Advertisement

Tag: ಕೆಂಡಸಂಪಿಗೆ

ಅಂಕುಡೊಂಕಿನ ಪಯಣ: ಡಾ. ಎಂ ಉಷಾ ಕಾದಂಬರಿಯ ಪುಟಗಳು

ಮೊದಲೇ ಅಸಮಧಾನಗೊಂಡಿದ್ದ ಪುಟ್ಟಮ್ಮನಿಗೆ ಮಕ್ಕಳ ಈ ಕಳ್ಳಾಟದಿಂದ ಪಿತ್ತ ನೆತ್ತಿಗೇರಿತು. ಕಂಕುಳಲ್ಲಿದ್ದ ಮಲ್ಲಿಯನ್ನು ಕೆಳಕ್ಕೆ ಕುಕ್ಕಿದವಳೆ ಸರೋಜಳ ಮೇಲೆ ಮುಗಿಬಿದ್ದಳು. ‘ಮನೆ ಕೆಲಸ ಮಾಡದು ಬುಟ್ಟು ಸೂಳೆರಂಗೆ ಅಲಂಕಾರ ಮಾಡ್ಕತಾ ಕೂತಿದಿಯಾ ಇಲ್ಲಿ? ಯಾವ ನಾಯಕಸಾನಿ ಕೊಟ್ಲೆ ಇದ್ನ ನಿಂಗೆ… ʼ ಎಂದು ಸಿಕ್ಕಸಿಕ್ಕಲ್ಲಿ ಬಡಿಯ ತೊಡಗಿದಳು. ಈ ಬಾರಿ ಗೌರಿಹಬ್ಬಕ್ಕೆಂದು ರಾಜಶೇಖರ ದಾಕ್ಷಾಯಿಣಿಗೆ ಹೊಸ ಸ್ನೋಪೌಡರ್ ಡಬ್ಬಿಗಳನ್ನು ತಂದುಕೊಟ್ಟಿದ್ದನ್ನು ಗಮನಿಸಿದ ಸರೋಜ ಚಿಕ್ಕಮ್ಮನಲ್ಲಿ ಹಳೆಯ ಡಬ್ಬಿಯನ್ನು ಕೇಳಿ ಪಡೆದಿದ್ದಳು. ಇವತ್ತು ಹಬ್ಬದ ದಿನವಾಗಿದ್ದುದು ಮತ್ತು ಕೆಲಸದಲ್ಲಿ ಮುಳುಗಿ ಹೋಗಿರುವ ಅಮ್ಮ ಗಮನಿಸುವುದಿಲ್ಲ ಎನ್ನುವ ಧೈರ್ಯದಲ್ಲಿ ಹಚ್ಚಿಕೊಂಡಿದ್ದಳು.
ಡಾ. ಎಂ. ಉಷಾ ಹೊಸ ಕಾದಂಬರಿ “ಬಾಳ ಬಟ್ಟೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಗೋಧಿ ತೆನೆ ತೊಟ್ಟಿಲು…: ಚೈತ್ರಾ ಶಿವಯೋಗಿಮಠ ಸರಣಿ

ಪ್ರಕೃತಿ ಜೊತೆಗಿನ ಅವಳ ಪಿಸುಮಾತು ನಮ್ಮನ್ನೆಲ್ಲಾ ಒಂದು ನಳನಳಿಸುವ ಹೂದೋಟದಲ್ಲಿ ನಿಲ್ಲಿಸುತ್ತದೆ. ಮಕ್ಕಳಿಗಾಗಿ ಬರೆದ ಉಪ್ಪು, ರೊಟ್ಟಿ, ನೀರಿನ ಕವಿತೆಗಳು ಬಾಯಾರಿದವರ ದಾಹವನ್ನು ಹಿಂಗಿಸುವಂಥವು. ಅವಳ ತಾಯಿಗರುಳಿನಿಂದ ಉಣಿಸುವ ನೆಲದ ಸೊಗಡಿನ ಅಮೃತದಂತಹ ಕವಿತೆಗಳು ಮನುಕುಲದ ಎದೆ ತುಂಬಿಸುವಂಥವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿಯಲ್ಲಿ ಗೇಬ್ರಿಯಲ್ಲ ಮಿಸ್ತ್ರಾಲ್ ಅವರ ಬದುಕು ಮತ್ತು ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

Read More

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ