Advertisement

Tag: ಕೆಂಡಸಂಪಿಗೆ

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ಸಿನೆಮಾ ಜಗತ್ತಿನ ಒಳಹೊರಗು…

ಗಾಸಿಪ್ ಗ್ಲಾಮರಗಳ ಹೊರತಾಗಿಯೂ ಆ ಕಲಾವಿದರೂ ಮನುಷ್ಯರು, ನಮ್ಮಂತಹುದೇ ಅಂತಃಕರಣ ಉಳ್ಳವರು ಎಂಬ ಕನಿಷ್ಠ ಪ್ರಜ್ಞೆಯಿಲ್ಲದೇ ಜನರು ಪ್ರತಿಕ್ರಿಯಿಸುತ್ತಾರೆ. ಸಿನೆಮಾದವರೆಂದರೆ ಕೇವಲ ಪರದೆಯ ಮೇಲಿನ ಪಾತ್ರಗಳು ಮಾತ್ರ ಎಂದು ಗ್ರಹಿಸುವ ಮನಸ್ಸುಗಳಿಂದ ಬೇರೆನನ್ನು ನಿರೀಕ್ಷಿಸಲು ಸಾಧ್ಯ? ಎಂಬುದನ್ನು “ಬ್ರೇಕಿಂಗ್ ನ್ಯೂಸ್‍ಗಿಂತ ಬದುಕು ದೊಡ್ಡದು” ಎಂಬ ಪ್ರಬಂಧದಲ್ಲಿ ಹೆಸರಾಂತ ಕಲಾವಿದರೇ ಅನುಭವಿಸಿದ ನೋವಿನ ಪ್ರಸಂಗಗಳನ್ನು ಕಟ್ಟಿಕೊಡುತ್ತಾರೆ ಲೇಖಕರು.
ಎನ್.ಎಸ್. ಶ್ರೀಧರ ಮೂರ್ತಿಯವರ ಪ್ರಬಂಧಗಳ ಸಂಕಲನ “ಅಂದದ ಹೆಣ್ಣಿನ ನಾಚಿಕೆ”ಯ ಕುರಿತು ನಾಗರೇಖಾ ಗಾಂವಕರ ಬರಹ

Read More

ಆ ಹುಡುಗಿ ಹಾಗೆಯೇ ಮರಳಿ ಹೋಗಿದ್ದಳು

ಭಿಕ್ಷುಕರೆಂದರೆ ಯಾಕೆ ನಮ್ಮ ಮನಸ್ಸಿಗೆ ತಂಗಳನ್ನವೇ ಬರಬೇಕು ಅಂತ ಪ್ರಶ್ನಿಸಿಕೊಂಡಿದ್ದೇನೆ. ಯಾವುದೋ ಕಾರಣ, ಅಸಹಾಯಕತೆ, ಮತ್ಯಾವುದೋ ಅನಿವಾರ್ಯತೆಯ ಪರಿಸ್ಥಿತಿಗಳು ಅವರನ್ನು ಭಿಕ್ಷೆಗೆ ಹಚ್ಚಿರಬಹುದು. ಆದರೆ ಅವರಿಗೂ ನಮ್ಮಂತೆಯೇ ಎಲ್ಲ ಸವಿಯನ್ನೂ ಸವಿಯಬೇಕೆನ್ನುವ ಆಸೆಗಳೂ ಇರುತ್ತವೆ. ಆ ಆಸೆಗಳನ್ನು, ಅಭಿಲಾಷೆಗಳನ್ನು ನಾವು ಅರ್ಥ ಮಾಡಿಕೊಂಡರೆ ಆ ಮುಗ್ಧ ಮುಖಗಳಲ್ಲಿ ಒಂದಿಷ್ಟಾದರೂ ಮಂದಹಾಸ ಮೂಡಿಸಬಹುದಲ್ಲವೇ? ದೈಹಿಕ ಸಾಮರ್ಥ್ಯವಿದ್ದೂ, ಶಕ್ತರಾಗಿದ್ದೂ ಭಿಕ್ಷೆ ಬೇಡುತ್ತಿದ್ದರೆ ಅದನ್ನು ವಿರೋಧಿಸೋಣ.
ಇಸ್ಮಾಯಿಲ್‌ ತಳಕಲ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ