Advertisement

Tag: ಕೆಂಡಸಂಪಿಗೆ

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ