Advertisement

Tag: ಕೆಂಡಸಂಪಿಗೆ

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮತ್ತೆ ಬಂದಿದೆ ಯುಗಾದಿ, ತರದು ಅಂದಿನ ಉಮೇದಿ

ಯುಗಾದಿಗೆ ಪರಿಸರದ ಕುರಿತ ಮಾತೇಕೆ? ಎಂದು ಪ್ರಶ್ನಿಸಬಹುದು ನೀವು!! ಚೈತ್ರಮಾಸದ ಪ್ರಾರಂಭದ ದಿನ ಯುಗಾದಿಯ ಆಚರಣೆ. ಪ್ರಕೃತಿಯ ಜೊತೆ ನಮ್ಮ ಸಂಬಂಧವನ್ನು ಆಚರಣೆಗಳ ಮುಖಾಂತರ ಗಟ್ಟಿಗೊಳಿಸಿಕೊಳ್ಳುತ್ತಾ ಬಂದ ದೇಶ ನಮ್ಮದು. ಪ್ರಕೃತಿ ಪೂಜೆಯೇ ನಮ್ಮ ಪೂರ್ವಿಕರ ನೈಜ ಆಚರಣೆಗಳಾಗಿದ್ದವು ಎಂಬುದು ನಮಗೆಲ್ಲ ತಿಳಿದ ಸಂಗತಿಯೇ..
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

Read More

ಕುಂಭಮೇಳದ ನೆನಪುಗಳು….

ನನಗೆ ತಣ್ಣಗಿನ ನೀರೆಂದರೆ ನಡುಕ. ಹಾಗಾಗಿ ನೀರಿನಲ್ಲಿ ಮುಳುಗಲು ಹಿಂದು ಮುಂದು ನೋಡುತ್ತಿದ್ದೆ. ಹಾಗೇ ನೋಡಿ ವಾಪಸ್‌ ಬರುವುದು ಅಂತ ನನ್ನ ಇರಾದೆ ಇತ್ತು. ನನ್ನ ಸ್ನೇಹಿತೆ ಸಂಗಮದಲ್ಲಿ ಸ್ನಾನ ಮಾಡುವೆ ಎಂದಾಗ ಅವರ ಜೊತೆ ಹೋದೆ. ಒಂದು ದೋಣಿ ನದಿಯ ಸಂಗಮದ ಜಾಗಕ್ಕೆ ಕರೆದುಕೊಂಡು ಹೋಯಿತು. ಅಲ್ಲಿ ಬಟ್ಟೆ ಬದಲಿಸಲು ಒಂದು ತಡಿಕೆಯನ್ನು ಮಾಡಿದ್ದರು ದೋಣಿಯ ಮೇಲೆಯೇ. ನಾನೂ ನೀರಿನಲ್ಲಿ ಇಳಿದು ಮುಳುಗು ಹಾಕಿ ಬರುತ್ತೀನಿ ಅಂದುಕೊಂಡರೂ ಯಾಕೋ ಆಗುತ್ತಲೇ ಇರಲಿಲ್ಲ.
‘ದೇವಸನ್ನಿಧಿ’ ಅಂಕಣದಲ್ಲಿ ಕುಂಭಮೇಳಕ್ಕೆ ಭೇಟಿ ನೀಡಿದ ಅನುಭವದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಅಲ್ಲಿಯ ಇಲ್ಲಿಯ ಬೆಲೆಯೇರಿಕೆ ಕಥೆಗಳು

ಉದ್ಯೋಗ ಬೇಟೆಯಲ್ಲಿರುವ ಜನರಿಗೆ ಕೊಡುವ ಧನಸಹಾಯ ಆ ಒಬ್ಬ ವ್ಯಕ್ತಿಯ ಜೀವನಕ್ಕೇ ಸಾಲದಾಗಿದೆ. ಬೇಸತ್ತು ಯಾವುದಾದರೂ ಸರಿಯೇ ಹೇಗಾದರೂ ಸರಿಯೇ ಕೆಲಸವನ್ನು ಹಿಡಿಯೋಣವೆಂದು ಹೊರಟರೆ ಆ ಉದ್ಯೋಗದಿಂದ ಬರುವ ಆದಾಯ ಏತಕ್ಕೂ ಸಾಲುವುದಿಲ್ಲ. ತಮಗೆ ಒಗ್ಗದ ಉದ್ಯೋಗವನ್ನು ಮಾಡುವ ಅನಿವಾರ್ಯತೆ ಹಲವರಲ್ಲಿ ಮಾನಸಿಕ ಕ್ಷೋಭೆಯನ್ನುಂಟು ಮಾಡುತ್ತದೆ. ಮಾನಸಿಕ ರೋಗಗಳು ಕಾಣಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ