Advertisement

Tag: ಕೆಂಡಸಂಪಿಗೆ

ಸಾಂಘಿಕವಾದ ಕ್ರಿಸ್ಮಸ್ ಸೀಸನ್ ಶುಭಾಶಯಗಳು

ಬಹುಶಃ ಪ್ರಪಂಚದಾದ್ಯಂತ ಕೋಟ್ಯಾಂತರ ಮಕ್ಕಳು ಎದುರು ನೋಡುವ, ಹಾಗೆ ಗಪ್ ಚಿಪ್ ಆಗಿ ಚಿಮಿಣಿಯಲ್ಲಿ ಸಾಂಟಾ ಬಂದು ಕೊಡುವ ಉಡುಗೊರೆಗಾಗಿ ಕಾಯುವ ಯಾವೊಂದು ಮಗುವಿಗೂ ನಿರಾಸೆಯಾಗದ ಸಂದರ್ಭ ಈ ಕ್ರಿಸ್ಮಸ್ ಸೀಸನ್. ಇದು ‘giving’ ಸೀಸನ್. ಅಂದರೆ ನಾವು ಮನಃಪೂರ್ವಕವಾಗಿ ಕೈಲಾದಷ್ಟು ದಾನ ಮಾಡುವ ಕಾಲ. ನಾವು ಕೊಡುವ ದಾನವು ಹಣದಿಂದ ಹಿಡಿದು ಬಟ್ಟೆ, ಉಡುಗೆತೊಡುಗೆ, ಮನೆವಸ್ತುಗಳು, ಪೀಠೋಪಕರಣಗಳು, ಪುಸ್ತಕಗಳು, ಆಹಾರ ಪದಾರ್ಥ, ಎಂಬಂತೆ ನಾನಾತರಹವಾಗಿ ನಾವು ದಾನವೀಯಬಹುದು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅರೋರಾ ಬೋರಿಯಾಲಿಸ್: ನರ್ತಿಸುವ ಬೆಳಕಿನ ನೂರೆಂಟು ಮೋಹಕ ರೂಪ

ಹಿಂದಿನ ಸಾಲಿನಲ್ಲಿ ಮಲಗಿದ್ದ ಶ್ವೇತಾ ಜೋರಾಗಿ ಭುಜ ಅಲುಗಿಸಿ ನನ್ನನೆಬ್ಬಿಸುತ್ತಿದ್ದಾಳೆ. ಅವಳಿಗೆ ಗಂಟಲುಬ್ಬಿ ಮಾತೇ ಹೊರಡುತ್ತಿಲ್ಲ. ಕೈಸನ್ನೆ ಮಾಡಿ ಕಿಟಕಿಯ ಪರದೆ ಎತ್ತು ಎನ್ನುತ್ತಿದ್ದಾಳೆ. ಪೈಲಟ್ ಕಡೆ ಬೆರಳು ತೋರಿಸುತ್ತಿದ್ದಾಳೆ. ನನಗೋ ಎದೆ ಧಸಕ್ ಎಂದಿತು. ಅವಳ ಮುಖದ ತುಂಬಾ ಇದ್ದ ನಗು ನೋಡಿ ವಿಮಾನ ಅಪಾಯದಲ್ಲಿಲ್ಲ ಎಂದು ಖಾತ್ರಿಯಾಯಿತು. ಅಂದರೆ.. ಅಂದರೆ.. ನಿಜಕ್ಕೂ ನಾರ್ಥರ್ನ್ ಲೈಟ್ಸ್ ಕಾಣಿಸುತ್ತಿದೆಯಾ? ಇವೆಲ್ಲ ನಡೆದಿದ್ದು ಕೆಲವೇ ಸೆಕೆಂಡುಗಳಲ್ಲಿ ಎನ್ನಬಹುದು.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ವೈಶಾಲಿಹೆಗಡೆ ಬರಹ

Read More

ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು

ನನಗೆ ನನ್ನ ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲವುಂಟಾಗಿ ನನ್ನ ಅಂಗೈಯನ್ನು ಅವನ ಮುಂದೆ ಮಾಡಿದೆ. ಆ ಭವಿಷ್ಯಗಾರ ಇಡಿ ನನ್ನ ಅಂಗೈ ಜಾಲಾಡಿ ‘ನಿನ್ನ ವಿದ್ಯಾಭ್ಯಾಸ ಇಲ್ಲಿಗೆ ಕೊನೆ ಆಗತೈತಿ. ಇನ್ ಮುಂದಾ ಓದಾಕ ಹೋಗಬ್ಯಾಡ. ಓದಿದ್ರೂ ತಲಿಗೆ ಹತ್ತಾಂಗಿಲ್ಲ. ಈ ಲಾರಿನ ನಿನಗ ಗತಿ ಆಗ್ತೇತಿ’ ಅಂತ ಹೇಳಿ ಇಳಿದು ಹೋಗಿಬಿಟ್ಟ. ಅಂಗೈ ಮೇಲಿನ ಭವಿಷ್ಯ ನಿಜಾನೋ ಸುಳ್ಳೋ ಒಂದು ತಿಳಿಯದ ವಯಸ್ಸದು. ಯಾರಾದ್ರೂ ಏನಾದ್ರೂ ಹೇಳಿಬಿಟ್ಟರೆ ನಂಬಿಬಿಡುವ ಮುಗ್ಧತೆಯೋ ದಡ್ಡತನವೋ ಆಗ ನನ್ನಲ್ಲಿತ್ತು. ಇಸ್ಮಾಯಿಲ್‌ ತಳಕಲ್‌ ಅಂಕಣ

Read More

ಒಂದೇ ಮನೆಯ ಹಲವು ಮನಗಳು….

ಫೋನಿನಲ್ಲಿ ವಿನಯನ ಜತೆ ಮಾತಾಡುತ್ತಿದ್ದವನು ಅಲಿಶಾ ಉಸಿರಾಡುತ್ತಿದ್ದಾಳಾ? ಆಕೆ ಮಾತಾಡುತ್ತಿದ್ದಾಳಾ? ಮೂವತ್ತು ಸೆಕಂಡುಗಳ ಕಾಲ ಆಕೆಯ ಉಸಿರಾಟ ಮತ್ತು ನಾಡಿಬಡಿತ ನೋಡಿ ಹೇಳು ಎಂದು ಅವನ ಪ್ರೋಟೊಕಾಲಿನಲ್ಲಿದ್ದಂತೆ ವಿನಯನಿಗೆ ಹೇಳುತ್ತಿದ್ದ. ವಿನಯ ‘ನಾನೂ ಒಬ್ಬ ಡಾಕ್ಟರು. ನನ್ನ ಹೆಂಡತಿಯೂ ಡಾಕ್ಟರು. ಅವಳಿಗೇನೂ ಆಗಿಲ್ಲ. ಅವಳಿಗೆ ತಕ್ಷಣ ಹೆರಿಗೆಯಾಗಬೇಕು. ನೀನು ತಕ್ಷಣ ಆ್ಯಂಬುಲೆನ್ಸ್ ಕಳಿಸಲಿಲ್ಲ ಎಂದರೆ ನಾನೇ ಡ್ರೈವ್ ಮಾಡಿಕೊಂಡು ಆಸ್ಪತ್ರೆಗೆ ಹೋಗುತ್ತೇನೆ’…
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಏಳನೆಯ ಕಂತು ನಿಮ್ಮ ಓದಿಗಾಗಿ

Read More

ವೀರಭುಜಬಲದ ದುಂಡಿಯೋ… ಸುಕೋಮಲ ಸುಂದರಿಯೋ…

ಎರಡೂ ಕೈಗಳಿಗೂ ಅಮ್ರದ ದುಂಡಿಯನ್ನು ಪಟ್ಟಗಣಿಯಿಂದ ಸುತ್ತಿ ಬಿಗಿಯಾಗಿ ಹಿಡಿದುಕೊಂಡು ಮೊಣಕಾಲಿನವರೆಗೂ ತಿರಿವಿಕೊಂಡ. ಮೊಣಕಾಲಿನ ಮೇಲೆ ಜಪ್ಪಯ್ಯ ಎಂದರೂ ದುಂಡಿ ಒಂದಿಂಚೂ ಮೇಲೇಳಲಿಲ್ಲ. ಸ್ವಲ್ಪ ಸಾವರಿಸಿಕೊಂಡು ನರನಾಡಿಗಳಲ್ಲಿನ ಸಮಸ್ತ ಶಕ್ತಿಯನ್ನು ಒಟ್ಟು ಮಾಡಿ ಉಡ ಕೂಡಾ ನಾಚುವಂತೆ ಬಿಗಿಯಿಡಿದು ಬಿಲ್ಲಿನಂತೆ ಹಿಂದಕ್ಕೆ ಬಾಗಿ ದುಂಡಿಯನ್ನು ಮೇಲೆಳೆದುಕೊಂಡ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ