Advertisement

Tag: ಕೆಂಡಸಂಪಿಗೆ

ಬರಿ ಬಿಯರಿನ ಕತೆಯಲ್ಲ ಇದು…

ಬಹಳಷ್ಟು ಪಬ್‌ಗಳು ಹತ್ತು, ಹನ್ನೆರಡನೇ ಶತಮಾನದಲ್ಲಿ ಡಬ್ಲಿನ್ ಬೀದಿಗಳಲ್ಲಿ ತಲೆದೋರಿದವು. ಮುಂದೆ ಇವು ಸಮಾನ ಆಸಕ್ತರ ಕೇಂದ್ರಗಳಾಗಿ ಸಾಮಾಜಿಕ ಹರಟೆಕಟ್ಟೆಗಳಾಗಿ ಬೆಳೆದವು. ಕೆಲವು ಪಬ್‌ಗಳಲ್ಲಿ ಬರೀ ವ್ಯಾಪಾರಸ್ಥರು ಸೇರಿಕೊಂಡರೆ, ಮತ್ತೆ ಹಲವು ಸಂಗೀತಗಾರರ ಕೇಂದ್ರಗಳಾದವು. ಮತ್ತೆ ಹಲವು ಸಾಹಿತಿಗಳೂ ಕವಿಗಳೂ ಸೇರುವ ಸ್ಥಳಗಳಾದವು. ಮತ್ತೆ ಕೆಲವು ರಾಜಕೀಯದವರು, ಗಣ್ಯರು, ಶ್ರೀಮಂತರು ಸೇರುವ ಜಾಗಗಳು… ವೈಶಾಲಿ ಹೆಗಡೆ ಐರಿಷ್ ಬರಹ

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಈ ಭಾನುವಾರದ ಕತೆ

ಮಜೀದ್ ಕ್ಯಾಷಲ್‌ನ ಭಾರಕ್ಕಿಂತಲೂ ಭಾರವಾದ ಹೃದವನ್ನಿಟ್ಟುಕೊಂಡು ನಾನು ಬಾಳುತ್ತಿರುವುದನ್ನು ಅವರಿಗೆ ಹೇಳಲು ಆಗುತ್ತಿಲ್ಲ. ಮುಂದೆ ಹೇಳದಲೆ ಹೋಗಬಹುದು. ಅವರು ಅದನ್ನು ನಂಬುತ್ತಾರೋ ಇಲ್ಲವೋ. ನಾನು ಯಾರು ಎಂಬುದನ್ನು ಅಷ್ಟಾಗಿ ವಿಚಾರಿಸಲೂ ಹೋಗಲೇ ಇಲ್ಲ. ಅವರೊಂದಿಗೆ ನಾನು ಇರಲು ಅಷ್ಟು ಸಹಜವಾಗಿ ಒಪ್ಪಿಕೊಂಡುಬಿಟ್ಟರು. ನಾನು ಪ್ರಾಗ್‌ನಿಂದ ಬರುವ ಮುನ್ನ ಅವರೊಂದಿಗೆ ಬಾಂಬೆಯ ನಜ್ಮಾ ಎಂಬ ಚಾಕರಿಯವಳು ಮತ್ತು ಅವಳ ಸಂಸಾರ ಇತ್ತು.
ಲಿಂಗರಾಜ ಸೊಟ್ಟಪ್ಪನವರ್‌ ಬರೆದ ಕತೆ “ಪಾತ್ರ” ನಿಮ್ಮ ಭಾನುವಾರದ ಓದಿಗೆ

Read More

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

Read More

ಕನ್ನಡಿಗರೆಂಬ ಸಂಪನ್ನರೂ ಸಜ್ಜನರೂ..

ಇಡೀ ಭಾರತ ದೇಶದಲ್ಲಿ ಸಂಪನ್ನರೆಂದರೆ ಯಾರು? ಎಂದು ಯಾರಾದರೂ ಕೇಳಿದರೆ ನಾನಂತೂ ಕನ್ನಡಿಗರೇ ಎಂದು ಕೇಕೆ ಹಾಕಿ ಹೇಳಬಲ್ಲೆ. ಏಕೆಂದರೆ ಕನ್ನಡಿಗರಷ್ಟು ಸಂಪನ್ನರು ಮತ್ತು ಸಹೃದಯಿಗಳು ಭಾರತದ ಇತರೆ ರಾಜ್ಯಗಳಲ್ಲಿ ಇಲ್ಲ. ಇಂದು ಯಾವುದೇ ರಾಜ್ಯದ, ಯಾವುದೇ ಭಾಷೆಯ ಮಂದಿ ಕರ್ನಾಟಕದಲ್ಲಿ ಬಂದು ನೆಲೆಸಬಹುದು. ಕರ್ನಾಟಕದಲ್ಲಿ ಉದ್ಯೋಗ, ವ್ಯಾಪಾರ ಮಾಡಿಕೊಂಡು ನೆಮ್ಮದಿಯಿಂದ ಜೀವಿಸಬಹುದು. ಎರಡ್ಮೂರು ತಲೆಮಾರುಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ಕಲಿಯದೆ ಸುಖವಾಗಿ ಜೀವನ ನಡೆಸಬಹುದು.  ಕನ್ನಡಿಗರು ಎಷ್ಟು ಸಂಪನ್ನ ಮಂದಿಯೆಂದರೆ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಬದಲು ತಾವೇ ಅವರ ಭಾಷೆ ಕಲಿತು, ಅವರೊಂದಿಗೆ ಅದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ವಿಕಾಸ ಹೊಸಮನಿ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ