Advertisement

Tag: ಕೆಂಡಸಂಪಿಗೆ

ಕಾಡುವ ಕಷ್ಟದ ಆ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಅಂದು ಪೋಲೀಸರು ಹೋದ ಮೇಲೂ ಅಮ್ಮ ಅಳುತ್ತಲೆ ಇದ್ದಳು. ಬಡವರ ಪಾಲಿಗೆ ಕಣ್ಣೀರೇ ಅಲ್ಲವೆ ಸಾಂತ್ವನದ ಸೆಲೆಗಳು ಆಗಾಗಿ ಧಾರಾಕಾರವಾಗಿ ಹರಿಯುತ್ತಲೆ ಇತ್ತು. ಊರಿನಲ್ಲಿ ಯಾರ್ಯಾರೊ ಸಹಾಯವನ್ನು ಮಾಡಿದರು. ಅಮ್ಮನ ಒಳ್ಳೆಯ ಗುಣವೇ ಅದಕ್ಕೆ ಕಾರಣವಾಗಿತ್ತು. ಇದೆಲ್ಲ ನೋಡುತ್ತಿದ್ದಾಗ ದೇವರ ಮೇಲೆ ಕೋಪವು ಬರುತ್ತಿತ್ತು. ನನ್ನ ಓರಗೆಯವರೆಲ್ಲ ನಿಮ್ಮ ಮನೆಯ ಸಾಮಾನುಗಳನ್ನು ಪೋಲಿಸ್ನೋರು ತಗೊಂಡ್ಹೋದ್ರು ಅನ್ನುತ್ತಿದ್ದರು. ಆಗ ಇಡೀ ವ್ಯವಸ್ಥೆಯ ಮೇಲೆ ರೋಷವೇನೊ ಬರುತ್ತಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಸೀಟಿ ಬಾಬು ಮತ್ತು ಇತರ ಪರಿಚಿತರು: ವಿನೋದಕುಮಾರ್ ಕುಲಕರ್ಣಿ ಬರಹ

ನಾವು ಚಿಕ್ಕವರಿದ್ದಾಗ ನಮ್ಮನ್ನು ಮಗ್ಗಿ ಬರುತ್ತವೊ ಇಲ್ಲವೋ ಎಂದು ಪರೀಕ್ಷಿಸಲು ಕೇಳುತ್ತಿದ್ದ ಹಾಗೆ ‘ಎರಡ ಒಂಬತ್ಳೆ’, ‘ನಾಲ್ಕ್ ಐದ್ಳೆ’, ‘ಹನ್ನೆರಡ ಎರಡ್ಲೆ’ ಎಷ್ಟು ಎಂದು ಕೇಳುತ್ತಿದ್ದ ಹಾಗೆ ಕೇಳಬೇಕಿತ್ತು. ಹಾಗೆ ನಾವು ಕೇಳಿದ್ದೆ ಕಂಪ್ಯೂಟರಿನ ಸಂಗ್ರಹ ಮಾಹಿತಿ ನೀಡುವ ಉತ್ತರದಂತೆ ಪಟಾಪಟ್ ಎಂದು ಉತ್ತರಿಸಿ ಬಿಡುತ್ತಿದ್ದ. ಅಲ್ಲದೆ ಕೇಳುವ ಪ್ರಶ್ನೆಯು ಒಬ್ಬರ ಬಾಯಿಂದಲೇ ಬರುತ್ತಿದ್ದುದಾಗಿರಲಿಲ್ಲ.
ವಿನೋದಕುಮಾರ್ ಕುಲಕರ್ಣಿ ಬರಹ ನಿಮ್ಮ ಓದಿಗೆ

Read More

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ

ಸಾಲಿಗೆ ಹೋಗೋ ಮಕ್ಕಳಿಗಂತೂ ಈ ಕೊಲೆ ಸುದ್ದಿ ತಾವು ನೋಡಿದ ಸಿನೆಮಾ ಕಥಿ ಹಂಗ ಕಂಡಿತು. ಕೆಲವೊಬ್ಬರಂತೂ ‘ಪುಟಾಣಿ ಏಜಂಟ್’ ಆಗಿಬಿಟ್ಟರು. ಕೊಲೆಗಾರರನ್ನು ಹಿಡಿಲಿಕ್ಕೆ ಪೊಲೀಸರು ನಾಯಿ ತೊಗೊಂಡು ಬಂದಾರಂತ, ಅವು ಅಪರಾಧಿಗಳ ವಾಸನಿ ಹಿಡಿದು ಹುಡಿಕಿಕೊಂಡು ಊರು ಹೊರಗ ಹರೀತಿದ್ದ ನದಿ ತನಕ ಹೋಗಿ ನಿಂತವು ಅಂತೆಲ್ಲ ಮಾತಾಡಿಕೊಂಡರು. ಅದೇ ಸಾಲಿಯೊಳಗ ಐದನೇತ್ತಿ ಓದ್ತಿದ್ದ ಪುಟ್ಟಿ ಈ ಮಾತುಗಳನ್ನೆಲ್ಲ ಕೇಳಿಸಿಕೊಂಡಾಗ ಆಕಿಗೆ ಹಿಂದಿನ ರಾತ್ರಿ ಸಬ್ ಇನ್ಸಪೆಕ್ಟರ್ ರವಿ ಅವರ ಮನಿಗೆ ಬಂದಿದ್ದು ನೆನಪಾಯಿತು.
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಶಿಕ್ಷೆ” ನಿಮ್ಮ ಓದಿಗೆ

Read More

ಥಿಯೇಟರ್‌ನಲ್ಲಿ ಕನ್ನಡ ಢಿಂಢಿಮ….: ಎಚ್.ಗೋಪಾಲಕೃಷ್ಣ ಸರಣಿ

ಅರವತ್ತರ ದಶಕದಲ್ಲಿ ಬೆಂಗಳೂರಿನಲ್ಲಿ ಮೊದಲು ಐದು ಜಾವಾ ಮೋಟಾರ್ ಸೈಕಲ್ ಇತ್ತು. ನಂತರ ನಿಧಾನಕ್ಕೆ tvs ಅದರ ಅಣ್ಣ ತಮ್ಮ ಬಂದವು. ಲಾಂಬ್ರೆಟ್ಟಾ ಗಾಡಿ ವಿದೇಶದಲ್ಲಿ ಹೆಂಗಸರು ಓಡಿಸುವ ಗಾಡಿ ಅಂತ ಕೆಲವರು ಲೇವಡಿ ಮಾಡುತ್ತಿದ್ದರು. ಎನ್ ಫೀಲ್ಡ್ ಸುಮಾರು ಇದೇ ಸಮಯ ಪ್ರವೇಶ. ಎಂಬತ್ತರ ದಶಕದ ನಡುವಿನಲ್ಲಿ ಚೇತಕ್ ಗಾಡಿ ಹೆಸರು ಓಡುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ