Advertisement

Tag: ಕೆಂಡಸಂಪಿಗೆ

ಹಿರಿಯ ಪತ್ರಕರ್ತ ಹಾಗೂ ಕವಿ ರಾಮು ಇನ್ನಿಲ್ಲ

ಹಿರಿಯ ಪತ್ರಕರ್ತ ಹಾಗೂ ಕವಿ ರಾಮು(69) ಮಂಗಳವಾರ ಮುಂಜಾನೆ ತೀರಿಕೊಂಡರು. ವಿಭಿನ್ನ ನೆಲೆಗಟ್ಟಿನ ಅವರ ಕವಿತೆಗಳ ಕಾರಣಕ್ಕೆ ಮತ್ತು ಅವರ ಆಪ್ತತೆಯ ಕಾರಣಕ್ಕೆ ಮೈಸೂರಿನ ಹಾಗೂ ಮೈಸೂರಿಗೆ ಆಗಮಿಸುತ್ತಿದ್ದ ಸಾಹಿತ್ಯದ ಬಂಧುಗಳೆಲ್ಲ ಅವರನ್ನು ಆಗಾಗ ಭೇಟಿಯಾಗುತ್ತಲೆ ಇರುತ್ತಿದ್ದರು.
ಅಗ್ನಿಸೂಕ್ತ, ರಾಮು ಕವಿತೆಗಳು, ವಿಷ್ಣುಕ್ರಾಂತಿ ಮತ್ತು ಇತರೆ ಕವಿತೆಗಳು ಇವರ ಪ್ರಕಟಿತ ಕವನ ಸಂಕಲನಗಳು.
ರಾಮು ಅವರನ್ನು, ಅವರ ವ್ಯಕ್ತಿತ್ವದ ಕುರಿತು ಕವಯತ್ರಿ ರೂಪಾ ಹಾಸನ ಬರೆದ ಕವಿತೆಯೊಂದು ನಿಮ್ಮ ಓದಿಗೆ

Read More

ಕೇರಳಿಗರ ಬೆಂಗಳೂರ ನಂಟು: ಎಚ್.ಗೋಪಾಲಕೃಷ್ಣ ಸರಣಿ

ಅಯ್ಯಪ್ಪ ದೇವರ ಮೂಲ ಕೇರಳ. ಅಂದ ಹಾಗೆ ನಾನು ಬೆಳೆದು ಓದಿ ನಂತರ ಕೆಲಸ ಮಾಡುತ್ತಿದ್ದ ಕಡೆ ಕೇರಳದವರ ಸಂಖ್ಯೆ ಹೆಚ್ಚು ಮತ್ತು ತುಂಬಾ ಚಟುವಟಿಕೆಯಿಂದಲೂ ಕೂಡಿದ್ದರು. ಕೇರಳದ ಸುಮಾರು ಹುಡುಗಿಯರು ಕನ್ನಡದ ಹುಡುಗರ ಕೈ ಹಿಡಿದಿದ್ದರು. ಸಮುದ್ರ ತೀರದ ಹುಡುಗಿಯರು ಅಂದರೆ ಆಕರ್ಷಕ ಮೈಕಟ್ಟು, ಗುಂಗುರು ಕೂದಲು ಮತ್ತು ಕೊಂಚ ಮುಂದೆ ಬಂದ ಹಲ್ಲುಗಳು. ಬಹುಶಃ ಆಡುವ ಭಾಷೆಯ ಪ್ರಭಾವ ಇರಬಹುದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಬಿಡದೇ ಸುರಿವ ಮಳೆಯೂ.. ಜೊತೆಗೆ ಕೊಡೆಯೂ: ಸುಮಾವೀಣಾ ಸರಣಿ

ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳು ಪಾಠ ಕೇಳಬೇಕು. ಆಗ ಈ ರೌದ್ರಮಳೆಯಾಗಮನವಾಗುತ್ತಿತ್ತು. ನಾವು ಶಾಲೆಗೆ ಹೊರಡುವ ಸಮಯಕ್ಕೆ ಸರಿಯಾಗಿ ಶಾಲೆ ಬಿಡುವ ಕಡೆಯ ಅವಧಿಯಲ್ಲಿ ಮಳೆ ಹಾಜರಿ ಹಾಕುತ್ತಿತ್ತು. ಜೊತೆಗೆ ಮೈ ಕೊರೆಯುವ ಚಳಿ. ಈ ಕಾರಣಕ್ಕೆ ಮೊದಲ ಬೆಂಚ್ ಬೇಡ ಅನ್ನಿಸುತ್ತಿತ್ತು ಹಿಂದಿನ ಬೆಂಚ್ ಆದರೆ ಕಾಲ ಮೇಲೆ ಕಾಲು ಹಾಕಿ ಚಳಿ ಕಡಿಮೆ ಮಾಡಿಕೊಳ್ಳಬಹುದಲ್ಲ ಅನ್ನುವ ಉಪಾಯ ಅಷ್ಟೇ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ