Advertisement

Tag: ಕೆಂಡಸಂಪಿಗೆ

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ಆಂತರ್ಯದ ಬೆಳಗಿನಿಂದ ಹೊರಹೊಮ್ಮಿದ ಭಾವ ಕಿರಣ..

ಬದುಕಿನ ಸಂಕಷ್ಟದಲ್ಲಿ ಹೆಬ್ಬಂಡೆಯಾಗಿ ಕಷ್ಟಕಾರ್ಪಣ್ಯಗಳನ್ನು ಹಿಮ್ಮೆಟ್ಟಿಸುವ ಶಕ್ತಿಯೇ ಭರವಸೆ. ಭರವಸೆ ಎಂತಹ ಹೋರಾಡುವ ಶಕ್ತಿ ತುಂಬುತ್ತದೆಯಂದರೆ ಫೇಸ್ಬುಕ್ಕಿನ ಒಂದು ಸಂದೇಶದಂತೆ ಎಷ್ಟೇ ಸೋತರೂ ಕುಸಿಯುವುದಿಲ್ಲ. ಹೆದರಿ ಓಡುವುದಿಲ್ಲ ಏಕೆಂದರೆ ನಾನು ನೂರು ಬಾರಿ ಗೆದ್ದವನಲ್ಲ, ಸಾವಿರ ಬಾರಿ ಸೋತವನು ಈ ರೀತಿಯಾಗಿ ಸಕಾರಾತ್ಮಕ ಚಿಂತನೆಯ ಓಂಕಾರದ ದ್ಯೋತಕವಾಗಿರುವ ಕಾರಣದಿಂದ ಇನ್ನೇನು ಬದುಕು ಮುಗಿಯಿತು ಎಂದು. ಸುಳಿಗಾಳಿಗೆ ಸಿಕ್ಕು ತರೆಗೆಲೆಯಂತೆ ಕಷ್ಟದ ಕುಲುಮೆಯಲ್ಲಿ ಬೆಂದು ಬಸವಳಿದವರಿಗೆ ಫಿನಿಕ್ಸ್‌ನಂತೆ. ಆಕಾಶದೆತ್ತರಕೆ ಮೇಲೆರುವ ತಾಕತ್ತೆ ಭರವಸೆ.
ಶಿವನಗೌಡ ಪೊಲೀಸ್ ಪಾಟೀಲ್ ಅವರ ಕವನ ಸಂಕಲನಕ್ಕೆ ಶರಣಬಸಪ್ಪ ಬಿಳೆಯಲಿ ಬರೆದ ಮುನ್ನುಡಿ

Read More

ನಿಂತಲ್ಲಿ ಕುಂತಲ್ಲಿ ಕಾಡುವ ಕಥೆ ಬರೆದ ದಾದಾ

ಇಲ್ಲಿರುವ ಎಲ್ಲಾ ಕತೆಗಳಿಗಿಂತ ಕೊನೆಯ ಕತೆ ‘ಎಲ್ಲೋ ಯಲ್ಲೋ’
ಕಥೆಯೇ ಯಾಕೆ ಜಾಸ್ತಿ ಇಷ್ಟವಾಯಿತು ಅಂದುಕೊಂಡರೂ ಯಾವುದ್ಯಾವುದೋ ಕಾರಣಗಳು ತೋಚುತ್ತವೆ. ಆದರೆ ಮುಖ್ಯವಾಗಿ ಇಷ್ಟವಾಗಿದ್ದು ಒಂದು ಗಂಡು ಮತ್ತು ಹೆಣ್ಣಿನ ನಡುವೆ ಇರಬಹುದಾದ ಸಹಜವಾದ ಗೆಳೆತನದ ರೀತಿ ಮತ್ತು ಒಬ್ಬಳು ಶಿಕ್ಷಕಿಯ ಗಂಡನಾಗಿ ಅವರ ಕಷ್ಟ‌ನಷ್ಟಗಳ ಬಗ್ಗೆ ಅರಿವಿರುವುದು. ಹೇಗೆ ಹುಡುಗ ಹುಡುಗ ಆತ್ಮೀಯ ಗೆಳೆಯರಾಗಿರಲು ಸಾಧ್ಯವೋ ಅದೇ ರೀತಿ ಹುಡುಗ ಹುಡುಗಿ ಕೂಡಾ ಅದೇ ಆತ್ಮೀಯತೆಯಲ್ಲಿರಲು ಸಾಧ್ಯ. ಸಮಾಜ ಈ ವಿಷಯದಲ್ಲಿ ಮುಂಚಿನಷ್ಟು ಮಡಿವಂತಿಕೆ ಇಟ್ಟುಕೊಂಡಿಲ್ಲವಾದರೂ ಪೂರ್ತಿ ಬದಲಾಗಿಯೂ ಇಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ವ್ಯಾಸರಾವ್‌ ನಿಂಜೂರ್‌ ಆತ್ಮಕಥನದ ಪುಟಗಳು

ಕೊಡವೂರಿನಲ್ಲಿ ಎಂಟನೆಯ ದರ್ಜೆ ತೇರ್ಗಡೆಯಾದ ಬಳಿಕ, ನನ್ನ ಅಣ್ಣ ರಾಮಚಂದ್ರ ಕಲಿಯುತ್ತಿದ್ದ ಮಲ್ಪೆಯ ಫಿಶರೀಸ್ ಹೈಸ್ಕೂಲಿಗೆ ಸೇರಿಕೊಳ್ಳುವುದು ಎಂದು ಮನೆಮಂದಿಯ ಲೆಕ್ಕಾಚಾರವಿತ್ತು. ಅಲ್ಲಿ ಫೀಸಿನಲ್ಲೂ ರಿಯಾಯಿತಿ ಪಡೆಯುವ ಸಂಭವವಿತ್ತು. ಆದರೆ ಅಪ್ಪಯ್ಯನ ತರ್ಕವೇ ಬೇರೆ. `ದೂರ ನಡೆದುಕೊಂಡು ಹೋದರೆ ವಿದ್ಯೆ ತಲೆಗೆ ಹತ್ತುತ್ತದೆ. ಆದ್ದರಿಂದ ಕಲ್ಯಾಣಪುರದ ಮಿಲಾಗ್ರಿಸ್ ಹೈಸ್ಕೂಲೇ ಸಮ’ ಎಂದುಬಿಟ್ಟರು. ಅವರ ಮಾತಿಗೆ ಅಪೀಲೇ ಇಲ್ಲ. ಬರಿಗಾಲಲ್ಲಿ ಕಲ್ಬಂಡೆ, ಅರ್ಕಾಳಬೆಟ್ಟು, ನೇಜಾರು ಮಾರ್ಗವಾಗಿ ಕಲ್ಯಾಣಪುರ ಮುಟ್ಟಲು ಕನಿಷ್ಠ ಒಂದು ಗಂಟೆಯಾದರೂ ಬೇಕು.
ವ್ಯಾಸರಾವ್‌ ನಿಂಜೂರ್‌ ಅವರ ಆತ್ಮಕಥನ “ಎಳೆದ ತೇರು” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ