Advertisement

Tag: ಕೆಂಡಸಂಪಿಗೆ

ಕಥಾ ಗಾಳಕ್ಕೆ ಸಿಕ್ಕ ಮೀನು…: ಎಚ್. ಗೋಪಾಲಕೃಷ್ಣ ಸರಣಿ

ಆರ್ಥಿಕ ಸಂಪನ್ಮೂಲದ ವಿಷಯಕ್ಕೆ ಬಂದಾಗ ನಮ್ಮ ಕನಸುಗಳು ಯೋಜನೆಗಳು ಶ್ರಿಂಕ್ ಆಗುತ್ತಿದ್ದವು! ಒಂದು ವಾರದ ದೊಡ್ಡಮಟ್ಟದ ಕಾರ್ಯಕ್ರಮಗಳು ಕೆಲವು ಗಂಟೆಗಳಿಗೆ ಕುಗ್ಗುತ್ತಿದ್ದವು. ನಮ್ಮ ಬಜೆಟ್‌ಗೆ ನಿಲುಕುವಂತಹ ಸಭಾಭವನ ಅಂದರೆ ಆಗ ಮಲ್ಲೇಶ್ವರದ ಗಾಂಧಿ ಸಾಹಿತ್ಯ ಸಂಘದ ಹಾಲ್ ಒಂದೇ. ಇಪ್ಪತ್ತೈದು ರೂಪಾಯಿ ಅದರ ಬಾಡಿಗೆ. ಅದರಲ್ಲೇ ಎಲ್ಲವೂ ಅಂದರೆ ಮೈಕು, ಲೈಟು ಸೇರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೫ನೇ ಬರಹ ನಿಮ್ಮ ಓದಿಗೆ

Read More

ಕನ್ನಡ ಕಾವ್ಯದಲ್ಲಿ ಸಮಾಧಾನದ ಪ್ರಭು ಯೇಸುವಿನ ಆರಾಧನೆ: ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

ಯಾರು ಏನೇ ಅಂದರೂ ಯಾರು ಏನೇ ತಿಳಿದುಕೊಂಡರು ನಾವು ನಂಬಿರುವ ಪರಿಶುದ್ಧ ಮೌಲ್ಯಗಳೊಂದಿಗೆ ಜೀವಿಸಿದರೆ ಸಕಲವೂ ಸಾಧ್ಯ ಎಂಬುದನ್ನು ಮಹಾತ್ಮರು ತಿಳಿಸಿದ್ದಾರೆ. ಮೌಲ್ಯಗಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕುಸಿಯುತ್ತಿವೆ. ಅದನ್ನು ಹೇಗೆ ಕಾಪಾಡಿಕೊಳ್ಳಬೇಕು, ಸುಧಾರಿಸಿಕೊಳ್ಳಬೇಕು ಹೇಗೆ ಪುನರ್ ಸ್ಥಾಪಿಸಿಕೊಳ್ಳಬೇಕೆಂಬ ಗೊಂದಲದಲ್ಲಿದ್ದೇವೆ. ಮೌಲ್ಯಗಳು ಇಂದು ಬರಿ ಬಾಯಿ ಮಾತಾಗಿವೆ ಹೊರತು ಪ್ರಾಯೋಗಿಕವಾಗಿ ಮೌನವಾಗಿವೆ ಎಂಬ ಅಳಲು ಕವಿತೆಯದು.
ಕನ್ನಡ ಕಾವ್ಯದಲ್ಲಿ ಯೇಸುವಿನ ಕುರಿತ ಬರೆಯಲ್ಪಟ್ಟ ಕವಿತೆಗಳ ಕುರಿತು ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ

Read More

ಭಾವವಿರೇಚನಗೊಳಿಸುವ ದೃಶ್ಯಕಾವ್ಯ ‘ಬಂಧಮುಕ್ತ’: ಡಾ. ಪ್ರಭು ಗಂಜಿಹಾಳ ಬರಹ

`ಬಂಧಮುಕ್ತ’ ಚಿತ್ರ ಇಂದಿನ ಕಾಲಘಟ್ಟದಲ್ಲಿ ಯಾಕೆ ವಿಶೇಷವಾದದ್ದು ಎಂಬುದರ ಕುರಿತು ವಿವರಿಸುವುದಾದರೆ; ಮೊದಲನೇಯದಾಗಿ ಈ ಚಿತ್ರದ ಶೀರ್ಷಿಕೆಯೇ ಒಂದು ಸಕಾರಾತ್ಮಕ ಸಂದೇಶ ನೀಡುವಂತಹದು. ಮನುಷ್ಯ ಹುಟ್ಟಿನಿಂದ ಸಾವಿನವರೆಗೆ ಯಾವುದಾದರೊಂದು ಹಿಡಿತಕ್ಕೆ ಸಿಲುಕಿ ಅದರಿಂದ ಹೊರ ಬರಲು ಹೆಣಗಾಡುತ್ತಿರುತ್ತಾನೆ. ಸಾವು ಮಾತ್ರ ಮನುಷ್ಯನ ನಿಜವಾದ ಬಿಡುಗಡೆ ಎಂದು ಹೇಳಬಹುದಾದರೂ ಸಾವಿಗೂ ಮುನ್ನವೇ ಬಂಧನಗಳಿಂದ ಮುಕ್ತವಾಗುವ ಮನಸ್ಥಿತಿಯೇ ಬಿಡುಗಡೆಯ ಮಾರ್ಗ ಎಂದು ವಾಖ್ಯಾನಿಸಬಹುದು. ಇದು ಮನೋವಿಜ್ಞಾನ ಮತ್ತು ಆಧ್ಯಾತ್ಮಿಕ ತತ್ವವನ್ನು ತಿಳಿಸುವ ವಿಚಾರ.
ಕುಮಾರ ಬೇಂದ್ರೆ ನಿರ್ದೇಶನದ “ಬಂಧಮುಕ್ತ” ಸಿನಿಮಾದ ಕುರಿತು ಡಾ. ಪ್ರಭು ಗಂಜಿಹಾಳ ಬರಹ

Read More

ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಭೂತಾನಿಯ ಮಂದಿಯನ್ನು ನಮ್ಮ ಗೈಡ್ ತಂಡದ ಮೂಲಕ ಸಾರಂಶೀಕರಿಸಬಹುದು ಅಂತನ್ನಿಸುತ್ತದೆ. ನಿರಾಳ ಮುಖ; ಮೆದುಮಾತು; ಸ್ತೂಪ ಕಂಡಾಗೆಲ್ಲ ಮಣಮಣ ಎಂದು ಹೇಳಿಕೊಳ್ಳುವ ಪ್ರಾರ್ಥನೆ; ಅಪಾರವಾದ ರಾಜಪ್ರೇಮ; ನಮ್ಮ ಬ್ಯಾಗುಗಳನ್ನೆಲ್ಲ ಹೊತ್ತು ಸೂಕ್ಷ್ಮವಾಗಿ ಗಮನಿಸುತ್ತಲೇ ಹಿಂದೆಯಿಂದ ಬರುವ ಆದರೆ ಸ್ವಲ್ಪ ದಣಿವಾದರೂ ದುತ್ತನೆ ಎದುರಿಗೆ ಅವತರಿಸಿ, ‘ನೀರು ಬೇಕಾ? ತಿನ್ನಲು ಏನಾದರೂ ಬೇಕಾ?’ ಎಂದು ಕೇಳುವ ಕರುಣೆ ತುಂಬಿದ ಕಣ್ಣುಗಳು… ಇತ್ಯಾದಿ ವೃತ್ತಿಪರತೆಯನ್ನೂ ಮೀರಿದ ಜನಪ್ರೀತಿ ಅಂತನ್ನಿಸಿತ್ತು. ಹೇಳಿಕೇಳಿದ್ದೆಲ್ಲದಕ್ಕೂ, ‘ಓಕೆ ಲಾ…’ ಎಂದು ಹೇಳುವ ಲಲಲಾ ರೀತಿ ಭೂತಾನ್ ಬಿಟ್ಟರೂ ನಮ್ಮನ್ನು ಹಿಂಬಾಲಿಸಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎಂಟನೆಯ ಬರಹ

Read More

ಸುಂದರ ಕಾಡಿನ ರೋಚಕ ಕಥೆಗಳು-4: ರೂಪಾ ರವೀಂದ್ರ ಜೋಶಿ ಸರಣಿ

ಇನ್ನೊಂದು ಎಂಟು ಹತ್ತು ಮಾರು ದೂರ ಸಾಗಿದರೆ, ಆ ದಾರಿ ಸಿಗುತ್ತಿತ್ತು. ನಾನು ರಸ್ತೆಗುಂಟ ಓಡುತ್ತ ಬರುತ್ತಿದ್ದೆ. ಮಬ್ಬುಗತ್ತಲು ಬೇರೆ. ಸುಮಾರು ನಾಲ್ಕುಮಾರು ದೂರದಲ್ಲಿ, ರಸ್ತೆಯ ನಡುವೆ ಒಂದು ಕಪ್ಪು ಆಕಾರ ಕೆಟ್ಟರೂಪದಲ್ಲಿ ಕೂಗುತ್ತ ಇಷ್ಟೆತ್ತರ ಎದ್ದು ನಿಂತಿತು. ಅದು ಕರಡಿ ಎಂದು ಒಂದು ಅಂದಾಜಿನಲ್ಲಿ ನಾನು ಗುರುತಿಸಿ, ನಡುಗಿ ಹೋದೆ. ಒಂದು ಕ್ಷಣ ಏನೂ ಮಾಡಲೂ ತೋಚಲಿಲ್ಲ. ನನ್ನ ಎಡಕ್ಕೆ ಒಂದು ಚಿಕ್ಕ ಕಾಲುದಾರಿ ಕಂಡಿತು. ಅದು ನಮ್ಮನೆಗೆ ಹೋಗುವ ದಾರಿ ಅಲ್ಲವೆಂದು ಗೊತ್ತಿದ್ದರೂ ಅನಿವಾರ್ಯವಾಗಿ ಅದೇ ದಾರಿ ಹಿಡಿದು ಓಡತೊಡಗಿದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ