Advertisement

Tag: ಕೆಂಡಸಂಪಿಗೆ

ಸಾಂಸ್ಕೃತಿಕ ಲೋಕಕ್ಕೆ ವೇದಿಕೆಯಾಗಿದ್ದ ನಗರ…

ಪವರ್ ಹೌಸ್ ಹಿಂಭಾಗವೇ ಶಿವನ ಹಳ್ಳಿ. ಆಗ ಅರವತ್ತರ ದಶಕದಲ್ಲಿ ಒಂದು ಹದಿನೈದು ಅಡಿ ಅಗಲದ ಮಣ್ಣಿನ ರಸ್ತೆ ಇವೆರೆಡರ ಮಧ್ಯೆ ಹಾದು ಹೋಗುತ್ತಿತ್ತು. ಪೂರ್ತಿ ಏರಿಯಾ ರೆವೆನ್ಯೂ ನಿವೇಶನಗಳು. ಅರವತ್ತು ನೂರರ ಸೈಟುಗಳು ಐನೂರು ಆರು ನೂರು ರೂಪಾಯಿ. ಸುಮಾರು ಜನ ನಿವೇಶನ ಕೊಂಡವರು ರೆವೆನ್ಯೂ ಆಸ್ತಿ, ಸೈಟು ರೋಡ್ ಆಗುತ್ತೆ ಅಂತ ಹೆದರಿ ಮಾರಿದರು. ಎಷ್ಟೋ ಜನರಿಗೆ ಈ ರೀತಿ ಆಗಿ ಆಗಿ ಹೆದರಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಹೈಸ್ಕೂಲಿನಲ್ಲಿ ಕೋಲಿನಿಂದ ಯಾವಾಗಲೂ ಮಕ್ಕಳನ್ನು ವಿಪರೀತ ಹೊಡೆಯುತ್ತಿದ್ದ, ವಿದ್ಯಾರ್ಥಿಗಳಿಗೆ ದೊಡ್ಡ ದಂಡ ವಿಧಿಸುತ್ತಿದ್ದ ಶಿಕ್ಷಕರೊಬ್ಬರ ವರ್ತನೆಯನ್ನು ಪ್ರತಿಭಟಿಸಿ ಗಲಾಟೆ ಮಾಡಿದ್ದರು. ಸಹವಿದ್ಯಾರ್ಥಿಗಳನ್ನು ಸಂಘಟಿಸಿ ತರಗತಿ ಬಹಿಷ್ಕರಿಸಿದ್ದರು. ಪಟೇಲರು ಸಂಘಟಿಸಿದ ಶಾಲಾದಿನಗಳ ಮೊದಲ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಾಗ, ಹುಡುಗನ ನಾಯಕತ್ವ ಮತ್ತು ಸಂಘಟನೆಯನ್ನು ಗುರುತಿಸಿದ ಪ್ರಾಂಶುಪಾಲರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳನ್ನು ಮುಂದೆಂದೂ ಆ ಅಧ್ಯಾಪಕರು ಕಟುವಾಗಿ ಶಿಕ್ಷಿಸದಿರುವ ಆಶ್ವಾಸನೆ ನೀಡಿದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ.
ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

Read More

ಗಾಢವಾಗಿ ಆವರಿಸಿಕೊಂಡ ಸಾವಿನ ಚಾದರದೊಳಗಿಂದ…

ಸಾವೇ ಹಾಗೆ ಅದು ಉಂಟು ಮಾಡು ಪರಿಣಾಮವೂ ತೀವ್ರತರವಾದದ್ದು. ಹತ್ತಿರದವರ ಸಾವು ನಮ್ಮ ಬದುಕನ್ನು ಪಲ್ಲಟಗೊಳಿಸುವ ರೀತಿ ಎಂಥವರನ್ನೇ ಆಗಲಿ ಮಾನಸಿಕವಾಗಿ ಕುಗ್ಗಿಸಿಬಿಡುತ್ತದೆ. ಅದು ಸಹಜವಾದ ಸಾವಾದರೆ ಅದನ್ನು ಸಹಜವಾಗಿಯೇ ಸ್ವೀಕರಿಸಲು ಪ್ರಯತ್ನಿಸಬಹುದು. ಆದರೆ ಅದು ಕೊಲೆಯೋ, ಆತ್ಮಹತ್ಯೆಯೋ ಆಗಿದ್ದರೆ, ನಿಜಕ್ಕೂ ಅದನ್ನು ಮನಸ್ಸು ಒಪ್ಪಲು, ನಂಬಲು ಸಿದ್ಧವಿರುವುದೇ ಇಲ್ಲ.
ಅಕಾಲಿಕ ಸಮಯದಲ್ಲಿ ಸಾವಿನ ಬಾಗಿಲು ತಟ್ಟಿದ ಹಲವು ಲೇಖಕಿಯರ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ