Advertisement

Tag: ಕೆಂಡಸಂಪಿಗೆ

ಉಳಿದು ಹೋಗುವುದೆಂದರೆ… ವಿನಾಯಕ ಅರಳಸುರಳಿ ಅಂಕಣ

ಮುಂದಿನ ಕೆಲ ವರ್ಷಗಳ ಕಾಲ ಆ ಪತ್ರ ಹಾಗೆಯೇ ಇಲ್ಲದ ಅಜ್ಜನ ಹೆಸರನ್ನು ವಿಳಾಸವಾಗಿಸಿಕೊಂಡು ಬಂದು ನಮಗೆಲ್ಲ ಶುಭಾಶಯ ಹೇಳುತ್ತಿತ್ತು. ಕೊನೆಗೊಂದು ದಿನ ಯಾರಿಂದಲೋ ಗೊತ್ತಾದ ವಿಷಯವೇನೆಂದರೆ ಆ ಪತ್ರದ ಬುಡದಲ್ಲಿ ‘ಶುಭಕೋರುವವರು – ABC ಆಚಾರ್’ ಎಂದು ಬರೆದಿರುತ್ತಿದ್ದ, ಅಜ್ಜ ಹೇಳುತ್ತಿದ್ದ ಆಚಾರ್ ಇದ್ದರಲ್ಲ, ಅವರೂ ತೀರಿಹೋಗಿ ಕೆಲ ವರ್ಷಗಳೇ ಆಗಿದ್ದವು! ಅವರ ಮಗನೇ ಅವರ ಹೆಸರಿನಲ್ಲಿ ಈ ಶುಭಾಶಯ ಪತ್ರವನ್ನು ಗ್ರಾಹಕರಿಗೆ ಕಳಿಸುತ್ತಿದ್ದ! ಹೇಗೆ ಅವರ ದೃಷ್ಟಿಯಲ್ಲಿ ತೀರಿಹೋದ ಬಳಿಕವೂ ಅಜ್ಜ ಜೀವಂತವಾಗಿದ್ದನೋ ಹಾಗೇ ನಮ್ಮೆಲ್ಲರ ದೃಷ್ಟಿಯಲ್ಲಿ ಆಚಾರರೂ ಜೀವಂತವಾಗಿದ್ದರು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ

ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ

ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ