ, ಹಾರಾಟದ ಹಿಂದಿನ ಸತ್ಯ ಬಾಯ್ಬಿಟ್ಟಳು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಅಜ್ಜಿಯಂದಿರ ನೆನಪಿನ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಇನ್ನು ಉಳಿದಿದ್ದು ಸಣ್ಣಜ್ಜಿ. ಬಹಳ ಗಟ್ಟಿಗಿತ್ತಿ. ಬದುಕನ್ನು ಧೈರ್ಯದಿಂದ ಎದುರಿಸಿದ್ದಳು. ರಾತ್ರಿಯ ಸಮಯದಲ್ಲಿ ಅಂಗಳದಲ್ಲಿ ಮಲಗಿಕೊಂಡಿದ್ದಾಗ ಅನೇಕ ಕತೆಗಳನ್ನು ಹೇಳುತ್ತಿದ್ದಳು. ಅವೆಲ್ಲವೂ ರಾಜರ ಕತೆಗಳಾಗಿರುತ್ತಿದ್ದವು. ನನಗೀಗಲೂ ಆ ಕತೆಗಳು ನೆನಪಿವೆ. ಸಣ್ಣಜ್ಜಿಯೊಂದಿಗೆ ಒಡನಾಟ ಕಮ್ಮಿಯಾದರೂ ಅನೇಕ ನೆನಪುಗಳಿವೆ. ಸುಮಾರು ನಾಲ್ಕು ಸಾವಿರದಷ್ಟು ಹಾಡುಗಳನ್ನು ಗುಣಸಾಗರಿ ಜನಪದ ಮಹಿಳೆ ಕುರಿತು ಹಾಡುತ್ತಿದ್ದಳು ಎನ್ನುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಕೆಂಪು ಬಣ್ಣದ ರೇಷ್ಮೆ ಸೀರೆಯನ್ನು ಹಿಂದಿನೆರಡು ಬಟ್ಟೆ ತುಂಡುಗಳ ಜೊತೆಗೆ ಜೋಡಿಸುತ್ತಿದ್ದ ಶಂಕ್ರಜ್ಜಿಗೆ ಮದುವೆಯ ನೆನಪು ಬಂದರೂ ಅದು ಮನಸ್ಸಿಗೆ ಖುಷಿ ಕೊಡಲಿಲ್ಲ. ಹಸಿರು, ಹಳದಿ, ಕೆಂಪು ಬಣ್ಣಗಳಿಂದ ತಯಾರಾಗುತ್ತಿದ್ದ ಕೌದಿಗೆ ಸೇರಿಸಲು ಇನ್ನೊಂದೆರಡು ಬಟ್ಟೆಗಳಷ್ಟೇ ಬೇಕಿದ್ದದ್ದು. ಅವಳ ಮಡಿಲ ಬುಡದಲ್ಲಿಯೇ ಇತ್ತು ನೀಲಿ ಬಣ್ಣದ ಫ್ಯಾನ್ಸಿ ಸೀರೆ. ಅದನ್ನು ಎತ್ತಿಕೊಂಡು ಉಳಿದವುಗಳ ಜೊತೆಗೆ ಸೇರಿಸಿ ಹೊಲಿಯಲಾರಂಭಿಸಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಕೌದಿ” ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ