Advertisement

Tag: ಕೆಂಡಸಂಪಿಗೆ

ಡಾ. ಅಂಬೇಡ್ಕರ್‌ ಬರೆದ ಪ್ರೇಮಪತ್ರ…: ಸದಾನಂದ ಆರ್. ಅನುವಾದ

ಮೊದಲಿಗೆ, ಉಕ್ಕಿ ಹರಿಯುವ ಪ್ರೀತಿಯನ್ನು ನಿಯಂತ್ರಿಸಲು ನಾವು ಕಲಿಯಬೇಕು. ನೀನೀಗ ಪ್ರೀತಿಯ ಬಲಿಪಶುವಾಗಿರುವೆ ಎನ್ನುವ ಆತಂಕ ನನ್ನದು. ನನ್ನಿಂದ ದೂರವಿರಲು ನಿನ್ನಿಂದ ಸಾಧ್ಯವಿಲ್ಲ ಅನ್ನುವುದನ್ನು ನಾನು ಬಲ್ಲೆನು. ನನಗೂ ನೀನು ನನ್ನ ಹತ್ತಿರ ಇರಬೇಕೆಂಬ ಆಸೆಯಿದೆ. ಆದರೆ ನೀನು ನನಗೆ ಒಂದಿಷ್ಟು ಸಮಯಾವಕಾಶ ನೀಡಬೇಕೆಂದು ಕೋರುವೆ. ನಿನ್ನ ತಾಳ್ಮೆಯನ್ನು ನಾನು ಖಂಡಿತ ಪರೀಕ್ಷಿಸುವುದಿಲ್ಲ ಎನ್ನುವುದಂತೂ ಖಾತ್ರಿ.
ಡಾ. ಬಿ.ಆರ್. ಅಂಬೇಡ್ಕರ್‌ ತಮ್ಮ ಮದುವೆಗೂ ಮುನ್ನ ತಮ್ಮ ಪತ್ನಿಗೆ ಬರೆದಿದ್ದ ಪತ್ರವನ್ನು ಸದಾನಂದ ಆರ್. ಕನ್ನಡಕ್ಕೆ ಅನುವಾದಿಸಿದ್ದಾರೆ

Read More

ಬಾಲ್ಯದ ಅಟ, ಆ ಮೊಂಡಾಟ ಇನ್ನೂ ಮರೆತಿಲ್ಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ಮನೆಯಲ್ಲೋ ರಾಗಿ ಮುದ್ದೆ ಊಟ ಇರುತ್ತಿತ್ತು. ಅದು ಕಪ್ಪಾಗಿ ಇರುತ್ತಿದ್ದರಿಂದ ಉಣ್ಣೋಕೆ ಅಳುತ್ತಿದ್ದೆ. ಅಜ್ಜಿ‌ ಮನೆಯಲ್ಲಿ ಜೋಳದ ಮುದ್ದೆ ಬೆಳ್ಳಗೆ ಇರುತ್ತಿದ್ದರಿಂದ ಅದನ್ನು ಉಣ್ಣುತ್ತಿದ್ದೆ‌. ಒಮ್ಮೆ ಅಮ್ಮನ ಒತ್ತಾಯಕ್ಕೆ ಊಟ ಮಾಡಿ, ಕಕ್ಕಸ್ಸು ಕಪ್ಪಾದಾಗ ಬಹಳ ಬೇಸರವಾಗಿ ಮತ್ತೆ ಅಮ್ಮ ಉಣಿಸೋಕೆ ಬಂದಾಗ ಬಾಯೇ ತೆರೆಯದೇ ಊಟ ಮಾಡೋಕೆ ಹಠ ಮಾಡಿದ್ದೆ. ಅನ್ನಕ್ಕೆ ತತ್ವಾರ ಇದ್ದ ಕಾಲವದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂರನೆಯ ಕಂತು

Read More

ಬೆಂಗಳೂರು ಮತ್ತು ವಿಚಾರವಾದ: ಎಚ್. ಗೋಪಾಲಕೃಷ್ಣ ಸರಣಿ

ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಆಗಿದ್ದ ಶ್ರೀ ಗೋಕಾಕ್ ಅವರು ಬಾಬಾ ಶಿಷ್ಯರಾಗಿದ್ದರು. ಅದೇರೀತಿ ರಾಜ್ಯಪಾಲರು, ಕೇಂದ್ರ ರಾಜ್ಯ ಸಚಿವರು, ಖ್ಯಾತ ವೈದ್ಯರು, ಉತ್ತಮ ವಿದ್ಯೆ ಪಡೆದು ಉನ್ನತ ಸ್ಥಾನದಲ್ಲಿರುವವರು ಬಾಬಾ ಅವರ ಶಿಷ್ಯಗಣದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಸುಮಾರು ಭಕ್ತರು ತಮ್ಮ ಮಕ್ಕಳಿಗೆ ಸಾಯಿಬಾಬಾ ಹೆಸರನ್ನು ವಿವಿಧ ರೀತಿಯಲ್ಲಿ ಇಟ್ಟಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹೊನ್ನೆಯ ಹಾಡಿನಂಥಾ ಆತ್ಮಕಥನ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಕರ್ನಾಟಕ ಸಂಗೀತವನ್ನು ಶಾಸ್ತ್ರೀಯವಾಗಿ ಕಲಿತು ಆಕಾಶವಾಣಿ ಗಾಯಕಿಯಾಗಿ ಭಾವಗೀತೆಯನ್ನು ಪಿ. ಕಾಳಿಂಗರಾವ್ ಅವರ ಜೊತೆಯಲ್ಲಿ ಹಾಡಿ ಪ್ರಚಾರ ನೀಡಿದ್ದು ಮೊದಲಿಗೆ ಲೀಲಾವತಿಯವರೇ. ಭಾವಗೀತೆ ಭಕ್ತಿಗೀತೆ ಕೀರ್ತನೆಗಳು ವಚನಗಳು ಗಜಲ್‌ಗಳು ಜನಪದಗೀತೆಗಳು, ರವೀಂದ್ರ ಸಂಗೀತ ಹೀಗೆ ಬೇರೆ ಭಾಷೆಯ ಇತರ ಪ್ರಾಕಾರಗಳನ್ನೂ ಕಲಿತು ಹಾಡಿರುವುದಲ್ಲದೇ ಮಕ್ಕಳ ಕತೆಗಳು ರಂಗರೂಪಕಗಳು ಎಲ್ಲಾ ರೀತಿಯಲ್ಲಿ ಅವರು ಆಕಾಶವಾಣಿಯಲ್ಲಿ ಕೆಲಸ ನಿರ್ವಹಿಸುತ್ತಲೇ ಮುಂದೆ ಆಕಾಶವಾಯ ಸಂಗೀತ ಸಂಯೋಜಕಿಯೂ ಆಗುತ್ತಾರೆ.
ಎಚ್. ಆರ್. ಲೀಲಾವತಿ ಆತ್ಮಕಥನ “ಹಾಡಾಗಿ ಹರಿದಾಳೆ” ಕೃತಿಯ ಕುರಿತು ಕೆ.ಎನ್.ಲಾವಣ್ಯ ಪ್ರಭಾ ಬರಹ

Read More

ಕಾಷ್ಟತಲ್ಪದೊಂದಿಗೆ ಗ್ರೂಪ್ ಸ್ಟಡಿ: ಸುಮಾವೀಣಾ ಸರಣಿ

ಗ್ರೂಪ್ ಸ್ಟಡಿಯಲ್ಲಿ ಮೆಹೆಂದಿ ಹೇಗೆ ಮಾಡುವುದು. ನೇಲ್ಸ್ ಹೇಗೆ ಶೇಪ್ ಮಾಡುವುದು, ನೇಲ್ ಪಾಲಿಶ್ ಹೇಗೆ ಹಚ್ಚಬೇಕು ಇತ್ಯಾದಿ ಚರ್ಚೆಗಳ ಸಂಗಡ ಮಾಸಿಕ ಮುಟ್ಟಿನ ವಿಚಾರಗಳೂ ಇರುತ್ತಿದ್ದವು. ಮಾಸಿಕ ಮುಟ್ಟಿನ ವಿಚಾರ ಈಗಿನ ಮಕ್ಕಳಿಗೆ ತಿಳಿದಿರುವಷ್ಟು ಆಗ ನಮಗೆ ತಿಳಿದಿರಲಿಲ್ಲ. ಹಾಗಾಗಿ ಆ ವಿಚಾರ ತಿಳಿಯುವ ಕುತೂಹಲ ಇರುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ