Advertisement

Tag: ಕೆಂಡಸಂಪಿಗೆ

ಹಿನ್ನೀರಿನಲ್ಲೊಂದು ಮುಂಜಾನೆ: ವಿನಾಯಕ ಅರಳಸುರಳಿ ಅಂಕಣ

ಇದೇ ಅಲೆಯ ಬುಡದಲ್ಲಿ ಒಂದು ಕಾಲದಲ್ಲಿ ಹಳ್ಳಿಯಿತ್ತು. ಗದ್ದೆಯಿತ್ತು. ಮನೆಯಿತ್ತು. ದನಕರುಗಳು ಓಡಾಡುತ್ತಿದ್ದವು. ಮನುಷ್ಯ ವಾಸವಾಗಿದ್ದ. ಅಲ್ಲೆಲ್ಲೋ ದೂರದಲ್ಲಿ ನದಿಯೊಂದರ ದಾರಿಯ ತಡೆದ ಕಾರಣಕ್ಕೆ ಇಲ್ಲಿ ಇವೆಲ್ಲವೂ ಮುಳುಗಿದವು. ಈ ನೀರಡಿಗೀಗ ಏನೇನಿರಬಹುದು? ಮುಳುಗಡೆಯಾಗುವ ಹೊತ್ತಿಗೆ ಎದ್ದು ಹೋದ ಮಗುವೊಂದು ಅರ್ಧಕ್ಕೇ ಆಡಿ ಬಿಟ್ಟ ಆಟಿಕೆಯಿರಬಹುದೇ? ರೈತನೊಬ್ಬ ನೂರಾರು ಕಟ್ಟು ಹುಲ್ಲು ಕೊಯ್ದಿರುವ ಕತ್ತಿಯಿರಬಹುದೇ? ಅಮ್ಮ ಒಬ್ಬಳು ನೂರಾರು ಬಾರಿ ಗಂಜಿ ಕಾಯಿಸಿರುವ ಪಾತ್ರೆಯಿರಬಹುದೇ? ಹಲವು ದೇವಸ್ಥಾನಗಳೂ ಇಲ್ಲಿ ಮುಳುಗಿ ಹೋಗಿವೆಯಂತೆ… ಇನ್ನಾದರೂ ಅಲ್ಲಿ ದೇವರಿರಬಹುದೇ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”

ನಾನು ಗುರುವೆಂದು ಭಾವಿಸಿದ ಫುಲೆ ದಂಪತಿಗಳು ಹೇಳಿದ್ದೂ ಇದೇ ಮಾತುಗಳನ್ನು. ಪುಟ್ಟ ಬಾಲಕಿಯರಿಂದ ಹಿಡಿದು, ಮದುವೆಯಾಗಿ ವಿಧವೆಯರಾದ ಹೆಣ್ಣುಗಳವರೆಗೆ ಎಲ್ಲರ ಕೈಯ್ಯಲ್ಲಿಯೂ ಅಕ್ಷರದ ದೀವಿಗೆಯನ್ನು ಹಿಡಿಸಬೇಕೆಂದು ಅವರು ಶ್ರಮಿಸಿದ ಮಾರ್ಗ ನನ್ನೆದುರು ತೆರೆದುಕೊಂಡಿತ್ತು. ಅವರು ಹುಟ್ಟುಹಾಕಿದ ಅರಿವಿನ ಸಸಿಯಿಂದು ಆರೈಕೆಯಿಲ್ಲದೇ ಸೊರಗಿ ಸಾಯುವ ಸ್ಥಿತಿಯಲ್ಲಿತ್ತು. ವಾಸ್ತವ ಸತ್ಯವನ್ನರಿಯಲು ನಾನು ರಾಜ್ಯದ ತುಂಬೆಲ್ಲ ಸಂಚರಿಸತೊಡಗಿದೆ.
ಸುಧಾ ಆಡುಕಳ ಬರೆದ ಕತೆ “ಆರೂವರೆ ಅಡಿಯ ಮನುಷ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನ್ಯಾಯದೇವತೆಯ ತಕ್ಕಡಿಯಲ್ಲಿ ಹೊಸ, ಹಳೆ ಅಹವಾಲು: ವಿನತೆ ಶರ್ಮ ಅಂಕಣ

ಇದೆಲ್ಲವನ್ನೂ ನೋಡುತ್ತಿರುವಾಗ ಇಗೋ ಜನವರಿ ೨೬ ಬರುತ್ತಿದೆ. ಅಂದು ಆಸ್ಟ್ರೇಲಿಯಾ ಡೇ – ಕ್ಯಾಪ್ಟನ್ ಜೇಮ್ಸ್ ಕುಕ್ ಸಿಡ್ನಿ ಸಮುದ್ರತೀರಕ್ಕೆ ಬಂದು, ಅವನ ಹಡಗು ಅಲ್ಲಿ ಲಂಗರು ಹಾಕಿ, ಓಹೋ ಈ ಜಾಗದಲ್ಲಿ ಯಾರೂ ಮನುಷ್ಯರು ಇಲ್ಲ, ಆದ್ದರಿಂದ ಇದು ತಮಗೆ ಸೇರಿದ್ದು, ಬ್ರಿಟಿಷರಿಗೆ ಸೇರಿದ ನಾಡು, ಎಂದು ಘೋಷಿತವಾದ ದಿನ. ಅಲ್ಲಿಂದ ಹೊಸ ಆಸ್ಟ್ರೇಲಿಯದ ಹುಟ್ಟು, ಬೆಳವಣಿಗೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಉನ್ನತ ವಿಜ್ಞಾನ ಶಿಕ್ಷಣದಲ್ಲಿ ಕನ್ನಡ ಭಾಷೆ: ಡಾ.ಎಲ್.ಜಿ.ಮೀರಾ ಅಂಕಣ

ಮಾತೃ಼ಭಾಷೆ/ಪ್ರಾದೇಶಿಕ ಭಾಷೆಯಲ್ಲಿನ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಈ ವಿಷಯದಲ್ಲಿ ಹೊಸ ಬಾಗಿಲುಗಳನ್ನು ತೆರೆಯುವ ಸಾಧ್ಯತೆಯನ್ನು ತೋರಿಸಿದೆ. ವಿಶ್ವೇಶ್ವರಯ್ಯ ತಂತ್ರಜ್ಞಾನ ವಿಶ್ವವಿದ್ಯಾಲಯ (ವಿಟಿಯು)ದ ಉಪಕುಲಪತಿಗಳಾದ ಡಾ.ಕರಿಸಿದ್ಧಪ್ಪನವರ ಮುಂಚೂಣಿಯಲ್ಲಿ ಯಂತ್ರಜ್ಞಾನಗಳ (ಇಂಜಿನಿಯರಿಂಗ್) ವಿಷಯಗಳಲ್ಲಿ ಕನ್ನಡ ವಿಜ್ಞಾನ ಬೋಧನೆಯ ಪ್ರಯತ್ನಗಳು ಪ್ರಾರಂಭವಾಗಿವೆ. ಇಲ್ಲಿನ ಮೊದಲನೆಯ ವರ್ಷದ ಯಂತ್ರಜ್ಞಾನ ಶಿಕ್ಷಣದ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕಗಳನ್ನು ಮುತುವರ್ಜಿ ವಹಿಸಿ ತಯಾರಿಸುತ್ತಿರುವುದು ಒಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಕ್ಷರಶಃ ದೀಪವಾರಿದ ಮೇಲಿ ನಿಂಕ ದೀಪದ ಮಲ್ಲಿಯಾದಳು ಶಕುಂತಲೆ. ಅಷ್ಟು ದುರ್ಬಲವೇ ನಮ್ಮ ಪ್ರೇಮ? ಯಾವುದೋ ವಸ್ತುವಿನ ಅವಶ್ಯಕತೆ ಅನಿವಾರ್ಯ ಆಗುವಷ್ಚು? ದಿಕ್ಕುತಪ್ಪಿದಳು, ಏಕಾಂಗಿಯಾದಳು.ಶಕುಂತಲೆಗೆ ದುಷ್ಯಂತನ ಪರಿಚಯವಿತ್ತು.ಸಂಧಿಸಿದ ಕೂಡಲೇ ತನ್ನ ಗುರುತು ಹಿಡಿಯುವನೆಂಬ ಅಪಾರ ಆತ್ಮವಿಶ್ವಾಸವೂ ಇತ್ತು. ಅದಕ್ಕಾಗಿಯೇ, ಅವಳಿಗೆ ದುಷ್ಯಂತ ಗುರುತಿಗಾಗಿಯೇ ಕೊಟ್ಟಿದ್ದ ಉಂಗುರವನ್ನು ಅವಳು ಅಷ್ಟೊಂದು ಮಹತ್ವದ್ದಾಗಿ ಪರಿಗಣಿಸಲೇ ಇಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಆರನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ