Advertisement

Tag: ಕೆಂಡಸಂಪಿಗೆ

ಪುರಂದರದಾಸರು ಕನ್ನಡಮಾತೆಯ ಸುಪುತ್ರರಾಗಬಹುದು, ಕನಕದಾಸರಿಗೆ ಆ ಭಾಗ್ಯವಿಲ್ಲ!: ಸುಕನ್ಯಾ ಕನಾರಳ್ಳಿ ಅಂಕಣ

ಕನ್ನಡ ಸಿನೆಮಾ ಪುರಂದರದಾಸ ಮತ್ತು ಕನಕದಾಸರನ್ನು ಅರಿವಿಗೆ ದಕ್ಕಿಸಿಕೊಂಡ ರೀತಿಯಲ್ಲಿ ವ್ಯತ್ಯಾಸವಿರುವುದನ್ನು ಗಮನಿಸದೇ ಇರುವುದು ಕಷ್ಟ. ಎರಡೂ ಕಥಾನಕಗಳಲ್ಲಿ ಸಾಮಾನ್ಯ ಅಂಶಗಳಿರುವುದೂ ಸರಿಯೆ. ಉದಾಹರಣೆಗೆ ಬ್ರಾಹ್ಮಣ, ಬ್ರಾಹ್ಮಣೀಯತೆ, ಬ್ರಾಹ್ಮಣಿಕೆ ಮುಂತಾದ ಪರಿಕಲ್ಪನೆಗಳು ಎರಡರಲ್ಲೂ ಸಾಕಷ್ಟು ಲೇವಡಿಗೆ ಒಳಗಾಗುತ್ತವೆ. ಹಾಗೆ ನೋಡಿದರೆ ಕನ್ನಡದ ಹೆಚ್ಚಿನಂಶ ಎಲ್ಲ ಸಂತಚರಿತೆಗಳಲ್ಲಿ ಅದು ಸಾಮಾನ್ಯವೇ. ಕನಕ ಒಬ್ಬ ಅಬ್ರಾಹ್ಮಣ. ಕ್ಷತ್ರಿಯನೊ ಕುರುಬನೋ ಆಗಿದ್ದಿರಬೇಕು. ಚಿತ್ರದ ಹೆಚ್ಚಿನಂಶ ಅವನು ಬ್ರಾಹ್ಮಣ ವಿರೋಧವನ್ನು ನಿಭಾಯಿಸುವುದಕ್ಕೇ ಮೀಸಲಾಗುತ್ತದೆ. ಅವರಿಗಿಂತ ಅವನು ಹೇಗೆ ‘ಹೆಚ್ಚು’ ಬುದ್ಧಿವಂತ, ವಿವೇಕಿ, ಮತ್ತು ಅವನೂ ಸಹ ತನ್ನ ಪರಮಭಕ್ತಿಯ ಕಾರಣದಿಂದ ಮೋಕ್ಷಕ್ಕೆ ಅರ್ಹ ಎನ್ನುವುದನ್ನು ಸಾಬೀತುಪಡಿಸಲು ಚಿತ್ರ ಉದ್ದಕ್ಕೂ ಹೆಣಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ

Read More

ಸುಂದರ ಕಾಡಿನ ರೋಚಕ ಕಥೆಗಳು-೮: ರೂಪಾ ರವೀಂದ್ರ ಜೋಶಿ ಸರಣಿ

ಜೇನು ತುಂಬಿದ ರಟ್ಟಿನ ಜೊತೆಗೆ ಇರುವ ಜೇನು ನೊಣಗಳ ಮೊಟ್ಟೆ ಮರಿ ತುಂಬಿದ್ದ ರಟ್ಟನ್ನು ನಿರ್ದಯವಾಗಿ ಬಿಸಾಡಲಾಗುತ್ತಿತ್ತು. ಈ ಹೊಗೆಯ ತಾಪಕ್ಕೆ ನೂರಾರು ಜೇನು ನೊಣಗಳು ಸಾಯುತ್ತಿದ್ದವು. ಒಂದಿಷ್ಟು ದಿಕ್ಕೆಟ್ಟು ಹಾರಿ ಹೋಗುತ್ತಿದ್ದವು. ಇದನ್ನೆಲ್ಲಾ ಈಗ ನೆನೆದರೆ, ‘ಛೆ… ನಾವು ಮನುಷ್ಯರು ಎಷ್ಟು ಸ್ವಾರ್ಥಿಗಳು. ಪಾಪದ ನೊಣಗಳು ಊರೂರು ಸುತ್ತಿ ಮಕರಂದ ಸಂಗ್ರಹಿಸಿ ತಮಗಾಗಿ ತಯಾರಿಸಿಕೊಂಡಿದ್ದ ಊಟವನ್ನು ಮೋಸದಿಂದ ಅಪಹರಿಸುವುದಲ್ಲದೇ ಅವರ ಪ್ರಾಣಕ್ಕೂ ಹಾನಿಯುಂಟು ಮಾಡುತ್ತೇವಲ್ಲಾ..
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನೇಳನೆಯ ಕಂತು

Read More

ರವಿಶಂಕರ್‌ ಎಸ್. ಎಲ್. ಬರೆದ ಈ ಭಾನುವಾರದ ಕತೆ “ರೋಬಿಣಿ”

ಟೀನಾ ಒಂದು ದಿನ ರೋಬಿಣಿಯನ್ನು ಕರೆದು ಮನೆ ಕೆಲಸಗಳಲ್ಲಿ ಸಹಾಯ ಮಾಡಲು ಕೇಳಿದಳು. ರೋಬಿಣಿ ಕಡ್ಡಿತುಂಡರಿಸಿದಂತೆ ನಿರಾಕರಿಸಿದಳು. ರೋಬಿಣಿಯನ್ನು ಮುಂದಿನ ಬಾರಿ ಬದಲಾಯಿಸುವಾಗ ಮನೆ ಕೆಲಸಗಳನ್ನು ಮಾಡುವಂತಹ ಪ್ರೋಗ್ರಾಮ್ ಅಳವಡಿಸಲು ಬಿಎಂಐ ಕಂಪನಿಗೆ ಹೇಳಬೇಕು ಎಂದುಕೊಂಡಳು ಟೀನಾ. ಅದು ಸಾಧ್ಯವಿಲ್ಲವೆಂದು ಜಗ ಟೀನಾಗೆ ತಿಳಿಸಿ ಹೇಳಿದ. ಕಂಪನಿಯ‌ ಪ್ಯಾಕೇಜ್ ನಿಬಂಧದಂತೆ ಹಾಗೂ ರೋಬಾಟ್ಸ್ ರೈಟ್ಸ್ ಪ್ರಕಾರ, ಮಗುವಂತೆ ಸಾಕಲು ಪಡೆದ ರೋಬಾಟ್‌ಗಳಿಂದ ಮನೆಕೆಲಸಗಳನ್ನು ಮಾಡಿಸಲು ಸಾಧ್ಯವಿರಲಿಲ್ಲ.
ರವಿಶಂಕರ್‌ ಎಸ್. ಎಲ್. ಬರೆದ ಈ ಭಾನುವಾರದ ಕತೆ “ರೋಬಿಣಿ” ನಿಮ್ಮ ಓದಿಗೆ

Read More

ಕವಾಟದಾಟ: ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ

“ಅಕ್ಕಾ, ಈ ಕವಾಟ ನಮ್ಮ ಹೃದಯದಲ್ಲೂ ಇರತ್ತೆ ಅಲ್ವಾ?” ಎಂದಳು ವಿಭಾ. ಆಗ ಕಾವ್ಯ ನೀರು ಕುಡಿಯುತ್ತಾ “ಹೌದು ವಿಭಾ, ಹೃದಯದಲ್ಲೂ ಹೀಗೆ ರಕ್ತವು ಸರಿಯಾದ ದಿಕ್ಕಿನಲ್ಲಿ ಮಾತ್ರ ಹರೀಬೇಕು ಅನ್ನೋ ಕಾರಣದಿಂದ ವಿವಿಧ ಬಗೆಯ ಕವಾಟಗಳು ಅಂದ್ರೆ ‘ವಾಲ್ವ್’ಗಳು ಇವೆ. ಅವು ರಕ್ತವು ವಾಪಸ್ ಬರದಂತೆ ರಪ್ಪನೆ ಮುಚ್ಚಿಕೊಳ್ಳುತ್ವೆ” ಎಂದು ಹೇಳ್ತಾ, ಕುಡಿಯುತ್ತಿದ್ದ ನೀರು ಗಂಟಲು ಹತ್ತಿ, ಕೆಮ್ಮುವುದಕ್ಕೆ ಶುರು ಮಾಡಿದಳು. ಆಗ ವಿಭಾ ಅಕ್ಕನ ಬೆನ್ನು ಸವರಿ, “ತಲೆ ಮೇಲೆತ್ತು” ಎಂದು ಉಪಚರಿಸುತ್ತಾ, “ಅದಕ್ಕೇ, ನೀರು ಕುಡಿಯುವಾಗ ಮಾತಾಡಬಾರದು ಕಾವ್ಯಕ್ಕಾ” ಎಂದಳು; ಅವಳ ಮಾತಿನಲ್ಲಿದ್ದ ಕೊಂಚ ಕಕ್ಕುಲಾತಿ, ಕೊಂಚ ತರಲೆತನವನ್ನು ಗಮನಿಸಿದ ಕಾವ್ಯಳಿಗೆ ವಿಭಾಳನ್ನು ನೋಡಿ ನಗೆಯುಕ್ಕಿತು.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ಯಲ್ಲಿ ಮೂರನೆಯ ಕತೆ

Read More

ಪ್ರಾಣಿ ಒಡನಾಟದಲ್ಲಿನ ಮನುಷ್ಯರ ಸಂಕಟ: ಡಾ. ವಿನತೆ ಶರ್ಮ ಬರೆಯುವ ಅಂಕಣ

ಕಾಡಿನ ರಸ್ತೆಯಲ್ಲಿ ಹೋಗುವಾಗ ವಾಹನ ನಿಲ್ಲಿಸಬೇಡಿ, ಪ್ರಾಣಿಗಳಿಗೆ ಆಹಾರ ಕೊಡಬಾರದು ಎಂದು ದಪ್ಪ ಅಕ್ಷರಗಳಲ್ಲಿ ಬರೆದಿದ್ದರೂ ಅಲ್ಲಲ್ಲಿ ಜನ ವಾಹನಗಳನ್ನು ನಿಲ್ಲಿಸಿದ್ದರು. ಪ್ರಾಣಿಗಳು ಕಾಣಿಸುತ್ತಿವೆ ಎಂದು ಖುಷಿ. ಹತ್ತಿರ ಬರುವ ಮಂಗಗಳಿಗೆ ಹಣ್ಣು, ಸ್ನ್ಯಾಕ್ಸ್ ಕೊಡುವುದು ಮಾಡುತ್ತಿದ್ದರು. ಸ್ವಲ್ಪ ದೂರದಲ್ಲಿ ಇದ್ದ, ಮಂಗಗಳನ್ನೇ ನೋಡುತ್ತಿದ್ದ ಜಿಂಕೆಗಳನ್ನು ಕರೆಯುವುದು ನಡೆದಿತ್ತು. ಇಷ್ಟಾದ ನಂತರ ಹೀಗೆಯೆ ಹಣ್ಣು ತೋರಿಸಿ ಕರೆದರೆ ಆನೆ, ಕಾಡೆಮ್ಮೆ ಕೂಡ ಬರಬಹುದು ಎನ್ನಿಸಿತು. ಅವುಗಳ ಸ್ವಾಭಾವಿಕ ಆಹಾರ ಪ್ರದೇಶಗಳನ್ನು ಈಗ ಲಂಟಾನಾ ಪೊದೆಗಳು ಆಕ್ರಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ