Advertisement

Tag: ಕೆಂಡಸಂಪಿಗೆ

ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು

ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ

Read More

ಮುಸಾಫಿರ್ – ಇ – ಲಂಡನ್

ಸರ್ ಸಯ್ಯದ್ ಅಹ್ಮದ್‌ರ ಬ್ರಿಟಿಷ್ ಒಲವಿನ ಹೊರತಾಗಿ ಭಾರತೀಯ ಮುಸ್ಲಿಂರನ್ನು ಆಧುನೀಕರಣದ ಕಡೆಗೆ ಒಯ್ಯುವ ಅವರ ನಿರಂತರ ಯತ್ನದ ಕಾರಣಕ್ಕೆ “ಆಧುನೀಕರಣದ ಪ್ರವರ್ತಕ” ಎಂದೂ ಅವರನ್ನು ಕರೆದಿದ್ದಾರೆ. ಶ್ರದ್ಧಾವಂತ ಮುಸ್ಲಿಂ ಆಗಿದ್ದರೂ ಧಾರ್ಮಿಕ ಸಾಂಪ್ರದಾಯಿಕತೆ ಸಿದ್ಧಾಂತಗಳ ವಿಮರ್ಶಕರು ವಿರೋಧಿಯೂ ಆಗಿದ್ದರು. ಯೂರೋಪಿನ ವಿಜ್ಞಾನವನ್ನು ಆಧರಿಸಿದ ತಮ್ಮದೇ ಧರ್ಮಶಾಸ್ತ್ರವನ್ನು ರೂಪಿಸಿದ್ದರು. 1870ರಲ್ಲಿ ಆರಂಭಿಸಿದ್ದ “ಮಹಮದೀಯ ಸಮಾಜ ಸುಧಾರಕ” ಎನ್ನುವ ನಿಯತಕಾಲಿಕ ಅವರ ತಿಳಿವು ನೋಟಗಳನ್ನು ತಿಳಿಸುತ್ತದೆ.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕಲ್ಪನೆ ವಾಸ್ತವಗಳ ಸಂಕ್ರಮಣದಲ್ಲಿ ಅರಿವಿನ ಅನಾವರಣ

ಇಲ್ಲಿ ಲೇಖಕ ಗಣೇಶಯ್ಯನವರು ತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ನಮ್ಮನ್ನು ಇಂತಹ ಪುಟ್ಟ ಕೀಟಗಳ ಸಂಸಾರ, ಸಮುದಾಯದೊಳು ಕರೆದೋಯ್ದು ನಾವೂ ಅವುಗಳಲ್ಲಿ ‘ಒಬ್ಬರು’ ಎಂಬ ಭಾವನೆಯನ್ನು ಬಿತ್ತಿ, ಅವುಗಳ ಜೀವನದ ಭಾಗವಾಗಿಸಿ, ಜಂಜಾಟದ ಜೋಕಾಲಿಯಲ್ಲಿ ನಮ್ಮನ್ನ ಜೀಕಿಸುತ್ತಾ ಅಲ್ಲಿನ ಅಚ್ಚರಿಗಳ ‘ಅರ್ಥ’ ಮಾಡಿಸುತ್ತಾರೆ, ವಾಸ್ತವದ ಅರಿವು ಮೂಡಿಸುತ್ತಾರೆ. ಒಂದು ರೀತಿಯಲ್ಲಿ ವಿಸ್ಮಯಕರ ವಿಷಯದ ವಿವರಗಳನ್ನು ಕಲ್ಪನೆಯ ಚಿತ್ರ ಮಂದಿರದಲ್ಲಿ ಕತೆಯ ಮೂಲಕ ಅನಾವರಣಗೊಳಿಸಿದಂತೆ.
ಡಾ. ಕೆ.ಎನ್. ಗಣೇಶಯ್ಯ ಬರೆದ “ಹಾತೆ-ಜತೆ-ಕತೆ” ಕೃತಿಯ ಕುರಿತು ವಿಶ್ವ ದೊಡ್ಡಬಳ್ಳಾಪುರ ಬರಹ

Read More

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ