Advertisement

Tag: ಕೆಂಡಸಂಪಿಗೆ

ವಿಭಿನ್ನ ಲೋಕಗಳಲ್ಲಿ ಸಂಚರಿಸುವ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಸೂಮೆತ್ಸ್‌ರ ಅಡಕಮಾತಿನ, ನಿಖರವಾದ ಕವನ ರಚಿಸುವ ವಿಧಾನವನ್ನು ಗಮನಿಸಿ, ತ್ರೀನ್ ಸೂಮೆತ್ಸ್‌ರು ಒಂದು ತರಹದ ಕರಾಳವಾದ ‘ಸೈಕೊಗ್ರಾಫಿಕ್’ (psychographic) ಬರವಣಿಗೆ ಶೈಲಿಯನ್ನು ಹೊಂದಿದ್ದಾರೆ ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ. ಅವರದ್ದು ಮಿತಭಾಷೆಯ ಕಾವ್ಯವಾದ್ದರಿಂದ ಅವರ ಕಾವ್ಯವನ್ನು ಸಾಂಕೇತಿಕ ಭಾಷೆಯಿಂದ ಸಾಮಾನ್ಯ ಭಾಷೆಗೆ ತಂದು ಓದಬೇಕಾಗುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಎಸ್ಟೋನಿಯಾ ದೇಶದ ಕವಿ ತ್ರೀನ್ ಸೂಮೆತ್ಸ್ (Triin Soomets) ಅವರ ಕಾವ್ಯದ ಕುರಿತ ಬರಹ ನಿಮ್ಮ ಓದಿಗೆ

Read More

ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ನೂತನ ಅವರ ಸುಂದರ ರೋಮಾಂಚನದ ಅನುಭವಗಳ ನಡುವೆಯೇ ಚಾರ್ ಧಾಮ್ ಪ್ರವಾಸದ ಗಿರಿಶಿಖರ ಆಳ ಕಣಿವೆಗಳ ಪ್ರಪಾತದ ರೌದ್ರತೆಯನ್ನೂ ಕಾಣಿಸುತ್ತಾರೆ. ಅವರ ಕನಸುಗಳೊಂದಿಗೆ ಮುಂದೆ ಸಂಭವಿಸಬಹುದಾದ ಘೋರ ಅನುಭವಗಳು ಬೆಸೆದುಕೊಳ್ಳುತ್ತವೆ. ಲಕ್ಷಾಂತರ ಪ್ರವಾಸಿಗರ ಕಾರಣದಿಂದ ಸ್ಥಳದ ನೈರ್ಮಲ್ಯ ಕಾಪಾಡುವ ಜರೂರತ್ತನ್ನು ಮನಗಾಣಿಸುತ್ತಾರೆ. ಅಲ್ಲಿನವರ ಬದುಕು ಅತ್ಯಂತ ದುರ್ಭರವಾದರೂ ಬಹು ಸರಳ. ಆದರೆ ಪ್ರವಾಸಿಗರ ದಟ್ಟಣೆಯಿಂದಾಗಿ ಉಂಟಾಗುವ ಮಾಲಿನ್ಯತೆ ಸ್ಥಳೀಯ ಪರಿಸರದ ಹಾನಿಗೆ ಮಾರಕವಾಗಬಹುದು.
ನೂತನ ದೋಶೆಟ್ಟಿ ಪ್ರವಾಸ ಕಥನ “ಸ್ವರ್ಗದೊಂದಿಗೆ ಅನುಸಂಧಾನ”ದ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಕ್ರಿಕೆಟ್‌ಗೆ “ವಿಶ್ವನಾಥ”ರ ಕೊಡುಗೆ: ಇ.ಆರ್. ರಾಮಚಂದ್ರನ್ ಅಂಕಣ

ಸಚಿನ್ ಟೆಂಡೂಲ್ಕರ್ ಅವರು ಮುಂದೆ ಬರಲು ಅವರ ಕೋಚ್ ರಮಾಕಾಂತ ಅಚ್ರೇಕರ್ ಎಂದು ಎಲ್ಲರಿಗೂ ಗೊತ್ತು. ಮುಖ್ಯವಾಗಿ ಟೆಂಡೂಲ್ಕರ್ ಅವರೇ ಇದನ್ನು ಕೃತಜ್ಞತೆಯಿಂದ ಆಗಾಗ್ಗೆ ಜ್ಞಾಪಿಸಿಕೊಂಡು ಎಲ್ಲರ ಮುಂದೆ ಅವರ ಕೊಡುಗೆಯನ್ನು ಸಾರ್ವಜನಿಕವಾಗಿ ಸ್ಮರಿಸಿದ್ದಾರೆ. ಎಷ್ಟೋ ಕಡೆ ಆಟಗಾರನು ಮುಂದೆ ಮುಂದೆ ಬಂದು, ಹೆಸರುವಾಸಿಯಾದಂತೆ ಗುರು-ಶಿಷ್ಯರ ಬಾಂಧವ್ಯ ಕಡಿಮೆಯಾಗಿ ಎಷ್ಟೋಸಲ ಅದು ಮಾಸಿ ಹೋಗುವ ಸಂದರ್ಭಗಳು ಬರುತ್ತದೆ. ಆದರೆ ಒಂದು ಜ್ಞಾಪಕದಲ್ಲಿರಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕಾಡುವ ಕಷ್ಟದ ಆ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಅಂದು ಪೋಲೀಸರು ಹೋದ ಮೇಲೂ ಅಮ್ಮ ಅಳುತ್ತಲೆ ಇದ್ದಳು. ಬಡವರ ಪಾಲಿಗೆ ಕಣ್ಣೀರೇ ಅಲ್ಲವೆ ಸಾಂತ್ವನದ ಸೆಲೆಗಳು ಆಗಾಗಿ ಧಾರಾಕಾರವಾಗಿ ಹರಿಯುತ್ತಲೆ ಇತ್ತು. ಊರಿನಲ್ಲಿ ಯಾರ್ಯಾರೊ ಸಹಾಯವನ್ನು ಮಾಡಿದರು. ಅಮ್ಮನ ಒಳ್ಳೆಯ ಗುಣವೇ ಅದಕ್ಕೆ ಕಾರಣವಾಗಿತ್ತು. ಇದೆಲ್ಲ ನೋಡುತ್ತಿದ್ದಾಗ ದೇವರ ಮೇಲೆ ಕೋಪವು ಬರುತ್ತಿತ್ತು. ನನ್ನ ಓರಗೆಯವರೆಲ್ಲ ನಿಮ್ಮ ಮನೆಯ ಸಾಮಾನುಗಳನ್ನು ಪೋಲಿಸ್ನೋರು ತಗೊಂಡ್ಹೋದ್ರು ಅನ್ನುತ್ತಿದ್ದರು. ಆಗ ಇಡೀ ವ್ಯವಸ್ಥೆಯ ಮೇಲೆ ರೋಷವೇನೊ ಬರುತ್ತಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ