Advertisement

Tag: ಕೆಂಡಸಂಪಿಗೆ

ಆಡುವವನ ಕೈ ಚಳಕದಲಿ ಎಲ್ಲ ಅಡಗಿದೆ…: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆರ್ಟ್ಸ್ ಗೇಮ್‌ಗಳು ಗೇಮಿಂಗ್ ಪ್ರಕಾರಗಳಲ್ಲಿ ವಿಶಿಷ್ಟವಾದವು. ಆಟದ ವಿಶಿಷ್ಟತೆ ಇಲ್ಲಿ ಮುಖ್ಯವಾಗುವುದಿಲ್ಲ. ಕಲೆಯೇ ಪ್ರಮುಖ. ನೋಡುವುದಕ್ಕೆ ಆಕರ್ಷಕವಾಗಿರುವ, ಬಹಳ ಕ್ರಿಯೇಟಿವ್ ಆಗಿರುವ ಗೇಮ್‌ಗಳಿವು. ವಿಡಿಯೋ ಗೇಮ್ಸ್ ಮೂಲಕ ನಮ್ಮ ಆಸಕ್ತಿಯ ಕೆಲವು ವಿಷಯಗಳನ್ನು ಕಲಿತುಕೊಳ್ಳುವುದಕ್ಕೆ ಸಾಧ್ಯವಿದೆ. ಇವುಗಳು ಶೈಕ್ಷಣಿಕ ಗೇಮ್‌ಗಳು. ಭಾಷೆ, ಗಣಿತ, ಟೈಪಿಂಗ್ ಕುರಿತಾದ ಸರಳ ಗೇಮ್‌ಗಳು ಇದಕ್ಕೆ ಉದಾಹರಣೆಗಳು. ವ್ಯಾಯಾಮದಂತಹ ಚಟುವಟಿಕೆ ಮಾಡಲು ಅವಕಾಶ ಮಾಡಿಕೊಡುವ ಗೇಮ್‌ಗಳನ್ನು ಎಕ್ಸರ್ ಗೇಮ್ ಎನ್ನಲಾಗುತ್ತದೆ.
ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ಗೋಧಿ ಹುಗ್ಗಿ ಗಂಗಯ್ಯ: ಮಂಜಯ್ಯ ದೇವರಮನಿ ಲಲಿತ ಪ್ರಬಂಧ

ಅವರಿಗೆ ಯಾರಾದರೂ ಎದುರಾಡಿದರೆ ಅವರ ಮದುವೆ ಮಾಡುವ ಬದಲು ತಿಥಿ ಮಾಡಿಬಿಡುತ್ತಿದ್ದ. ಏನಾದರೂ ಒಂದು ನವ ಹೇಳಿ ಯಾವ ಹೆಣ್ಣು ಹತ್ತದಂತೆ ಮಾಡಿ… ಮದುವೆ ಬದಲಿಗೆ ತಿಥಿ ಮಾಡಿ ಬಿಡುತ್ತಿದ್ದ. ಹಾಗಾಗಿ ಗಂಗಯ್ಯನನ್ನು ಎದುರು ಹಾಕಿಕೊಳ್ಳಲು ಊರಲ್ಲಿ ಯಾರಾದರೂ ಹೆದರುತ್ತಿದ್ದರು. ಈವಯ್ಯನ ಸುದ್ದಿ ಬೇಡ ಎಂದು ಸುಮ್ಮನಾಗುತ್ತಿದ್ದರು. ಮದುವೆಯಾಗದ ಅದೆಷ್ಟೋ ಹೆಣ್ಣು ಗಂಡಗಳನ್ನು ಗಂಟು ಹಾಕಿ ಶಾದಿಭಾಗ್ಯ ಕರುಣಿಸಿದ ರೂವಾರಿ ನಮ್ಮ ಗಂಗಯ್ಯ.
ಮಂಜಯ್ಯ ದೇವರಮನಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಪೆಟ್ಟಿಗೆ ಅಂಗಡಿಯಲ್ಲಿ ಭದ್ರವಾದ ನೆನಪುಗಳು: ಮಾಲತಿ ಶಶಿಧರ್ ಅಂಕಣ

ಅವರು ದೂರ ಹೋಗುತ್ತಾ ಕಣ್ಮರೆಯಾಗುತ್ತಿದ್ದ ಹಾಗೆ ನನ್ನ ಕುಚುಕು ಗೆಳತಿಯರು ಒಗ್ಗಟ್ಟಿನಿಂದ ನನಗಿಂತಲೂ ಎತ್ತರದಲ್ಲಿದ್ದ ಬಾಗಿಲು ಹತ್ತಲು ಸಹಕರಿದ್ದರು. ಅದೇನಾಯಿತೋ ಏನೋ ಅಷ್ಟರಲ್ಲೇ ಹೋದ ತಾತ ಮಗ ಗಿರಿಯಣ್ಣನ ಜೊತೆ tvs ಲೂನಾದಲ್ಲಿ ಬರುವುದನ್ನು ಕಂಡ ನನ್ನ ಮಿತ್ರದ್ರೋಹಿಗಳು ನನ್ನನ್ನೊಬ್ಬಳನ್ನೇ ಬಿಟ್ಟು ಓಡಿ ಹೋಗಿ ಪಕ್ಕದಲ್ಲೇ ಇದ್ದ ತೃಪ್ತಿ ಕ್ಯಾಂಟೀನ್ ಕಟ್ಟಡದ ಮಹಡಿ ಹತ್ತಿ ಅವಿತುಕೊಂಡು ಬಿಟ್ಟರು. ಯಾರ ಸಹಾಯವು ಇಲ್ಲದೇ ಒಳಗಿಂದ ಹತ್ತಿ ಆಚೆ ನೆಗೆಯಲು ಬಾರದೆ ಪರದಾಡುತ್ತಿದ್ದ ನನ್ನನ್ನ ತಾತ ಒಂದೇ ಹಿಡಿತದಲ್ಲಿ ಎತ್ತಿ ಆಚೆ ಹಾಕಿದ್ದರು.
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”

Read More

ಟೇಪ್‌ ರೆಕಾರ್ಡರ್ ವಿಥ್ ರೇಡಿಯೋ ಎಂಬ ಮಾಯಾಪೆಟ್ಟಿಗೆ: ಸುಧಾ ಆಡುಕಳ ಬರಹ

ಎಲ್ಲರ ಒಕ್ಕೊರಲ ಒತ್ತಾಯಕ್ಕೆ ಅಪ್ಪನೂ ಇಲ್ಲವೆನ್ನಲಾರದೇ ನಡುಅಂಗಳದಲ್ಲಿಯೇ ಚಾಪೆ ಹಾಸಿ, ಮದ್ದಲೆಯೊಂದಿಗೆ ಸಜ್ಜಾಗಿಯೇಬಿಟ್ಟರು. ಸುತ್ತ ಮುತ್ತಿದ ನೀರವ ಮೌನದ ನಡುವೆ ಅಪ್ಪ ಮದ್ದಲೆ ಬಡಿಯುತ್ತಾ, ದೊಡ್ಡ ದನಿಯಲ್ಲಿ “ವಿಘ್ನೇಶಾಯ ಸರಸ್ವತೈ ಪರ‍್ವತೈ ಗುರುವೇ ನಮಃ” ಎಂದು ಗಣಪತಿ ಪೂಜೆಯೊಂದಿಗೆ ಆರಂಭಿಸಿ, “ಸರಸಿಜಾಂಬಕಿಯರೇ ಕೇಳಿ” ಎಂಬ ಭೀಷ್ಮಪರ್ವದ ನಾಲ್ಕು ಹಾಡುಗಳನ್ನು ಹಾಡಿ ಇನ್ನು ಸಾಕು ಎಂಬಂತೆ ಕೈಸನ್ನೆ ಮಾಡಿದರು. ಇದನ್ನೇ ಕಾಯುತ್ತಿದ್ದ ಸಾಹೇಬರು ಟಕ್ ಎಂದು ರೆಕಾರ್ಡಿಂಗನ್ನು ಬಂದ್ ಮಾಡಿದರು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ