Advertisement

Tag: ಕೆಂಡಸಂಪಿಗೆ

ಒಂದಾದ ಮೇಲೊಂದು…: ಎಚ್. ಗೋಪಾಲಕೃಷ್ಣ ಸರಣಿ

ಬ್ಯಾಚುಲರ್ ಲೈಫ್‌ನ ಅಂದಿನ ನನ್ನ ರಾತ್ರಿ ಶಿಫ್ಟ್ ಕತೆ ಬೇರೆ ತೆರನಾದದ್ದು. ಒಂದು ಕಿಮೀ ಹಿಂದಿನ ಸ್ಟಾಪ್‌ನಲ್ಲಿ ಇಳಿದು ಅಲ್ಲಿ ಬಿಸಿ ಬಿಸಿ ಬಾದಾಮಿ ಹಾಲು ಎರಡು ಲೋಟ ಸುರಿದುಕೊಳ್ಳೋದು. ಅದಕ್ಕೆ ಮೊದಲು ಬನ್ನು ಚೌ ಚೌ ಬ್ರೆಡ್ ಟೋಸ್ಟ್ ಮುಕ್ಕಿ ಹೊಟ್ಟೆ ಹಗುರ ಮಾಡಿಕೊಳ್ಳುವುದು. ಆಗಿನ್ನೂ ಬ್ರೆಡ್ ಬನ್ ಒಳಗೆ ಕಾಂಗ್ರೆಸ್ ಹಾಕಿಕೊಂಡು ಆ ಅಂತ ಬಾಯಿಯನ್ನು ಹಿಪಪಾಟಮಸ್ ತರಹ ಅಗಲಿಸಿ ತಿನ್ನುವ ಕಲ್ಚರೇ ಹುಟ್ಟಿರಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೦ನೇ ಬರಹ ನಿಮ್ಮ ಓದಿಗೆ

Read More

ಎಂಜಿ ರೋಡಿನಲ್ಲೊಂದು ಸುತ್ತು: ವಿನಾಯಕ ಅರಳಸುರಳಿ ಅಂಕಣ

ಅದೇನೂ ಭಾರೀ ದೊಡ್ಡ ಪಬ್ಬಲ್ಲದಿದ್ದರೂ ಅಲ್ಲಿ ವೈಭವಗಳಿಗೇನೂ ಕಮ್ಮಿಯಿರಲಿಲ್ಲ. ಮುಂದೆ ಕೆಲವೇ ದಿನಗಳಲ್ಲಿ ಆ ಪಬ್ಬು ಮುಚ್ಚಲ್ಪಟ್ಟು, ಮುಂದೊಮ್ಮೆ ಆ ರಸ್ತೆಯಲ್ಲಿ ಹೋಗುವಾಗ ಮತ್ಯಾವುದೋ ಹೆಸರಿನ ಕಂಪನಿಯೊಂದು ಬೋರ್ಡು ತೊಟ್ಟುಕೊಂಡು ನಿಂತಿರುವುದು ಕಣ್ಣಿಗೆ ಬಿದ್ದಿತ್ತು. ಈ ಮಹಾನಗರಿಯ ಚಂಚಲತೆಯೇ ಅಂಥದ್ದು‌. ನೆನ್ನೆ ಹಳಕಲು-ಪೊದೆಗಳಿದ್ದ ಜಾಗದಲ್ಲಿ ಬೆಳಗಾಗುವಷ್ಟರಲ್ಲಿ ರಂಗ್ ಬಿರಂಗೀ ಕಟ್ಟವೊಂದು ತಲೆಯೆತ್ತಿಬಿಡುತ್ತದೆ. ಮನೆಯಂತೆ ಕಾಣುವ ಬಿಲ್ಡಿಂಗ್ ನೊಳಗೆ ನೂರಿನ್ನೂರು ಉದ್ಯೋಗಿಗಳಿರುವ ಕಂಪನಿಯೇ ಅಡಗಿಕೊಂಡಿರುತ್ತದೆ. ನೆನ್ನೆಯಷ್ಟೇ ಪ್ರಾರ್ಥನಾ ಮಂದಿರವಾಗಿದ್ದು, ಹತ್ತಾರು ಜನರ ಓಂಕಾರದಿಂದ ತುಂಬಿಹೋಗಿದ್ದ ಸಮುಚ್ಚಯವೊಂದು ನಾಳೆಯಾಗುವಷ್ಟರಲ್ಲಿ ಹತ್ತಾರು ಬಾಡಿಬಿಲ್ಡರ್‌ಗಳ ಕಸರತ್ತು ಶಾಲೆಯಾಗಿ ಬದಲಾಗಿಬಿಡುತ್ತದೆ!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಚಿಲೆ ದೇಶದ ಕವಿ ಎಲಿಕುರಾ ಚಿವಾಯ್‌ಲಾಫ಼್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ

ಚಿವಾಯ್‌ಲಾಫ಼್ ಅವರ ಅನೇಕ ಕವಿತೆಗಳು ಆ ಭೂಮಿಯಲ್ಲಿ ರೂಪಕಾತ್ಮಕವಾಗಿ ವಾಸಿಸುವ ತುರ್ತು ಬಯಕೆಗೆ ಸಾಕ್ಷಿಯಾಗಿವೆ. ಅವರ ಬುಡಕಟ್ಟಿನ ಪೂರ್ವಜರ ಮರೆತುಹೋದ ಅಥವಾ ನಿಗ್ರಹಿಸಲ್ಪಟ್ಟ ಉಪಸ್ಥಿತಿಯನ್ನು ಮಾತ್ರವಲ್ಲದೆ, ‘ಮಾಪುಚೆ’ ಸಂಸ್ಕೃತಿಯಲ್ಲಿ ಪವಿತ್ರವೆಂದು ಪರಿಗಣಿಸಲಾದ ಮತ್ತು ಸಾಂಪ್ರದಾಯಿಕ ಮಾಪುಚೆ ಭೂಮಿಯಲ್ಲಿ ಕೈಗಾರಿಕಾ ಯೋಜನೆಗಳಿಂದ ಹೆಚ್ಚಾಗಿ ಬೆದರಿಕೆಗೆ ಒಳಗಾಗುವ ಪ್ರಕೃತಿಯ ಧ್ವನಿಯನ್ನು ಸಹ ಅವರು ಮರಳಿ ಪಡೆಯುವ ಗುರಿಯನ್ನು ಹೊಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಚಿಲೆ (Chile) ದೇಶದ ಮಾಪುಚೆ ಬುಡಕಟ್ಟಿಗೆ ಸೇರಿದ ಮಾಪುಜುಗುನ್‌ (Mapuzugun) ಭಾಷಾ ಕವಿ ಎಲಿಕುರಾ ಚಿವಾಯ್‌ಲಾಫ಼್-ರವರ (Elicura Chihuailaf, 1953) ಕಾವ್ಯದ ಕುರಿತ ಬರಹ

Read More

ಆಸ್ಟ್ರೇಲಿಯಾ-ಭಾರತೀಯರ ಕತೆಗಳ ಜುಗಲ್ ಬಂದಿ: ಡಾ. ವಿನತೆ ಶರ್ಮ ಅಂಕಣ

ಒಮ್ಮೊಮ್ಮೆ ಇಲ್ಲಿ ಬಂದು ಸಂದ ಮೇಲೆ ಅಲ್ಲಿನ ತವರಿಗೆ ಭೇಟಿ ಕೊಟ್ಟಾಗ ಅಲ್ಲೂ ಇಲ್ಲ ಇಲ್ಲೂ ಇಲ್ಲ ಅನ್ನೋ ಎಡಬಿಡಂಗಿತನ ಧುತ್ತನೆ ಎದುರು ನಿಲ್ಲುತ್ತದೆ. ಆದರೆ ಆ ಎಡಬಿಡಂಗಿತನದಲ್ಲಿದೆ ಒಂದಷ್ಟು ನಗು, ಹರ್ಷ, ಉಲ್ಲಾಸ, ಪರಸ್ಪರತೆ, ಜೊತೆಯಾಗುವುದು. ಕುತೂಹಲ ಮೂಡಿಸುವುದು ಕಿರಿವಯಸ್ಸಿನ ಕತೆಗಾರರ ಅನುಭವ ಮೂಸೆಯಲ್ಲಿ ಪರಿಮೂಡುವ ಆಸ್ಟ್ರೇಲಿಯನ್-ಭಾರತೀಯತೆ ಕಲ್ಪನೆ ಮತ್ತು ಹೊಂದಾಣಿಕೆ. ಇವಷ್ಟೇ ಅಲ್ಲ. ಮಧ್ಯಮ ಮತ್ತು ಹಿರಿವಯಸ್ಸಿನ ಕತೆಗಾರರ ದನಿಯಲ್ಲಿ ಚಿತ್ರಿತವಾಗುವ ಹೊಸದೇಶ, ಅಪರಿಚಿತ ಸಮಾಜದ, ಅಲ್ಲಿನ ವ್ಯವಸ್ಥೆಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಯತ್ನಗಳು, ಅವಲ್ಲಿರುವ ಸಾಹಸಗಳು, ಸೋಲು-ಗೆಲುವು, ಆಂತರಿಕ ಒಳನೋಟಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಊರು ಕೇರಿ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಒಮ್ಮೊಮ್ಮೆ ಈ ನೆಲದ ಋಣದ ಕುರಿತು ಯೋಚಿಸುತ್ತೇನೆ. ಅಷ್ಟು ಗಾಢವಾದ ಋಣವೇ ಅದು? ಎಲ್ಲಿದ್ದರೂ ಊರಿನತ್ತ ಕೈಬೀಸಿ ಕರೆಯುವ ಮೋಹನ ಮುರಳಿಯ ಸೆಳೆತ ನಿಜವಾಗಿಯೂ ತೀವ್ರವಾದದ್ದೇ ಹೌದು. ಅದಲ್ಲದಿದ್ದರೆ ಹೋಗುವ ಯಾವುದೇ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ಮನೆಗೆ ಹೋಗ್ಬೇಕು, ನನ್ನನ್ನು ಊರಿಗೆ ಬಿಟ್ಟು ಬಾ ಅಂತ ಮತ್ತೆ ಮತ್ತೆ ಅಪ್ಪ ಹೇಳುತ್ತಿರಲಿಲ್ಲ. ನನಗಂತೂ ಬಾಲ್ಯಕ್ಕೆ ಜಿಗಿಯಬೇಕು ಅಂತ ಅನ್ನಿಸಿದ ಕೂಡಲೇ ನನ್ನೆಲ್ಲಾ ಕೆಲಸವನ್ನು ಬಿಟ್ಟು ಇಲ್ಲಿಗೆ ಬಂಡುಬಿಡುವುದು ಇತ್ತೀಚಿನ ನನ್ನಿಷ್ಟದ ಕೆಲಸಗಳಲ್ಲಿ ಒಂದಾಗಿ ಹೋಗಿದೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ