Advertisement

Tag: ಕೆಂಡಸಂಪಿಗೆ

ನೀನೆ ಭುವನಕ್ಕಾರಾಧ್ಯನೈ… ಚೂತರಾಜಾ: ಚಂದ್ರಮತಿ ಸೋಂದಾ ಸರಣಿ

ಮಲೆನಾಡು, ಕರಾವಳಿ ಭಾಗದಲ್ಲಿ ಕೊಸಗಾಯಿ ಅಥವಾ ಕುಚ್ಚುಮಾವಿನಕಾಯಿ ಎನ್ನುವುದು ಮಳೆಗಾಲದಲ್ಲಿ ಅಡಿಗೆಗೆ ಸಹಾಯಕ. ಕುದಿಯುವ ಹಂತದಲ್ಲಿದ್ದ ನೀರಿಗೆ ತೊಳೆದು ಶುದ್ಧಗೊಳಿಸಿದ ಮಾವಿನಕಾಯಿಗಳನ್ನು ಹಾಕಿ ಒಂದು ಕ್ಷಣಬಿಟ್ಟು ಅದನ್ನು ಅಲ್ಲಿಂದ ತೆಗೆದು ಆರಿದ ಮೇಲೆ ಉಪ್ಪುನೀರಿನಲ್ಲಿ ಹಾಕಿಡಬೇಕು. ಇದರಿಂದಲೂ ಹಸಿಮಾವಿನಕಾಯಿಯಲ್ಲಿ ಮಾಡುವ ವ್ಯಂಜನಗಳನ್ನೆಲ್ಲ ಮಾಡಬಹುದು. ಇದಕ್ಕೂ ಅಷ್ಟೆ, ಎಲ್ಲ ಮಾವಿನಕಾಯಿಯೂ ಬಾರದು. ಸಿಪ್ಪೆ ದಪ್ಪವಿದ್ದು ಉಪ್ಪಿನಲ್ಲಿ ಕರಗಬಾರದು. ಜೋಓಓ ಎಂದು ಹೊಯ್ಯುವ ಮಳೆಯಲ್ಲಿ ಕಮ್ಮಗೆ ಉಂಡು, ಬೆಚ್ಚನೆ ಹೊದ್ದು ಮಲಗಿದರೆ ʻಸ್ವರ್ಗಕ್ಕೆ ಕಿಚ್ಚು ಹಚ್ಚೆಂದ….ʼ
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ನಾಲ್ಕನೆ ಕಂತು

Read More

ಆಡುವವನ ಕೈ ಚಳಕದಲಿ ಎಲ್ಲ ಅಡಗಿದೆ…: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆರ್ಟ್ಸ್ ಗೇಮ್‌ಗಳು ಗೇಮಿಂಗ್ ಪ್ರಕಾರಗಳಲ್ಲಿ ವಿಶಿಷ್ಟವಾದವು. ಆಟದ ವಿಶಿಷ್ಟತೆ ಇಲ್ಲಿ ಮುಖ್ಯವಾಗುವುದಿಲ್ಲ. ಕಲೆಯೇ ಪ್ರಮುಖ. ನೋಡುವುದಕ್ಕೆ ಆಕರ್ಷಕವಾಗಿರುವ, ಬಹಳ ಕ್ರಿಯೇಟಿವ್ ಆಗಿರುವ ಗೇಮ್‌ಗಳಿವು. ವಿಡಿಯೋ ಗೇಮ್ಸ್ ಮೂಲಕ ನಮ್ಮ ಆಸಕ್ತಿಯ ಕೆಲವು ವಿಷಯಗಳನ್ನು ಕಲಿತುಕೊಳ್ಳುವುದಕ್ಕೆ ಸಾಧ್ಯವಿದೆ. ಇವುಗಳು ಶೈಕ್ಷಣಿಕ ಗೇಮ್‌ಗಳು. ಭಾಷೆ, ಗಣಿತ, ಟೈಪಿಂಗ್ ಕುರಿತಾದ ಸರಳ ಗೇಮ್‌ಗಳು ಇದಕ್ಕೆ ಉದಾಹರಣೆಗಳು. ವ್ಯಾಯಾಮದಂತಹ ಚಟುವಟಿಕೆ ಮಾಡಲು ಅವಕಾಶ ಮಾಡಿಕೊಡುವ ಗೇಮ್‌ಗಳನ್ನು ಎಕ್ಸರ್ ಗೇಮ್ ಎನ್ನಲಾಗುತ್ತದೆ.
ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ಗೋಧಿ ಹುಗ್ಗಿ ಗಂಗಯ್ಯ: ಮಂಜಯ್ಯ ದೇವರಮನಿ ಲಲಿತ ಪ್ರಬಂಧ

ಅವರಿಗೆ ಯಾರಾದರೂ ಎದುರಾಡಿದರೆ ಅವರ ಮದುವೆ ಮಾಡುವ ಬದಲು ತಿಥಿ ಮಾಡಿಬಿಡುತ್ತಿದ್ದ. ಏನಾದರೂ ಒಂದು ನವ ಹೇಳಿ ಯಾವ ಹೆಣ್ಣು ಹತ್ತದಂತೆ ಮಾಡಿ… ಮದುವೆ ಬದಲಿಗೆ ತಿಥಿ ಮಾಡಿ ಬಿಡುತ್ತಿದ್ದ. ಹಾಗಾಗಿ ಗಂಗಯ್ಯನನ್ನು ಎದುರು ಹಾಕಿಕೊಳ್ಳಲು ಊರಲ್ಲಿ ಯಾರಾದರೂ ಹೆದರುತ್ತಿದ್ದರು. ಈವಯ್ಯನ ಸುದ್ದಿ ಬೇಡ ಎಂದು ಸುಮ್ಮನಾಗುತ್ತಿದ್ದರು. ಮದುವೆಯಾಗದ ಅದೆಷ್ಟೋ ಹೆಣ್ಣು ಗಂಡಗಳನ್ನು ಗಂಟು ಹಾಕಿ ಶಾದಿಭಾಗ್ಯ ಕರುಣಿಸಿದ ರೂವಾರಿ ನಮ್ಮ ಗಂಗಯ್ಯ.
ಮಂಜಯ್ಯ ದೇವರಮನಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ

ಅವರು ದೂರ ಹೋಗುತ್ತಾ ಕಣ್ಮರೆಯಾಗುತ್ತಿದ್ದ ಹಾಗೆ ನನ್ನ ಕುಚುಕು ಗೆಳತಿಯರು ಒಗ್ಗಟ್ಟಿನಿಂದ ನನಗಿಂತಲೂ ಎತ್ತರದಲ್ಲಿದ್ದ ಬಾಗಿಲು ಹತ್ತಲು ಸಹಕರಿದ್ದರು. ಅದೇನಾಯಿತೋ ಏನೋ ಅಷ್ಟರಲ್ಲೇ ಹೋದ ತಾತ ಮಗ ಗಿರಿಯಣ್ಣನ ಜೊತೆ tvs ಲೂನಾದಲ್ಲಿ ಬರುವುದನ್ನು ಕಂಡ ನನ್ನ ಮಿತ್ರದ್ರೋಹಿಗಳು ನನ್ನನ್ನೊಬ್ಬಳನ್ನೇ ಬಿಟ್ಟು ಓಡಿ ಹೋಗಿ ಪಕ್ಕದಲ್ಲೇ ಇದ್ದ ತೃಪ್ತಿ ಕ್ಯಾಂಟೀನ್ ಕಟ್ಟಡದ ಮಹಡಿ ಹತ್ತಿ ಅವಿತುಕೊಂಡು ಬಿಟ್ಟರು. ಯಾರ ಸಹಾಯವು ಇಲ್ಲದೇ ಒಳಗಿಂದ ಹತ್ತಿ ಆಚೆ ನೆಗೆಯಲು ಬಾರದೆ ಪರದಾಡುತ್ತಿದ್ದ ನನ್ನನ್ನ ತಾತ ಒಂದೇ ಹಿಡಿತದಲ್ಲಿ ಎತ್ತಿ ಆಚೆ ಹಾಕಿದ್ದರು.
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ