Advertisement

Tag: ಕೆಂಡಸಂಪಿಗೆ

ಗುರು ಮತ್ತು ಹಕ್ಕಿಗೂಡು: ಸುಕನ್ಯಾ ಕನಾರಳ್ಳಿ ಅಂಕಣ

ಗಾಂಧೀಜಿ ಒಮ್ಮೆ ಯರವಾಡ ಜೈಲಿನಲ್ಲಿದ್ದಾಗ ಒಂದು ರಾತ್ರಿ ಬರಿಯ ದುಃಸ್ವಪ್ನಗಳೇ ಬಿದ್ದು ಬೆಚ್ಚಿದ್ದಾಗ ವಿಚಾರಿಸಿದರಂತೆ. ಹಿಂದಿನ ರಾತ್ರಿಯ ಅಡಿಗೆಯನ್ನು ಒಬ್ಬ ಕೊಲೆಗಡುಕ ಅಪರಾಧಿ ಮಾಡಿದ್ದಾನೆಂದು ತಿಳಿದು ಅಂದಿನಿಂದ ರಾತ್ರಿಯ ಊಟವನ್ನೇ ಬಿಟ್ಟರಂತೆ. ನಮ್ಮ ಸೂಕ್ಷ್ಮ ಶರೀರದ ಚೈತನ್ಯ ಇನ್ನೊಬ್ಬರಿಗೂ ಅನುಭವಕ್ಕೆ ಬರುತ್ತದೆ ಎಂದು ಅರಿವಾಗುವುದು ಬ್ರಹ್ಮವಿದ್ಯೆಯೇನೂ ಅಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಸುಂದರ ಕಾಡಿನ ರೋ‌ಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ

ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು

Read More

ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ

ಇದರೊಳಗೆ ಒಂದು ತಮಾಷೆಯೆಂದರೆ ಪಾತ್ರದ ಜತೆಗೆ ನಟನೂ ಇರುತ್ತಾನೆ. ಪರಸ್ಪರ ಒಬ್ಬರಿಗೊಬ್ಬರನ್ನು ಕಂಡರೆ ಆಗದ ನಟರು ರಂಗದ ಮೇಲೆ ಪ್ರೇಮಿಸುತ್ತಾರೆ‌. ಪ್ರೀತಿಸಿದ ಹುಡುಗಿ ಅಜ್ಜಿಯೋ, ಸನ್ಯಾಸಿಯೋ ಆಗಿಬಿಟ್ಟಿರುತ್ತಾಳೆ. ಪ್ರೀತಿಸಿದ ನಟ ಇನ್ನೊಬ್ಬಳೊಂದಿಗೆ ಡಾನ್ಸ್ ಮಾಡ್ತಿರೋದನ್ನ ಅವನ ಪ್ರೇಯಸಿ ಸೈಡ್ ವಿಂಗಿನಲ್ಲಿ ಕೂತು.. ‘ಇದು ನಾಟಕ ಇದು ನಾಟಕ’ ಅಂತ ತನ್ನನ್ನೇ ಸಮಾಧಾನಪಡಿಸಿಕೊಳ್ಳುತ್ತಾಳೆ. ಹೀಗೆ ರಂಗದ ಮೇಲೆ ನಡೆಯುವ ನಾಟಕಕ್ಕಿಂತ ಹೆಚ್ಚು ರೋಚಕವಾದ ಅನೇಕ ನಾಟಕಗಳು ಈ ಪ್ರಕ್ರಿಯೆಯಲ್ಲಿ ನಡೆಯುತ್ತಲೇ ಇರುತ್ತದೆ. ಕಲಾಲೋಕದ ಕುರಿತು ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಉಳಿದು ಹೋಗುವುದೆಂದರೆ… ವಿನಾಯಕ ಅರಳಸುರಳಿ ಅಂಕಣ

ಮುಂದಿನ ಕೆಲ ವರ್ಷಗಳ ಕಾಲ ಆ ಪತ್ರ ಹಾಗೆಯೇ ಇಲ್ಲದ ಅಜ್ಜನ ಹೆಸರನ್ನು ವಿಳಾಸವಾಗಿಸಿಕೊಂಡು ಬಂದು ನಮಗೆಲ್ಲ ಶುಭಾಶಯ ಹೇಳುತ್ತಿತ್ತು. ಕೊನೆಗೊಂದು ದಿನ ಯಾರಿಂದಲೋ ಗೊತ್ತಾದ ವಿಷಯವೇನೆಂದರೆ ಆ ಪತ್ರದ ಬುಡದಲ್ಲಿ ‘ಶುಭಕೋರುವವರು – ABC ಆಚಾರ್’ ಎಂದು ಬರೆದಿರುತ್ತಿದ್ದ, ಅಜ್ಜ ಹೇಳುತ್ತಿದ್ದ ಆಚಾರ್ ಇದ್ದರಲ್ಲ, ಅವರೂ ತೀರಿಹೋಗಿ ಕೆಲ ವರ್ಷಗಳೇ ಆಗಿದ್ದವು! ಅವರ ಮಗನೇ ಅವರ ಹೆಸರಿನಲ್ಲಿ ಈ ಶುಭಾಶಯ ಪತ್ರವನ್ನು ಗ್ರಾಹಕರಿಗೆ ಕಳಿಸುತ್ತಿದ್ದ! ಹೇಗೆ ಅವರ ದೃಷ್ಟಿಯಲ್ಲಿ ತೀರಿಹೋದ ಬಳಿಕವೂ ಅಜ್ಜ ಜೀವಂತವಾಗಿದ್ದನೋ ಹಾಗೇ ನಮ್ಮೆಲ್ಲರ ದೃಷ್ಟಿಯಲ್ಲಿ ಆಚಾರರೂ ಜೀವಂತವಾಗಿದ್ದರು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ