Advertisement

Tag: ಕೆಂಡಸಂಪಿಗೆ

ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ಇಲ್ಲಿ ನಲವತ್ತೊಂಬತ್ತು ಪುಟ್ಟ ಪುಟ್ಟ ಅಧ್ಯಾಯಗಳು ಇಡೀ ಕಾದಂಬರಿಯ ಸಾರಸತ್ವವನ್ನು ಉಣಬಡಿಸುತ್ತವೆ. ಹದವರಿತ ಭಾಷೆಯಲ್ಲಿ ಮೈನವಿರೇಳಿಸುವ ಸಂಭಾಷಣೆಗಳು ಓದುಗರಿಗೆ ಕಚಗುಳಿ ಇಡುತ್ತವೆ. ಲೇಖಕರ ಬಾಲ್ಯದ ಅನುಭವಗಳ ಒಟ್ಟು ಮೊತ್ತ ಈ ಕನಸೇ ಕಾಡು ಮಲ್ಲಿಗೆ. ಇಲ್ಲಿ ಬಹುತೇಕ ನೈಜ ಅನುಭವಗಳೆ ಕಾದಂಬರಿಯ ಜೀವ ದ್ರವ್ಯವಾಗಿದ್ದರೂ ಲೇಖಕರು ತಮ್ಮ ಬರಹದ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ಪೂರಕ ಪಾತ್ರಗಳನ್ನ ಕಲ್ಪಿಸಿಕೊಂಡು ಆ ಕಥೆಗೆ ವಿಭಿನ್ನ ಆಯಾಮಗಳನ್ನು ಕಲ್ಪಿಸಿದ್ದಾರೆ.
ಮಧು ವೈ.ಎನ್.‌ ಕಾದಂಬರಿ “ಕನಸೇ ಕಾಡುಮಲ್ಲಿಗೆ” ಕುರಿತು ಅನಸೂಯ ಯತೀಶ್‌ ಬರಹ

Read More

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಬಸ್ಸಪ್ಪ ಮೇಷ್ಟ್ರ ಸೈಕಲ್ ಪಂಕ್ಚರ್ ಪ್ರಸಂಗ!: ಬಸವನಗೌಡ ಹೆಬ್ಬಳಗೆರೆ ಸರಣಿ

ಮೊದಲೆಲ್ಲಾ ಚಾಡಿ ಹೇಳಿದವರಿಗೆ ಹೊಡೆಯೋ ಬಸ್ಸಪ್ಪ ಮೇಷ್ಟ್ರು ಈ ಸಲ ಅವರಿಗೆ ಹೊಡೆಯಲಿಲ್ಲ. ಬದಲಿಗೆ ನನಗೇ ಜುಳುಪಿಯಿಂದ ಬಾರಿಸಲು ಶುರು ಮಾಡಿದರು! ನೋವಿನಿಂದ ಎಷ್ಟೇ ಅಬ್ಬರಿಸಿದರೂ ಅವರು ಹೊಡೆತ ಮಾತ್ರ ನಿಲ್ಲಿಸಲಿಲ್ಲ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

“ದಿಟದ ದೀವಿಗೆ”: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಆತ್ಮಕಥನದ ಪುಟಗಳು

ನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು. ಅಮ್ಮನನ್ನು ನನ್ನ ಅಪ್ಪ ಕೂಡಿಕೆ ಮಾಡಿಕೊಂಡಾಗ ಮೂವತ್ತು ವರ್ಷಗಳ ಅಂತರವಿತ್ತು. ನನ್ನ ಅಪ್ಪ ಆರಡಿ ಎತ್ತರದ ಬೃಹದ್ದೇಹಿ! ಆದರೆ, ಅಮ್ಮ ಐದಡಿ ಎತ್ತರದ ಪೀಚಲು ಹೆಂಗಸು! ದೈಹಿಕವಾಗಿ ಇಬ್ಬರದೂ ಅಜ-ಗಜಾಂತರ. ಆದರೆ, ಆ ಕಾಲಕ್ಕೆ ಈ ಬಗೆಯ ಕೂಡಿಕೆಯೊ ವಿವಾಹವೊ ನಡೆಯುತ್ತಿದ್ದುದು ಸರ್ವೇ ಸಾಮಾನ್ಯವಾಗಿತ್ತು!
ವಿದ್ವಾಂಸರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಅವರ ಆತ್ಮಕಥನ “ದಿಟದ ದೀವಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ