Advertisement

Tag: ಕೆಂಡಸಂಪಿಗೆ

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಮೊದ್ಲು ಕಾರ್‌ ಓಡ್ಸಿದ್ದು ಯಾರ್‌ ಗೊತ್ತಾ?!: ಗುರುದತ್ ಅಮೃತಾಪುರ ಸರಣಿ

ಕಾರ್ಲ್ ಬೆಂಜ್ ತನ್ನ ಪರಿಶ್ರಮದಿಂದ ನಿರ್ಮಿಸಿದ ಚಲಿಸುವ ವಾಹನದ ಬಗ್ಗೆ ಅವನಿಗೆ ಅನುಮಾನವಿತ್ತು. ಜೊತೆಗೆ ಸ್ಪಾರ್ಕ್ ಪ್ಲಗ್, ಬ್ಯಾಟರಿ ತಂತ್ರಜ್ಞಾನ ಇನ್ನೂ ಇರದ ಕಾರಣ, ನಿಂತಲ್ಲೇ ಕಾರನ್ನು ಪ್ರಾರಂಭಿಸಲು ಸಾಧ್ಯವಿರಲಿಲ್ಲ. ಈ ಕಾರಿಗೆ ಸ್ಟಿಯರಿಂಗ್ ಕೂಡ ಇಲ್ಲ. ದಿಕ್ಕು ಬದಲಾಯಿಸಲು ಸೈಕಲ್ ಗಾಲಿಗೆ ಕೊಡುವ ರೀತಿಯ ಒಂದು ಹತೋಟಿ ಮಾತ್ರ ಇದೆ.
“ದೂರದ ಹಸಿರು” ಸರಣಿಯಲ್ಲಿ ಜೆರ್ಮನಿಯ ಕಾರು ಸಂಗ್ರಹಾಲಯದ ಕುರಿತು ಗುರುದತ್ ಅಮೃತಾಪುರ ಬರಹ

Read More

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಆನಂದದ ಹುಡುಕಾಟದಲ್ಲಿ…: ಡಾ. ಎ.ಎನ್. ನಾಗರಾಜ್ ಅನುಭವ ಕಥನ

ಗಾಂಧೀಜಿಯವರು ದೂರದಲ್ಲಿದ್ದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಿದ್ದರು, ಅವರಲ್ಲಿ ಪ್ರೀತಿಯನ್ನು ಉಕ್ಕಿಸಿಬಿಡುತ್ತಿದ್ದರು ಎನ್ನುವುದಕ್ಕೆ ಉದಾಹರಣೆಯಾಗಿ ನನ್ನ ತಾಯಿಯ ಮೇಲೆ ಅವರು ಪ್ರಭಾವ ಬೀರಿದ್ದು ಹೀಗೆ. ಗಾಂಧೀಜಿ ಮೈಸೂರಿಗೆ ನಾನು 2 ಅಥವಾ 3 ವರ್ಷದವನಾಗಿದ್ದಾಗ ಬಂದಿದ್ದರಂತೆ. ನಾವೆಲ್ಲ ಅವರನ್ನು ನೋಡುವುದಕ್ಕೆ ಹೋಗಿದ್ದೆವಂತೆ. ಗಾಂಧೀಜಿಯವರು ಎಲ್ಲರಿಂದಲೂ ಹಣ ಸಹಾಯ ಕೋರಿದರಂತೆ. ಏನೂ ಓದಿಲ್ಲದ ಮುಗ್ಧ ಜಯಮ್ಮ ಅವರಿಗೆ ತಕ್ಷಣ ತನ್ನ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ತೆಗೆದು ಕೊಟ್ಟಳಂತೆ.
ಡಾ. ಎ.ಎನ್. ನಾಗರಾಜ್ ಅನುಭವ ಕಥನ “ಆನಂದದ ಹುಡುಕಾಟದಲ್ಲಿ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನನ್ನಜ್ಜನೂ… ಮತ್ತು ಅವನ ಸೈಕಲ್ಲೂ….: ಬಸವನಗೌಡ ಹೆಬ್ಬಳಗೆರೆ ಪ್ರಬಂಧ

ಮನೆಯಲ್ಲಿ ಸೈಕಲ್ ಇಲ್ಲದ ಹುಡುಗರು ಆ ಊರಲ್ಲಿದ್ದ ಸಬ್ಬೀರಣ್ಣನ ಪಂಕ್ಚರ್ ಶಾಪ್‌ನಲ್ಲಿ ಬಾಡಿಗೆ ಇರಿಸಿದ್ದ ಸಣ್ಣ ಸೈಕಲ್ಲುಗಳನ್ನು ಹೊಡೆಯುತ್ತಿದ್ದರು. ಇಪ್ಪತ್ತೈದು ಪೈಸೆಗೆ ಅರ್ಧ ಘಂಟೆ ಕಾಲ ಬಾಡಿಗೆ ಕೊಡುತ್ತಿದ್ದನವನು! ಅದ್ಯಾವ ನಂಬಿಕೆ ಮೇಲೆ ಕೊಡುತ್ತಿದ್ದನೋ ಗೊತ್ತಿಲ್ಲ. ಹೊಲಕ್ಕೆ ಬುತ್ತಿ ಒಯ್ಯಬೇಕಾದಾಗ ಮಾತ್ರ ಖುಷಿಯಿಂದ ಸೈಕಲ್ ಕೊಡುತ್ತಿದ್ದ ಅಜ್ಜ ಬೇರೆ ಸಮಯದಲ್ಲಿ ಅದನ್ನು ಮುಟ್ಟೋಕು ಬಿಡ್ತಾ ಇರಲಿಲ್ಲ. ಪೆಟ್ರೋಲ್ ಡೀಸೆಲ್ ಅಂತಾ ಏನೂ ಖರ್ಚು ಆಗೋಲ್ಲ. ಅದ್ಯಾಕಂಗೆ ಆಡ್ತಿದ್ರು ನಮ್ಮಜ್ಜ ಅನ್ನೋದೆ ಇಂದಿಗೂ ನನಗೆ ಉತ್ತರ ಹೊಳೆಯದ ಪ್ರಶ್ನೆಯಾಗಿದೆ!
ಬಸವನಗೌಡ ಹೆಬ್ಬಳಗೆರೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ